AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR ಸೋಲುತ್ತಿದ್ದಂತೆ ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ: ವಿಡಿಯೋ ವೈರಲ್

IPL 2026 KKR vs RR: ಐಪಿಎಲ್​ನ 28ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ 155 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 19.4 ಓವರ್​ಗಳಲ್ಲಿ 161 ರನ್​ ಬಾರಿಸಿ 4 ವಿಕೆಟ್​ಗಳ ಜಯ ಸಾಧಿಸಿದೆ.

RR ಸೋಲುತ್ತಿದ್ದಂತೆ ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ: ವಿಡಿಯೋ ವೈರಲ್
Vaibhav Sooryavanshi
ಝಾಹಿರ್ ಯೂಸುಫ್
|

Updated on: Apr 20, 2026 | 11:07 AM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 29ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಎಲ್ಲರ  ಕಣ್ಣು ನೆಟ್ಟಿದ್ದು 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಮೇಲೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ 155 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಕೆಕೆಆರ್ 19.4 ಓವರ್​ಗಳಲ್ಲಿ 161 ರನ್​ಗಳಿಸಿ 4 ವಿಕೆಟ್​ಗಳ ಜಯ ಸಾಧಿಸಿತು.

ಅತ್ತ ಕೆಕೆಆರ್ ಆಟಗಾರರು ಗೆದ್ದ ಖುಷಿಯಲ್ಲಿದ್ದರೆ, ಇತ್ತ ಸೋತ ನೋವಿನಲ್ಲಿ ವೈಭವ್ ಸೂರ್ಯವಂಶಿ ಭಾವುಕರಾಗಿ ಕಣ್ಣೀರಿಟ್ಟರು. ಇದೀಗ ಯುವ ಆಟಗಾರ ಕಣ್ಣೀರಿಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳ ಮನ ಮಿಡಿಯುವಂತೆ ಮಾಡಿದೆ.

ಅಬ್ಬರದ ಆರಂಭ, ಆಘಾತಕಾರಿ ಅಂತ್ಯ:

ಈ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಕೇವಲ 28 ಎಸೆತಗಳಲ್ಲಿ 46 ರನ್ ಬಾರಿಸಿ ರಾಜಸ್ಥಾನ್ ರಾಯಲ್ಸ್​ ತಂಡಕ್ಕೆ ಸ್ಫೋಟಕ ಆರಂಭ ನೀಡಿದ್ದರು. ಅವರ ಬ್ಯಾಟಿಂಗ್‌ನಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್‌ಗಳಿದ್ದವು. ಆದರೆ, ವರುಣ್ ಚಕ್ರವರ್ತಿ ಎಸೆದ 9ನೇ ಓವರ್‌ನಲ್ಲಿ ದೊಡ್ಡ ಹೊಡೆತಕ್ಕೆ ಕೈಹಾಕಿ ಔಟ್ ಆಗಿದ್ದು ಪಂದ್ಯದ ಲಯವನ್ನೇ ಬದಲಿಸಿತು.

ವೈಭವ್ ಸೂರ್ಯವಂಶಿ ಔಟಾಗುತ್ತಿದ್ದಂತೆ ಆರ್​ಆರ್ ತಂಡ ರನ್​ ಗತಿ ಇಳಿಕೆಯಾಯಿತು. ಇದರ ಜೊತೆಗೆ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ವೈಫಲ್ಯ ಅನುಭವಿಸಿದರು. ಪರಿಣಾಮ ಆರ್​ಆರ್ 20 ಓವರ್​ಗಳಲ್ಲಿ 155 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿತು.

ಗೆಲ್ಲುವ ಅವಕಾಶ ಕೈ ಚೆಲ್ಲಿದ ಆರ್​ಆರ್:

ಅಲ್ಪ ಮೊತ್ತವನ್ನು ಕಲೆಹಾಕಿದ್ದರೂ ರಾಜಸ್ಥಾನ್ ರಾಯಲ್ಸ್ ತಂಡದ ಬೌಲರ್​ಗಳು ಅತ್ಯುತ್ತಮ ದಾಳಿ ಸಂಘಟಿಸಿದ್ದರು. ಪರಿಣಾಮ ಕೆಕೆಆರ್ ತಂಡಕ್ಕೆ ಕೊನೆಯ ಮೂರು ಓವರ್​ಗಳಲ್ಲಿ 28 ರನ್​ಗಳು ಬೇಕಿದ್ದವು. 18ನೇ ಓವರ್​ ಎಸೆದ ಬ್ರಿಜೇಶ್ ನೀಡಿದ್ದು ಕೇವಲ 7 ರನ್​ಗಳು ಮಾತ್ರ.

ಇನ್ನು 19ನೇ ಓವರ್​ನಲ್ಲಿ ಜೋಫ್ರಾ ಆರ್ಚರ್ 12 ರನ್ ಬಿಟ್ಟು ಕೊಟ್ಟರು. ಇದಾಗ್ಯೂ ಕೊನೆಯ ಓವರ್​ನಲ್ಲಿ 9 ರನ್​ಗಳು ಬೇಕಿದ್ದವು. ಈ ವೇಳೆ ದಾಳಿಗಿಳಿದ ಬ್ರಿಜೇಶ್ ಶರ್ಮಾ 4, 4, 6 ಹೊಡೆಸಿಕೊಳ್ಳುವ ಮೂಲಕ ಪಂದ್ಯವನ್ನು ಕೈಚೆಲ್ಲಿಕೊಂಡರು.

ಇದನ್ನೂ ಓದಿ: ಸಿಕ್ಸರ್‌ಗಳ ಸುರಿಮಳೆಗೆ ಕಾರಣವಾಯ್ತು ಶ್ರೇಯಸ್ ಅಯ್ಯರ್ ಅವರ ಆ ಒಂದು ಸವಾಲು!

ಭಾವುಕರಾದ ವೈಭವ್:

ರಾಜಸ್ಥಾನ್ ರಾಯಲ್ಸ್ ತಂಡವು ಕೊನೆಯ ಓವರ್​ನಲ್ಲಿ ಸೋಲುತ್ತಿದ್ದಂತೆ ಭಾವುಕರಾದ ವೈಭವ್ ಸೂರ್ಯವಂಶಿ ಮೈದಾನದ ಹೊರಕ್ಕೆ ಬಂದು ಕೂತು ಕಣ್ಣೀರಿಟ್ಟರು. ಹೀಗೆ ವೈಭವ್ ಅಳುತ್ತಿರುವುದನ್ನು ಕಂಡ ಆರ್​ಆರ್ ಮತ್ತು ಕೆಕೆಆರ್ ಆಟಗಾರರು ಯುವ ದಾಂಡಿಗನನ್ನು ಸಂತೈಸಿದರು. ಇದೀಗ ವೈಭವ್ ಸೂರ್ಯವಂಶಿ ಅಳುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Follow Us