AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR ಸೋಲುತ್ತಿದ್ದಂತೆ ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ: ವಿಡಿಯೋ ವೈರಲ್

IPL 2026 KKR vs RR: ಐಪಿಎಲ್​ನ 28ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ 155 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 19.4 ಓವರ್​ಗಳಲ್ಲಿ 161 ರನ್​ ಬಾರಿಸಿ 4 ವಿಕೆಟ್​ಗಳ ಜಯ ಸಾಧಿಸಿದೆ.

RR ಸೋಲುತ್ತಿದ್ದಂತೆ ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ: ವಿಡಿಯೋ ವೈರಲ್
Vaibhav Sooryavanshi
ಝಾಹಿರ್ ಯೂಸುಫ್
|

Updated on: Apr 20, 2026 | 11:07 AM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 29ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಎಲ್ಲರ  ಕಣ್ಣು ನೆಟ್ಟಿದ್ದು 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಮೇಲೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ 155 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಕೆಕೆಆರ್ 19.4 ಓವರ್​ಗಳಲ್ಲಿ 161 ರನ್​ಗಳಿಸಿ 4 ವಿಕೆಟ್​ಗಳ ಜಯ ಸಾಧಿಸಿತು.

ಅತ್ತ ಕೆಕೆಆರ್ ಆಟಗಾರರು ಗೆದ್ದ ಖುಷಿಯಲ್ಲಿದ್ದರೆ, ಇತ್ತ ಸೋತ ನೋವಿನಲ್ಲಿ ವೈಭವ್ ಸೂರ್ಯವಂಶಿ ಭಾವುಕರಾಗಿ ಕಣ್ಣೀರಿಟ್ಟರು. ಇದೀಗ ಯುವ ಆಟಗಾರ ಕಣ್ಣೀರಿಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳ ಮನ ಮಿಡಿಯುವಂತೆ ಮಾಡಿದೆ.

ಅಬ್ಬರದ ಆರಂಭ, ಆಘಾತಕಾರಿ ಅಂತ್ಯ:

ಈ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಕೇವಲ 28 ಎಸೆತಗಳಲ್ಲಿ 46 ರನ್ ಬಾರಿಸಿ ರಾಜಸ್ಥಾನ್ ರಾಯಲ್ಸ್​ ತಂಡಕ್ಕೆ ಸ್ಫೋಟಕ ಆರಂಭ ನೀಡಿದ್ದರು. ಅವರ ಬ್ಯಾಟಿಂಗ್‌ನಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್‌ಗಳಿದ್ದವು. ಆದರೆ, ವರುಣ್ ಚಕ್ರವರ್ತಿ ಎಸೆದ 9ನೇ ಓವರ್‌ನಲ್ಲಿ ದೊಡ್ಡ ಹೊಡೆತಕ್ಕೆ ಕೈಹಾಕಿ ಔಟ್ ಆಗಿದ್ದು ಪಂದ್ಯದ ಲಯವನ್ನೇ ಬದಲಿಸಿತು.

ವೈಭವ್ ಸೂರ್ಯವಂಶಿ ಔಟಾಗುತ್ತಿದ್ದಂತೆ ಆರ್​ಆರ್ ತಂಡ ರನ್​ ಗತಿ ಇಳಿಕೆಯಾಯಿತು. ಇದರ ಜೊತೆಗೆ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ವೈಫಲ್ಯ ಅನುಭವಿಸಿದರು. ಪರಿಣಾಮ ಆರ್​ಆರ್ 20 ಓವರ್​ಗಳಲ್ಲಿ 155 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿತು.

ಗೆಲ್ಲುವ ಅವಕಾಶ ಕೈ ಚೆಲ್ಲಿದ ಆರ್​ಆರ್:

ಅಲ್ಪ ಮೊತ್ತವನ್ನು ಕಲೆಹಾಕಿದ್ದರೂ ರಾಜಸ್ಥಾನ್ ರಾಯಲ್ಸ್ ತಂಡದ ಬೌಲರ್​ಗಳು ಅತ್ಯುತ್ತಮ ದಾಳಿ ಸಂಘಟಿಸಿದ್ದರು. ಪರಿಣಾಮ ಕೆಕೆಆರ್ ತಂಡಕ್ಕೆ ಕೊನೆಯ ಮೂರು ಓವರ್​ಗಳಲ್ಲಿ 28 ರನ್​ಗಳು ಬೇಕಿದ್ದವು. 18ನೇ ಓವರ್​ ಎಸೆದ ಬ್ರಿಜೇಶ್ ನೀಡಿದ್ದು ಕೇವಲ 7 ರನ್​ಗಳು ಮಾತ್ರ.

ಇನ್ನು 19ನೇ ಓವರ್​ನಲ್ಲಿ ಜೋಫ್ರಾ ಆರ್ಚರ್ 12 ರನ್ ಬಿಟ್ಟು ಕೊಟ್ಟರು. ಇದಾಗ್ಯೂ ಕೊನೆಯ ಓವರ್​ನಲ್ಲಿ 9 ರನ್​ಗಳು ಬೇಕಿದ್ದವು. ಈ ವೇಳೆ ದಾಳಿಗಿಳಿದ ಬ್ರಿಜೇಶ್ ಶರ್ಮಾ 4, 4, 6 ಹೊಡೆಸಿಕೊಳ್ಳುವ ಮೂಲಕ ಪಂದ್ಯವನ್ನು ಕೈಚೆಲ್ಲಿಕೊಂಡರು.

ಇದನ್ನೂ ಓದಿ: ಸಿಕ್ಸರ್‌ಗಳ ಸುರಿಮಳೆಗೆ ಕಾರಣವಾಯ್ತು ಶ್ರೇಯಸ್ ಅಯ್ಯರ್ ಅವರ ಆ ಒಂದು ಸವಾಲು!

ಭಾವುಕರಾದ ವೈಭವ್:

ರಾಜಸ್ಥಾನ್ ರಾಯಲ್ಸ್ ತಂಡವು ಕೊನೆಯ ಓವರ್​ನಲ್ಲಿ ಸೋಲುತ್ತಿದ್ದಂತೆ ಭಾವುಕರಾದ ವೈಭವ್ ಸೂರ್ಯವಂಶಿ ಮೈದಾನದ ಹೊರಕ್ಕೆ ಬಂದು ಕೂತು ಕಣ್ಣೀರಿಟ್ಟರು. ಹೀಗೆ ವೈಭವ್ ಅಳುತ್ತಿರುವುದನ್ನು ಕಂಡ ಆರ್​ಆರ್ ಮತ್ತು ಕೆಕೆಆರ್ ಆಟಗಾರರು ಯುವ ದಾಂಡಿಗನನ್ನು ಸಂತೈಸಿದರು. ಇದೀಗ ವೈಭವ್ ಸೂರ್ಯವಂಶಿ ಅಳುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More