Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಮರು..ತ್ರಿಶೂಲ…ಉತ್ತರ ಪ್ರದೇಶದಲ್ಲಿ ಹೊಸ ಕ್ರಿಕೆಟ್ ಸ್ಟೇಡಿಯಂ

ಭಾರತದ ಅತ್ಯಂತ ಹಳೆಯ ಕ್ರಿಕೆಟ್ ಸ್ಟೇಡಿಯಂ ಎಂಬ ಖ್ಯಾತಿ ಕೊಲ್ಕತ್ತಾದ ಈಡನ್ ಗಾರ್ಡನ್ಸ್​ಗೆ ಸಲ್ಲುತ್ತದೆ. ಏಕೆಂದರೆ ಈ ಕ್ರೀಡಾಂಗಣವನ್ನು ನಿರ್ಮಿಸಿದ್ದು 1864 ರಲ್ಲಿ. ಹಾಗೆಯೇ 1934 ರಲ್ಲಿ ಇಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನಾಡಲಾಗಿತ್ತು. ಇನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗಿದ್ದು 1969 ರಲ್ಲಿ. ನವೆಂಬರ್ 14, 1974 ರಲ್ಲಿ ಈ ಸ್ಟೇಡಿಯಂನಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನಾಡಲಾಯಿತು.

ಡಮರು..ತ್ರಿಶೂಲ...ಉತ್ತರ ಪ್ರದೇಶದಲ್ಲಿ ಹೊಸ ಕ್ರಿಕೆಟ್ ಸ್ಟೇಡಿಯಂ
Varanasi Cricket Stadium
Follow us
TV9 Web
| Updated By: ಝಾಹಿರ್ ಯೂಸುಫ್

Updated on:Sep 20, 2023 | 11:08 PM

ಉತ್ತರ ಪ್ರದೇಶದ ವಾರಣಾಸಿಯಲ್ಲಿ  ನೂತನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಬಿಸಿಸಿಐ ಗ್ರೀನ್ ಸಿಗ್ನಲ್ ನೀಡಿದೆ. ಶಿವನಗರದಲ್ಲಿ ನಿರ್ಮಾಣವಾಗಲಿರುವ ಈ ಕ್ರೀಡಾಂಗಣವು ಭಗವಾನ್ ಶಿವನ ಪ್ರೇರಿತ ಥೀಮ್​ನಿಂದ ಕೂಡಿರಲಿದೆ. ಅಂದರೆ ಸ್ಟೇಡಿಯಂನ ಪ್ರವೇಶವು ದ್ವಾರವನ್ನು ಡಮರು ಆಕಾರದಲ್ಲಿ ವಿನ್ಯಾಸಗೊಳಿಸಲಾಗುತ್ತದೆ. ಹಾಗೆಯೇ ಸ್ಟೇಡಿಯಂನ ಫ್ಲಡ್ ಲೈಟ್​ಗಳು ತ್ರಿಶೂಲದ ಆಕಾರದಲ್ಲಿರುತ್ತವೆ.

ಇಷ್ಟೇ ಅಲ್ಲದೆ, ಭೋಲೆ ಭಗವಾನರ ಪ್ರೀತಿಪಾತ್ರವಾದ ಬೆಲ್ಪಾತ್ರವೂ ಈ ಕ್ರೀಡಾಂಗಣದ ವಿನ್ಯಾಸದಲ್ಲಿ ಕಾಣಿಸಲಿದೆ. ಇನ್ನು ಈ ಕ್ರೀಡಾಂಗಣದ ಮೇಲ್ಛಾವಣಿಯನ್ನು ಭಗವಾನ್ ಶಿವನ ಹಣೆಯ ಮೇಲಿರುವ ಅರ್ಧ ಚಂದ್ರನ ಆಕೃತಿಯಲ್ಲಿರಲಿದೆ. ಅಂದರೆ ಇಡೀ ಸ್ಟೇಡಿಯಂ ಅನ್ನು ಶಿವಶಂಕರ ಥೀಮ್​ನಲ್ಲಿ ವಿನ್ಯಾಸಗೊಳಿಸಲಾಗಿರುವುದು ವಿಶೇಷ.

ಇನ್ನು ಈ ಸ್ಟೇಡಿಯಂ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 23 ರಂದು ಅಡಿಗಲ್ಲು ಹಾಕಲಿದ್ದಾರೆ. ಅಲ್ಲದೆ 30 ತಿಂಗಳಲ್ಲಿ ನೂತನ ಅಂತಾರಾಷ್ಟ್ರೀಯ ಸ್ಟೇಡಿಯಂ ವಾರಣಾಸಿಯಲ್ಲಿ ತಲೆ ಎತ್ತಲಿದೆ.

ಮಾಜಿ ಕ್ರಿಕೆಟಿಗರು ಉಪಸ್ಥಿತಿ:

ಸೆಪ್ಟೆಂಬರ್ 23 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಮಯದಲ್ಲಿ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ರವಿಶಾಸ್ತ್ರಿ, ಸುನಿಲ್ ಗವಾಸ್ಕರ್ ಅಲ್ಲದೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಸೇರಿದಂತೆ ಹಲವು ಖ್ಯಾತ ವ್ಯಕ್ತಿಗಳು ಆಗಮಿಸಲಿದ್ದಾರೆ ಎಂದು ಎಂದು ವಾರಣಾಸಿ ಕಮಿಷನರ್ ಕೌಶಲ್ ರಾಜ್ ಶರ್ಮಾ ತಿಳಿಸಿದ್ದಾರೆ.

32 ಎಕರೆಯಲ್ಲಿ ಸ್ಟೇಡಿಯಂ:

ಈ ಸಂಪೂರ್ಣ ಕ್ರೀಡಾಂಗಣವನ್ನು 32 ಎಕರೆಯಲ್ಲಿ ನಿರ್ಮಿಸಲಾಗುತ್ತಿದೆ. ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಕಾರ್ಯದರ್ಶಿ ಜಯ್ ಶಾ ಕೂಡ ವಾರಣಾಸಿಗೆ ಬಂದು ಸ್ಥಳ ಪರಿಶೀಲಿಸಿ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇದೀಗ ಸುದೀರ್ಘ ಚರ್ಚೆಯ ನಂತರ ವಿನ್ಯಾಸವನ್ನು ಅಂತಿಮಗೊಳಿಸಲಾಗಿದೆ ಎಂದು ವಾರಣಾಸಿ ಕಮಿಷನರ್ ಕೌಶಲ್ ರಾಜ್ ಶರ್ಮಾ ತಿಳಿಸಿದ್ದಾರೆ.

400 ಕೋಟಿ ರೂ. ವೆಚ್ಚ:

ಹೊಸ ಸ್ಟೇಡಿಯಂ ಒಟ್ಟು 400 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಈ ಕ್ರೀಡಾಂಗಣವು ಸುಮಾರು 40 ಸಾವಿರ ಜನರು ಕುಳಿತುಕೊಳ್ಳುವ ಸಾಮರ್ಥ್ಯ ಹೊಂದಿರಲಿದೆ.

ಭಾರತದ ಹಳೆಯ ಸ್ಟೇಡಿಯಂ ಯಾವುದು?

ಭಾರತದ ಅತ್ಯಂತ ಹಳೆಯ ಕ್ರಿಕೆಟ್ ಸ್ಟೇಡಿಯಂ ಎಂಬ ಖ್ಯಾತಿ ಕೊಲ್ಕತ್ತಾದ ಈಡನ್ ಗಾರ್ಡನ್ಸ್​ಗೆ ಸಲ್ಲುತ್ತದೆ. ಏಕೆಂದರೆ ಈ ಕ್ರೀಡಾಂಗಣವನ್ನು ನಿರ್ಮಿಸಿದ್ದು 1864 ರಲ್ಲಿ. ಹಾಗೆಯೇ 1934 ರಲ್ಲಿ ಇಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನಾಡಲಾಗಿತ್ತು. ಇನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗಿದ್ದು 1969 ರಲ್ಲಿ. ನವೆಂಬರ್ 14, 1974 ರಲ್ಲಿ ಈ ಸ್ಟೇಡಿಯಂನಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನಾಡಲಾಯಿತು.

Published On - 10:59 pm, Wed, 20 September 23

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ