AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ತಮ್ಮನ ಸಿಡಿಲಬ್ಬರ… ದಾಖಲೆಯ ಮೊತ್ತ ಪೇರಿಸಿದ ಮುಂಬೈ

Vijay Hazare Trophy Elite 2025-26: ವಿಜಯ ಹಝಾರೆ ಟೂರ್ನಿಯಲ್ಲಿ ಸರ್ಫರಾಝ್ ಖಾನ್ ಸಿಡಿಲಬ್ಬರದ ಸೆಂಚುರಿ ಸಿಡಿಸಿದ್ದಾರೆ. ಮುಂಬೈ ಪರ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸರ್ಫರಾಝ್ 14 ಭರ್ಜರಿ ಸಿಕ್ಸರ್​ಗಳೊಂದಿಗೆ 157 ರನ್​ ಚಚ್ಚಿದ್ದಾರೆ. ಈ ಶತಕದೊಂದಿಗೆ ಮುಂಬೈ ತಂಡವು ಗೋವಾ ವಿರುದ್ಧ ದಾಖಲೆಯ ಮೊತ್ತ ಪೇರಿಸಿದೆ.

ಅಣ್ತಮ್ಮನ ಸಿಡಿಲಬ್ಬರ... ದಾಖಲೆಯ ಮೊತ್ತ ಪೇರಿಸಿದ ಮುಂಬೈ
Sarfaraz Khan And Musheer Khan
ಝಾಹಿರ್ ಯೂಸುಫ್
|

Updated on: Dec 31, 2025 | 12:59 PM

Share

ವಿಜಯ ಹಝಾರೆ ಟೂರ್ನಿಯ ಗ್ರೂಪ್-ಸಿ ಪಂದ್ಯದಲ್ಲಿ ಮುಂಬೈ ತಂಡದ ಸರ್ಫರಾಝ್ ಖಾನ್ ಹಾಗೂ ಮುಶೀರ್ ಖಾನ್ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಜೈಪುರದ ಜೈಪುರಿಯ ವಿದ್ಯಾಲಯ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಗೋವಾ ಮತ್ತು ಮುಂಬೈ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಗೋವಾ ತಂಡದ ನಾಯಕ ದೀಪ್​ರಾಜ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡಕ್ಕೆ ಯಶಸ್ವಿ ಜೈಸ್ವಾಲ್ (46) ಉತ್ತಮ ಆರಂಭ ಒದಗಿಸಿದ್ದರು. ಜೈಸ್ವಾಲ್ ತಂಡಕ್ಕೆ ಆಸರೆಯಾಗಿ ನಿಂತ ಮುಶೀರ್ ಖಾನ್ 66 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 60 ರನ್ ಬಾರಿಸಿದರು.

ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸರ್ಫರಾಝ್ ಖಾನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಗೋವಾ ಬೌಲರ್​ಗಳ ಬೆಂಡೆತ್ತಿದ ಸರ್ಫರಾಝ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್-ಫೋರ್​ಗಳನ್ನು ಬಾರಿಸಿದರು. ಈ ಮೂಲಕ ಕೇವಲ 56 ಎಸೆತಗಳಲ್ಲಿ ಶತಕ ಪೂರೈಸಿದರು.

ಶತಕದ ಬಳಿಕ ಕೂಡ ಸಿಡಿಲಬ್ಬರದ ಮುಂದುವರೆಸಿದ ಸರ್ಫರಾಝ್ ಖಾನ್ 14 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಕೇವಲ 75 ಎಸೆತಗಳಲ್ಲಿ 157 ರನ್​ ಚಚ್ಚಿದರು.

ಇತ್ತ ಸರ್ಫರಾಝ್-ಮುಶೀರ್ ಖಾನ್ ಸಹೋದರರ ಜುಗಲ್​ಬಂಧಿಯೊಂದಿಗೆ 40 ಓವರ್​ಗಳಲ್ಲೇ ಮುಂಬೈ ತಂಡದ ಸ್ಕೋರ್​ 300ರ ಗಡಿದಾಟಿತು. ಆ ಬಳಿಕ ಬಂದ ನಾಯಕ ಶಾರ್ದೂಲ್ ಠಾಕೂರ್ 8 ಎಸೆತಗಳಲ್ಲಿ 27 ರನ್ ಚಚ್ಚಿದರು.

ಇನ್ನು ವಿಕೆಟ್ ಕೀಪರ್ ಬ್ಯಾಟರ್ ಹಾರ್ದಿಕ್ ತಮೋರೆ 28 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 53 ರನ್ ಬಾರಿಸಿದರು. ಈ ಮೂಲಕ ಮುಂಬೈ ತಂಡವು 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಬರೋಬ್ಬರಿ 444 ರನ್ ಕಲೆಹಾಕಿದೆ. ಇದು ವಿಜಯ ಹಝಾರೆ ಟೂರ್ನಿಯಲ್ಲಿ ದಾಖಲಾದ ನಾಲ್ಕನೇ ಗರಿಷ್ಠ ಸ್ಕೋರ್ ಎಂಬುದು ವಿಶೇಷ.

ಮುಂಬೈ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ಅಂಗ್​ಕ್ರಿಶ್ ರಘುವಂಶಿ, ಸಿದ್ಧೇಶ್ ಲಾಡ್, ಮುಶೀರ್ ಖಾನ್, ಸರ್ಫರಾಝ್ ಖಾನ್, ಹಾರ್ದಿಕ್ ತಮೋರೆ (ವಿಕೆಟ್ ಕೀಪರ್), ಶಮ್ಸ್ ಮುಲಾನಿ, ಶಾರ್ದೂಲ್ ಠಾಕೂರ್ (ನಾಯಕ), ತನುಷ್ ಕೋಟ್ಯಾನ್, ಸಿಲ್ವೆಸ್ಟರ್ ಡಿಸೋಝ, ತುಷಾರ್ ದೇಶಪಾಂಡೆ.

ಇದನ್ನೂ ಓದಿ: ಟಿ20 ವಿಶ್ವಕಪ್​ಗೆ 3 ತಂಡಗಳು ಪ್ರಕಟ

ಗೋವಾ (ಪ್ಲೇಯಿಂಗ್ XI): ಸ್ನೇಹಲ್ ಕೌತಾಂಕರ್, ಕಶ್ಯಪ್ ಬಖಾಲೆ, ಅಭಿನವ್ ತೇಜ್ರಾನಾ, ಸುಯಶ್ ಪ್ರಭುದೇಸಾಯಿ, ಲಲಿತ್ ಯಾದವ್, ದರ್ಶನ್ ಮಿಸಾಲ್, ದೀಪರಾಜ್ ಗಾಂವ್ಕರ್ (ನಾಯಕ), ರಾಜಶೇಖರ್ ಹರಿಕಾಂತ್ (ವಿಕೆಟ್ ಕೀಪರ್), ಅರ್ಜುನ್ ತೆಂಡೂಲ್ಕರ್, ಶುಭಂ ತಾರಿ, ವಾಸುಕಿ ಕೌಶಿಕ್.

ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭಾರಿ ಬಂದೋಬಸ್ತ್, ಎಲ್ಲೆಡೆ ಖಾಕಿ ಕಣ್ಣು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭಾರಿ ಬಂದೋಬಸ್ತ್, ಎಲ್ಲೆಡೆ ಖಾಕಿ ಕಣ್ಣು
ಇಂದು ಮುಕ್ಕೋಟಿ ದ್ವಾದಶಿ, ಒಂದು ಪುಣ್ಯಕ್ಕೆ 3 ಕೋಟಿ ಫಲ!
ಇಂದು ಮುಕ್ಕೋಟಿ ದ್ವಾದಶಿ, ಒಂದು ಪುಣ್ಯಕ್ಕೆ 3 ಕೋಟಿ ಫಲ!