AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಮರು..ತ್ರಿಶೂಲ…ಉತ್ತರ ಪ್ರದೇಶದಲ್ಲಿ ಹೊಸ ಕ್ರಿಕೆಟ್ ಸ್ಟೇಡಿಯಂ

ಭಾರತದ ಅತ್ಯಂತ ಹಳೆಯ ಕ್ರಿಕೆಟ್ ಸ್ಟೇಡಿಯಂ ಎಂಬ ಖ್ಯಾತಿ ಕೊಲ್ಕತ್ತಾದ ಈಡನ್ ಗಾರ್ಡನ್ಸ್​ಗೆ ಸಲ್ಲುತ್ತದೆ. ಏಕೆಂದರೆ ಈ ಕ್ರೀಡಾಂಗಣವನ್ನು ನಿರ್ಮಿಸಿದ್ದು 1864 ರಲ್ಲಿ. ಹಾಗೆಯೇ 1934 ರಲ್ಲಿ ಇಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನಾಡಲಾಗಿತ್ತು. ಇನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗಿದ್ದು 1969 ರಲ್ಲಿ. ನವೆಂಬರ್ 14, 1974 ರಲ್ಲಿ ಈ ಸ್ಟೇಡಿಯಂನಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನಾಡಲಾಯಿತು.

ಡಮರು..ತ್ರಿಶೂಲ...ಉತ್ತರ ಪ್ರದೇಶದಲ್ಲಿ ಹೊಸ ಕ್ರಿಕೆಟ್ ಸ್ಟೇಡಿಯಂ
Varanasi Cricket Stadium
TV9 Web
| Edited By: |

Updated on:Sep 20, 2023 | 11:08 PM

Share

ಉತ್ತರ ಪ್ರದೇಶದ ವಾರಣಾಸಿಯಲ್ಲಿ  ನೂತನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಬಿಸಿಸಿಐ ಗ್ರೀನ್ ಸಿಗ್ನಲ್ ನೀಡಿದೆ. ಶಿವನಗರದಲ್ಲಿ ನಿರ್ಮಾಣವಾಗಲಿರುವ ಈ ಕ್ರೀಡಾಂಗಣವು ಭಗವಾನ್ ಶಿವನ ಪ್ರೇರಿತ ಥೀಮ್​ನಿಂದ ಕೂಡಿರಲಿದೆ. ಅಂದರೆ ಸ್ಟೇಡಿಯಂನ ಪ್ರವೇಶವು ದ್ವಾರವನ್ನು ಡಮರು ಆಕಾರದಲ್ಲಿ ವಿನ್ಯಾಸಗೊಳಿಸಲಾಗುತ್ತದೆ. ಹಾಗೆಯೇ ಸ್ಟೇಡಿಯಂನ ಫ್ಲಡ್ ಲೈಟ್​ಗಳು ತ್ರಿಶೂಲದ ಆಕಾರದಲ್ಲಿರುತ್ತವೆ.

ಇಷ್ಟೇ ಅಲ್ಲದೆ, ಭೋಲೆ ಭಗವಾನರ ಪ್ರೀತಿಪಾತ್ರವಾದ ಬೆಲ್ಪಾತ್ರವೂ ಈ ಕ್ರೀಡಾಂಗಣದ ವಿನ್ಯಾಸದಲ್ಲಿ ಕಾಣಿಸಲಿದೆ. ಇನ್ನು ಈ ಕ್ರೀಡಾಂಗಣದ ಮೇಲ್ಛಾವಣಿಯನ್ನು ಭಗವಾನ್ ಶಿವನ ಹಣೆಯ ಮೇಲಿರುವ ಅರ್ಧ ಚಂದ್ರನ ಆಕೃತಿಯಲ್ಲಿರಲಿದೆ. ಅಂದರೆ ಇಡೀ ಸ್ಟೇಡಿಯಂ ಅನ್ನು ಶಿವಶಂಕರ ಥೀಮ್​ನಲ್ಲಿ ವಿನ್ಯಾಸಗೊಳಿಸಲಾಗಿರುವುದು ವಿಶೇಷ.

ಇನ್ನು ಈ ಸ್ಟೇಡಿಯಂ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 23 ರಂದು ಅಡಿಗಲ್ಲು ಹಾಕಲಿದ್ದಾರೆ. ಅಲ್ಲದೆ 30 ತಿಂಗಳಲ್ಲಿ ನೂತನ ಅಂತಾರಾಷ್ಟ್ರೀಯ ಸ್ಟೇಡಿಯಂ ವಾರಣಾಸಿಯಲ್ಲಿ ತಲೆ ಎತ್ತಲಿದೆ.

ಮಾಜಿ ಕ್ರಿಕೆಟಿಗರು ಉಪಸ್ಥಿತಿ:

ಸೆಪ್ಟೆಂಬರ್ 23 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಮಯದಲ್ಲಿ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ರವಿಶಾಸ್ತ್ರಿ, ಸುನಿಲ್ ಗವಾಸ್ಕರ್ ಅಲ್ಲದೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಸೇರಿದಂತೆ ಹಲವು ಖ್ಯಾತ ವ್ಯಕ್ತಿಗಳು ಆಗಮಿಸಲಿದ್ದಾರೆ ಎಂದು ಎಂದು ವಾರಣಾಸಿ ಕಮಿಷನರ್ ಕೌಶಲ್ ರಾಜ್ ಶರ್ಮಾ ತಿಳಿಸಿದ್ದಾರೆ.

32 ಎಕರೆಯಲ್ಲಿ ಸ್ಟೇಡಿಯಂ:

ಈ ಸಂಪೂರ್ಣ ಕ್ರೀಡಾಂಗಣವನ್ನು 32 ಎಕರೆಯಲ್ಲಿ ನಿರ್ಮಿಸಲಾಗುತ್ತಿದೆ. ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಕಾರ್ಯದರ್ಶಿ ಜಯ್ ಶಾ ಕೂಡ ವಾರಣಾಸಿಗೆ ಬಂದು ಸ್ಥಳ ಪರಿಶೀಲಿಸಿ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇದೀಗ ಸುದೀರ್ಘ ಚರ್ಚೆಯ ನಂತರ ವಿನ್ಯಾಸವನ್ನು ಅಂತಿಮಗೊಳಿಸಲಾಗಿದೆ ಎಂದು ವಾರಣಾಸಿ ಕಮಿಷನರ್ ಕೌಶಲ್ ರಾಜ್ ಶರ್ಮಾ ತಿಳಿಸಿದ್ದಾರೆ.

400 ಕೋಟಿ ರೂ. ವೆಚ್ಚ:

ಹೊಸ ಸ್ಟೇಡಿಯಂ ಒಟ್ಟು 400 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಈ ಕ್ರೀಡಾಂಗಣವು ಸುಮಾರು 40 ಸಾವಿರ ಜನರು ಕುಳಿತುಕೊಳ್ಳುವ ಸಾಮರ್ಥ್ಯ ಹೊಂದಿರಲಿದೆ.

ಭಾರತದ ಹಳೆಯ ಸ್ಟೇಡಿಯಂ ಯಾವುದು?

ಭಾರತದ ಅತ್ಯಂತ ಹಳೆಯ ಕ್ರಿಕೆಟ್ ಸ್ಟೇಡಿಯಂ ಎಂಬ ಖ್ಯಾತಿ ಕೊಲ್ಕತ್ತಾದ ಈಡನ್ ಗಾರ್ಡನ್ಸ್​ಗೆ ಸಲ್ಲುತ್ತದೆ. ಏಕೆಂದರೆ ಈ ಕ್ರೀಡಾಂಗಣವನ್ನು ನಿರ್ಮಿಸಿದ್ದು 1864 ರಲ್ಲಿ. ಹಾಗೆಯೇ 1934 ರಲ್ಲಿ ಇಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನಾಡಲಾಗಿತ್ತು. ಇನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗಿದ್ದು 1969 ರಲ್ಲಿ. ನವೆಂಬರ್ 14, 1974 ರಲ್ಲಿ ಈ ಸ್ಟೇಡಿಯಂನಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನಾಡಲಾಯಿತು.

Published On - 10:59 pm, Wed, 20 September 23

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ