AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವರಕ್ಷಕ ವ್ಯವಸ್ಥೆಯಲ್ಲಿ ನ್ಯೂಜಿಲೆಂಡ್ ಕ್ರಿಕೆಟ್​ ಆಟಗಾರ ಕ್ರಿಸ್​ ಕೈರ್ನ್ಸ್​

ಭ್ರಷ್ಟಾಚಾರದ ಆರೋಪಗಳು ಆರ್ಥಿಕವಾಗಿಯೂ ಕೈರ್ನ್ಸ್​ ಅವರನ್ನು ನುಜ್ಜುಗುಜ್ಜಾಗಿಸಿತ್ತು. ಒಂದು ಹಂತದಲ್ಲಿ ಅವರು ಆಕ್​ಲೆಂಡ್​ ಕೌನ್ಸಿಲ್​ನಲ್ಲಿ ಟ್ರಕ್​ ಚಾಲಕರಾಗಿ ಮತ್ತು ಬಸ್​ ತಂಗುದಾಣಗಳ ಸ್ವಚ್ಛತೆ ಮಾಡುವ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.

ಜೀವರಕ್ಷಕ ವ್ಯವಸ್ಥೆಯಲ್ಲಿ ನ್ಯೂಜಿಲೆಂಡ್ ಕ್ರಿಕೆಟ್​ ಆಟಗಾರ ಕ್ರಿಸ್​ ಕೈರ್ನ್ಸ್​
ನ್ಯೂಜಿಲೆಂಡ್ ತಂಡದ ಮಾಜಿ ನಾಯಕ ಕ್ರಿಸ್ ಕೈರ್ನ್ಸ್​
TV9 Web
| Edited By: |

Updated on: Aug 10, 2021 | 5:20 PM

Share

ಸಿಡ್ನಿ: ನ್ಯೂಜೆಲೆಂಡ್​ನ ಮಾಜಿ ಆಲ್​ರೌಂಡರ್​ ಕ್ರಿಸ್ ಕೈರ್ನ್ಸ್​ ಆಸ್ಟ್ರೇಲಿಯಾದ ಕೆನ್​ಬೆರಾ ಆಸ್ಪತ್ರೆಯಲ್ಲಿ ಜೀವರಕ್ಷಕ ವ್ಯವಸ್ಥೆಯಲ್ಲಿ ದಿನದೂಡುತ್ತಿದ್ದಾರೆ. ಅನಾರೋಗ್ಯದಿಂದಾಗಿ ಅವರು ಇದ್ದಕ್ಕಿದ್ದಂತೆ ಕುಸಿದುಬಿದ್ದ ನಂತರ ಆಸ್ಪತ್ರೆಗೆ ದಾಖಲಿಸಲಾಯಿತು. ಅವರನ್ನು ಶೀಘ್ರ ಸಿಡ್ನಿಯ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದೊಯ್ಯಲಾಗುವುದು ಎಂದು ನ್ಯೂಜಿಲೆಂಡ್​ ಮಾಧ್ಯಮಗಳು ಹೇಳಿವೆ. ಕೈರ್ನ್ಸ್​ ಅವರ ರಕ್ತನಾಳದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಮುಖ್ಯಅಪಧಮನಿಯಲ್ಲಿ ರಕ್ತಸ್ರಾವವಾಗುತ್ತಿದೆ.

ಹಲವು ಶಸ್ತ್ರಚಿಕಿತ್ಸೆಗಳ ನಂತರವೂ ಕೈರ್ನ್ಸ್​ ಅವರ ದೇಹವು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ತಮ್ಮ ಕಾಲಮಾನದ ಅತ್ಯುತ್ತಮ ಕ್ರಿಕೆಟ್ ಆಟಗಾರ ಎನಿಸಿಕೊಂಡಿದ್ದ ಕೈರ್ನ್ಸ್​ 62 ಟೆಸ್ಟ್​, ಎರಡು ಟಿ20 ಪಂದ್ಯಗಳನ್ನು ಆಡಿದ್ದಾರೆ. 1989ರಿಂದ 2006ರ ಅವಧಿಯಲ್ಲಿ ಅವರು ಕ್ರಿಕೆಟ್ ಆಡುತ್ತಿದ್ದರು. ಕೈರ್ನ್ಸ್​ ಅವರ ತಂದೆ ಲ್ಯಾನ್ಸ್​ ಕೈರ್ನ್ಸ್​ ಸಹ ನ್ಯೂಜಿಲೆಂಡ್​ ತಂಡದ ಪರವಾಗಿ ಕ್ರಿಕೆಟ್ ಆಡುತ್ತಿದ್ದರು.

51 ವರ್ಷದ ಕೈರ್ನ್ಸ್​ ಮೇಲೆ ಮ್ಯಾಚ್ ಫಿಕ್ಸಿಂಗ್ ಹಗರಣದ ಆರೋಪಗಳು ಕೇಳಿಬಂದಿದ್ದವು. 2008ರಲ್ಲಿ ಇಂಡಿಯನ್ ಕ್ರಿಕೆಟ್​ ಲೀಗ್​ ಸಹಯೋಗದಲ್ಲಿ ಆಡುತ್ತಿದ್ದಾಗ ಹಲವು ಆರೋಪಗಳನ್ನು ಎದುರಿಸಿದ್ದರು. ತಾವು ನಿರಪರಾಧಿ ಎಂದು ಸಾಬೀತುಪಡಿಸಲು ಸುದೀರ್ಘ ಕಾನೂನು ಹೋರಾಟ ನಡೆಸಿದ್ದರು. ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ ವಿರುದ್ಧ 2012ರಲ್ಲಿ ಲಂಡನ್​ ನ್ಯಾಯಾಲಯದಲ್ಲಿ ಮಾನಹಾನಿ ಮೊಕದ್ದಮೆಯನ್ನು ಕೈರ್ನ್ಸ್​ ಜಯಿಸಿದ್ದರು.

ನಂತರದ ದಿನಗಳಲ್ಲಿ ಸಹ ಕ್ರಿಕೆಟ್ ಆಟಗಾರರಾದ ಲ್ಯೂ ವಿನ್​ಸೆಂಟ್ ಮತ್ತು ಬ್ರೆನ್​ಡನ್ ಮೆಕ್​ಲುಹನ್ ಅವರಿಂದಲೂ ಕೈರ್ನ್ಸ್​ ಮೋಸದ ಆಟದ ಆರೋಪ ಎದುರಿಸಬೇಕಾಯಿತು. 2015ರ ಲಂಡನ್ ನ್ಯಾಯಾಲಯದ ವಿಚಾರಣೆಯಲ್ಲಿ ಸುಳ್ಳು ಸಾಕ್ಷ್ಯ ಮತ್ತು ನ್ಯಾಯಾಂಗದ ಹಾದಿತಪ್ಪಿಸಿದ ಆರೋಪ ದೃಢಪಟ್ಟಿತ್ತು.

ಭ್ರಷ್ಟಾಚಾರದ ಆರೋಪಗಳು ಆರ್ಥಿಕವಾಗಿಯೂ ಕೈರ್ನ್ಸ್​ ಅವರನ್ನು ನುಜ್ಜುಗುಜ್ಜಾಗಿಸಿತ್ತು. ಒಂದು ಹಂತದಲ್ಲಿ ಅವರು ಆಕ್​ಲೆಂಡ್​ ಕೌನ್ಸಿಲ್​ನಲ್ಲಿ ಟ್ರಕ್​ ಚಾಲಕರಾಗಿ ಮತ್ತು ಬಸ್​ ತಂಗುದಾಣಗಳ ಸ್ವಚ್ಛತೆ ಮಾಡುವ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಕಾನೂನು ಹೋರಾಟಗಳನ್ನು ನಿರ್ವಹಿಸಲು ಅಪಾರ ಪ್ರಮಾಣ ಹಣ ವ್ಯಯಿಸಬೇಕಾಯಿತು.

(Veteran New Zealand Cricketer Chris Cairns on life support in Australia)

ಇದನ್ನೂ ಓದಿ: T20 World Cup: ಟಿ-20 ವಿಶ್ವಕಪ್​ಗೆ ನ್ಯೂಜಿಲೆಂಡ್ ತಂಡ ಪ್ರಕಟ

ಇದನ್ನೂ ಓದಿ: Olympics: ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಸೇರ್ಪಡೆ ಸಾಧ್ಯತೆ: ನಾವು ರೆಡಿ ಎಂದ ಟೀಮ್ ಇಂಡಿಯಾ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ