AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಆರ್​​ಸಿಬಿ ವಿರುದ್ಧ ಸೇಡಿನ ಸಮರಕ್ಕೆ ಸಜ್ಜಾದ ವೈಭವ್ ಸೂರ್ಯವಂಶಿ

Vaibhav Suryavanshi vs RCB IPL 2026: 15ರ ಹರೆಯದ ಯುವ ಕ್ರಿಕೆಟ್ ಸಂವೇದನೆ ವೈಭವ್ ಸೂರ್ಯವಂಶಿ, IPL 2026ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಮಿಂಚುತ್ತಿದ್ದಾರೆ. ಮೂರು ಪಂದ್ಯಗಳಲ್ಲಿ 122 ರನ್ ಗಳಿಸಿ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಕಳೆದ ಆವೃತ್ತಿಯಲ್ಲಿ RCB ವಿರುದ್ಧ ಉತ್ತಮ ಪ್ರದರ್ಶನ ನೀಡಲು ವಿಫಲರಾಗಿದ್ದ ವೈಭವ್, ಈ ಬಾರಿ ಅದೇ ಆರ್​ಸಿಬಿ ವಿರುದ್ಧ ಗುರಿ ಸಾಧಿಸಲು ಸಜ್ಜಾಗಿದ್ದಾರೆ. ಬೌಂಡರಿ ಮತ್ತು ಸಿಕ್ಸರ್‌ಗಳ ಮೂಲಕ ಹಳೆಯ ವೈಫಲ್ಯಕ್ಕೆ ಪ್ರತಿಕಾರ ತೀರಿಸಿಕೊಳ್ಳುವ ತವಕದಲ್ಲಿದ್ದಾರೆ.

IPL 2026: ಆರ್​​ಸಿಬಿ ವಿರುದ್ಧ ಸೇಡಿನ ಸಮರಕ್ಕೆ ಸಜ್ಜಾದ ವೈಭವ್ ಸೂರ್ಯವಂಶಿ
Vaibhav Suryavanshi
ಪೃಥ್ವಿಶಂಕರ
|

Updated on: Apr 10, 2026 | 3:15 PM

Share

ವೈಭವ್ ಸೂರ್ಯವಂಶಿ (Vaibhav Suryavanshi).. ಪ್ರಸ್ತುತ ಕ್ರಿಕೆಟ್ ಲೋಕದಲ್ಲಿ ಓಡುತ್ತಿರುವ ಕುದುರೆ. ತನ್ನ ಪ್ರತಿಭೆಯಿಂದ ಕೇವಲ 15ನೇ ವಯಸ್ಸಿನಲ್ಲೇ ವಿಶ್ವ ಕ್ರಿಕೆಟ್​ನ ಮನೆಮಾತಾಗಿರುವ ಈ ಪೋರ ಪ್ರಸ್ತುತ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್‌ನಲ್ಲಿ (IPL) ರಾಜಸ್ಥಾನ್ ರಾಯಲ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಕಳೆದ ಆವೃತ್ತಿಯಲ್ಲೇ ರಾಜಸ್ಥಾನ್ ಪರ ಐಪಿಎಲ್‌ನಲ್ಲಿ ಅಬ್ಬರಿಸಿದ್ದ ವೈಭವ್, ಇದೀಗ ತನ್ನ ಹಳೆಯ ಆಟವನ್ನು ಈ ಆವೃತ್ತಿಯಲ್ಲೂ ಮುಂದುವರೆಸಿದ್ದಾರೆ. ಬಲಿಷ್ಠ ತಂಡಗಳೆದುರು ಅದರಲ್ಲೂ ಸ್ಟಾರ್ ಬೌಲರ್​ಗಳ ಎದುರು ವೈಭವ್ ಅವರ ನಿರ್ಭೀತಿಯ ಆಟ ಪ್ರೇಕ್ಷಕರನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದೆ. ಇದೀಗ ಅದೇ ವೈಭವ್ ಸೂರ್ಯವಂಶಿ ಆರ್​ಸಿಬಿ (RCB) ವಿರುದ್ಧ ತನ್ನ ಹಳೆಯ ಸೇಡನ್ನು ತೀರಿಸಿಕೊಳ್ಳುವ ಇರಾದೆಯಲ್ಲಿದ್ದಾರೆ.

351 ದಿನಗಳ ಹಿಂದಿನ ಸೇಡು

ಪ್ರಸ್ತುತ ಅದ್ಭುತ ಫಾರ್ಮ್​ನಲ್ಲಿರುವ ವೈಭವ್ ಐಪಿಎಲ್ 2026 ರ ಮೊದಲ ಮೂರು ಪಂದ್ಯಗಳಲ್ಲಿ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆ ಸುರಿಸಿ, ಎಲ್ಲಾ ತಂಡಗಳಿಗೆ ಎಚ್ಚರಿಕೆ ನೀಡಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಂತರ, ವೈಭವ್ ಈಗ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಅಬ್ಬರಿಸಲು ಸಜ್ಜಾಗಿದ್ದು, 351 ದಿನಗಳ ಹಿಂದಿನ ಸೇಡಿಗೆ ಪ್ರತಿಕಾರ ತೀರಿಸಿಕೊಳ್ಳುವ ತವಕದಲ್ಲಿದ್ದಾರೆ.

ಮುಂದಿನ ಟಾರ್ಗೆಟ್ ಆರ್​ಸಿಬಿ

ಮೇಲೆ ಹೇಳಿದಂತೆ ಐಪಿಎಲ್ 2026 ರ 16 ನೇ ಪಂದ್ಯವು ರಾಜಸ್ಥಾನ್ ರಾಯಲ್ಸ್ ಮತ್ತು ಬೆಂಗಳೂರು ರಾಯಲ್ಸ್ ನಡುವೆ ನಡೆಯಲಿದೆ. ಗುವಾಹಟಿಯಲ್ಲಿ ನಡೆಯಲಿರುವ ಈ ಪಂದ್ಯ ವೈಭವ್ ಸೂರ್ಯವಂಶಿ ಅವರಿಗೆ ತುಂಬಾ ವಿಶೇಷವಾಗಿದೆ. ಏಕೆಂದರೆ ಕಳೆದ ಆವೃತ್ತಿಯಲ್ಲಿ ಇದೇ ಆರ್​ಸಿಬಿ ವಿರುದ್ಧ ವೈಭವ್ ಸೂರ್ಯವಂಶಿಗೆ ಮುಕ್ತವಾಗಿ ರನ್​ ಗಳಿಸಲು ಆಗಿರಲಿಲ್ಲ. ಹೀಗಾಗಿ ಆ ಹಿಂದಿನ ವೈಫಲ್ಯವನ್ನು ಈ ಪಂದ್ಯದಲ್ಲಿ ಸರಿದೂಗಿಸುವತ್ತ ಸೂರ್ಯವಂಶಿ ಚಿತ್ತವಿದೆ. ಇದಕ್ಕೆ ಪೂರಕವಾಗಿ ಕಳೆದ ಆವೃತ್ತಿಯಲ್ಲಿ ಮುಂಬೈ ವಿರುದ್ಧ ರನ್ ಗಳಿಸಲು ವಿಫಲರಾಗಿದ್ದ ವೈಭವ್, ಈ ಆವೃತ್ತಿಯಲ್ಲಿ ಅಬ್ಬರಿಸಿದ್ದರು. ಕೇವಲ 14 ಎಸೆತಗಳಲ್ಲಿ 39 ರನ್ ಗಳಿಸಿದರು. ಹೀಗಾಗಿ ಇದೀಗ ಆರ್​ಸಿಬಿ ವಿರುದ್ಧ ವೈಭವ್ ಯಾವ ರೀತಿಯ ಪ್ರದರ್ಶನ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಕಳೆದ ಆವೃತ್ತಿಯಲ್ಲಿ ಏಪ್ರಿಲ್ 24 ರಂದು, ಆರ್​ಸಿಬಿ ಮತ್ತು ರಾಜಸ್ಥಾನ ತಂಡಗಳು ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ವೈಭವ್ ರಾಜಸ್ಥಾನ್ ತಂಡದ ಭಾಗವಾಗಿದ್ದರು. 206 ರನ್‌ಗಳ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ್ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ವೈಭವ್, ಎರಡು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಉತ್ತಮ ಆರಂಭವನ್ನು ಪಡೆದರು, ಆದರೆ ನಂತರ 12 ಎಸೆತಗಳಲ್ಲಿ 16 ರನ್‌ಗಳಿಸಿ ಔಟಾದರು. ಅವರನ್ನು ಅನುಭವಿ ವೇಗಿ ಭುವನೇಶ್ವರ ಕುಮಾರ್ ಔಟ್ ಮಾಡಿದ್ದರು.

CSK vs RR: 15 ವರ್ಷದ ವೈಭವ್ ಸೂರ್ಯವಂಶಿ ಸುನಾಮಿಗೆ ಕೊಚ್ಚಿ ಹೋದ ಸಿಎಸ್​ಕೆ

ವೈಭವ್ ಪ್ರದರ್ಶನ

ಈ ಆವೃತ್ತಿಯ ವೈಭವ್ ಪ್ರತಿ ಪಂದ್ಯದಲ್ಲೂ ಸ್ಫೋಟಕ ಇನ್ನಿಂಗ್ಸ್ ಆಡಿದ್ದಾರೆ. ಈ ಮೂಲಕ ತಂಡದ ಸತತ ಮೂರು ಗೆಲುವುಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ವೈಭವ್ ಇದುವರೆಗೆ ಮೂರು ಇನ್ನಿಂಗ್ಸ್‌ಗಳಲ್ಲಿ 122 ರನ್ ಗಳಿಸಿದ್ದಾರೆ, ಅವರ ಗರಿಷ್ಠ ಸ್ಕೋರ್ 52 ರನ್​ ಆಗಿದೆ. ಇದರಲ್ಲಿ 11 ಸಿಕ್ಸರ್ ಮತ್ತು 10 ಬೌಂಡರಿಗಳು ಸೇರಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?