AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಶಾಲೆಯತ್ತ ಮುಖ ಮಾಡಿದ ವೈಭವ್ ಸೂರ್ಯವಂಶಿ

Vaibhav Suryavanshi: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 1.10 ಕೋಟಿ ರೂ. ಸಂಭಾವನೆ ಪಡೆಯುತ್ತಿರುವ ವೈಭವ್ ಸೂರ್ಯವಂಶಿ ಮತ್ತೆ ಶಾಲೆಯತ್ತ ಮುಖ ಮಾಡಿದ್ದಾರೆ. ಈ ಬಾರಿ ಅವರು ಶಾಲೆಗೆ ಹೋಗುತ್ತಿರುವುದು 10ನೇ ತರಗತಿ ಪರೀಕ್ಷೆ ಬರೆಯಲು ಎಂಬುದು ವಿಶೇಷ. ಈ ಪರೀಕ್ಷೆಯ ಬಳಿಕ ಅವರು ಐಪಿಎಲ್​ಗಾಗಿ ಸಜ್ಜಾಗಲಿದ್ದಾರೆ.

ಮತ್ತೆ ಶಾಲೆಯತ್ತ ಮುಖ ಮಾಡಿದ ವೈಭವ್ ಸೂರ್ಯವಂಶಿ
Vaibhav Suryavanshi
ಝಾಹಿರ್ ಯೂಸುಫ್
|

Updated on:Feb 14, 2026 | 12:03 PM

Share

ಟೀಮ್ ಇಂಡಿಯಾದ ಯಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಮತ್ತೆ ಶಾಲೆಯತ್ತ ಮುಖ ಮಾಡಿದ್ದಾರೆ. ಅದು ಸಹ 14 ವಯಸ್ಸಿನೊಳಗೆ 3 ಭರ್ಜರಿ ಟಿ20 ಶತಕ, 4 ಏಕದಿನ ಶತಕ, ಒಂದು ಟೆಸ್ಟ್ ಸೆಂಚುರಿ ಸಿಡಿಸಿದ ಬಳಿಕ ಎಂಬುದು ವಿಶೇಷ. ಆದರೆ ಈ ಬಾರಿ ವೈಭವ್ ಶಾಲೆಗೆ ಹೋಗುತ್ತಿರುವುದು ಪರೀಕ್ಷೆ ಬರೆಯಲು.

2026ರ ಐಸಿಸಿ ಅಂಡರ್-19 ವಿಶ್ವಕಪ್ ಗೆದ್ದು ವಿಶ್ರಾಂತಿಯಲ್ಲಿದ್ದ ವೈಭವ್ ಸೂರ್ಯವಂಶಿ ಈಗ ತಮ್ಮ ಶೈಕ್ಷಣಿಕ ಪರೀಕ್ಷೆಗೆ ಸಜ್ಜಾಗಿದ್ದಾರೆ. ಫೆಬ್ರವರಿ 17, 2026 ರಿಂದ ಆರಂಭವಾಗಲಿರುವ CBSE 10ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಬರೆಯಲು ವೈಭವ್ ಹಾಲ್ ಟಿಕೆಟ್ ಪಡೆದುಕೊಂಡಿದ್ದಾರೆ.

ಬಿಹಾರದ ಸಮಸ್ತಿಪುರದ ಪೋಡಾರ್ ಇಂಟರ್ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಯಾಗಿರುವ ವೈಭವ್ ಸೂರ್ಯವಂಶಿ ಫೆಬ್ರವರಿ 17 ರಿಂದ ಪರೀಕ್ಷೆಗೆ ಹಾಜರಾಗಲಿದ್ದಾರೆ.

ವಿಶ್ವಕಪ್ ಹೀರೊ ಆಗಿದ್ದರೂ ಸಹ, ಶಾಲಾ ನಿಯಮದಂತೆ ಅವರಿಗೆ ಯಾವುದೇ ವಿಶೇಷ ಸೌಲಭ್ಯ ನೀಡದೆ ಸಾಮಾನ್ಯ ವಿದ್ಯಾರ್ಥಿಯಂತೆಯೇ ಪರೀಕ್ಷೆ ನಡೆಸಲಾಗುವುದು ಎಂದು ಶಾಲಾ ಪ್ರಾಂಶುಪಾಲರು ತಿಳಿಸಿದ್ದಾರೆ.

ವೈಭವ್ ಸೂರ್ಯವಂಶಿ ಒಟ್ಟು 5 ಪರೀಕ್ಷೆ ಬರೆಯಲಿದ್ದಾರೆ ಎಂದು ವರದಿಯಾಗಿದೆ. ಈ ಪರೀಕ್ಷೆಗಳ ವಿವರಗಳು ಈ ಕೆಳಗಿನಂತಿದೆ…

  • ಭಾಷೆ I: ಇಂಗ್ಲಿಷ್ (ಸಂವಹನ ಅಥವಾ ಭಾಷೆ ಮತ್ತು ಸಾಹಿತ್ಯ).
  • ಭಾಷೆ II: ಹಿಂದಿ (ಕೋರ್ಸ್ ಎ ಅಥವಾ ಬಿ) ಅಥವಾ ಇನ್ನೊಂದು ಪ್ರಾದೇಶಿಕ/ವಿದೇಶಿ ಭಾಷೆ.
  • ಗಣಿತ: (ಸ್ಟ್ಯಾಂಡರ್ಸ್ – ಬೇಸಿಕ್ ಲೆವೆಲ್).
  • ವಿಜ್ಞಾನ: (ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ).
  • ಸಮಾಜ ವಿಜ್ಞಾನ: (ಇತಿಹಾಸ, ಭೂಗೋಳ, ರಾಜ್ಯಶಾಸ್ತ್ರ ಮತ್ತು ಅರ್ಥಶಾಸ್ತ್ರ).

ಪರೀಕ್ಷೆ ಬಳಿಕ ಐಪಿಎಲ್​ ಅಗ್ನಿಪರೀಕ್ಷೆ:

10ನೇ ತರಗತಿ ಪರೀಕ್ಷೆ ಬಳಿಕ ವೈಭವ್ ಸೂರ್ಯವಂಶಿ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಸಜ್ಜಾಗಲಿದ್ದಾರೆ. ಮಾರ್ಚ್ 26 ರಿಂದ ಶುರುವಾಗಲಿರುವ ಐಪಿಎಲ್​ ಸೀಸನ್-19 ರಲ್ಲಿ ವೈಭವ್ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿಯಲಿದ್ದಾರೆ.

ಕಳೆದ ಸೀಸನ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದಿರುವ ಕಾರಣ ಮುಂಬರುವ ಸೀಸನ್​ನಲ್ಲೂ ವೈಭವ್ ಸೂರ್ಯವಂಶಿ, ಯಶಸ್ವಿ ಜೈಸ್ವಾಲ್ ಜೊತೆ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು.

ಇದನ್ನೂ ಓದಿ: ಟೀಮ್ ಇಂಡಿಯಾ ವಿರುದ್ಧ ಅರ್ಧದಲ್ಲೇ ಚೆಂಡೆಸೆದು ಸಿಕ್ಕಿ ಬಿದ್ದ ಎರಾಸ್ಮಸ್..!

ಅದರಲ್ಲೂ ಐಪಿಎಲ್ 2025 ರಲ್ಲಿ ಸ್ಫೋಟಕ ಸೆಂಚುರಿ ಸಿಡಿಸಿರುವ ಯುವ ದಾಂಡಿಗನ ಕಡೆಯಿಂದ ಈ ಬಾರಿ ಭರ್ಜರಿ ಪ್ರದರ್ಶನದ ನಿರೀಕ್ಷೆಯಿದೆ. ಈ ಭರ್ಜರಿ ಪ್ರದರ್ಶನದ ಮೂಲಕ ವೈಭವ್ ಸೂರ್ಯವಂಶಿ ಭಾರತ ಟಿ20 ತಂಡದ ಕದ ತಟ್ಟಲಿದ್ದಾರೆ.

Published On - 12:00 pm, Sat, 14 February 26

ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ನಿರಾಸೆಯಿಂದ ವಾಪಸ್
ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ನಿರಾಸೆಯಿಂದ ವಾಪಸ್
ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ?
ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಶುಭ
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಶುಭ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!