AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Karnewar: ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಅಕ್ಷಯ್

T20 Cricket World Record: ಸಿಕ್ಕಿಂ ವಿರುದ್ಧದ ಪಂದ್ಯದಲ್ಲಿ ಅಕ್ಷಯ್ ಕರ್ನೆವಾರ್ 4 ಓವರ್​ಗಳಲ್ಲಿ 5 ರನ್ ನೀಡಿ ಹ್ಯಾಟ್ರಿಕ್ ವಿಕೆಟ್ ಸೇರಿದಂತೆ ಒಟ್ಟು 4 ವಿಕೆಟ್ ಪಡೆದಿದ್ದಾರೆ. ಈ ಮೂಲಕ ದೇಶೀಯ ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

Akshay Karnewar: ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಅಕ್ಷಯ್
Akshay Karnewar
Follow us
TV9 Web
| Updated By: ಝಾಹಿರ್ ಯೂಸುಫ್

Updated on: Nov 10, 2021 | 8:22 PM

ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶಿಸಿರುವ ಅಕ್ಷಯ್ ಕರ್ನೆವಾರ್ (Akshay Karnewar) ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಟಿ20 ಕ್ರಿಕೆಟ್​ ಇತಿಹಾಸದಲ್ಲಿ 4 ಓವರ್‌ಗಳಲ್ಲಿ ಒಂದೇ ಒಂದು ರನ್ ನೀಡದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಅಕ್ಷಯ್ ಪಾತ್ರರಾಗಿದ್ದಾರೆ. ವಿದರ್ಭ ತಂಡದ ಎಡಗೈ ಸ್ಪಿನ್ನರ್ ಅಕ್ಷಯ್ ಮಣಿಪುರ ವಿರುದ್ಧದ ಪಂದ್ಯದಲ್ಲಿ ಈ ಸಾಧನೆ ಮಾಡಿದರು. 4 ಓವರ್‌ ಬೌಲಿಂಗ್ ಮಾಡಿದ್ದ ಅಕ್ಷಯ್ ಒಂದೇ ಒಂದು ರನ್​ ಬಿಟ್ಟುಕೊಟ್ಟಿಲ್ಲ ಎಂಬುದು ವಿಶೇಷ. ಅಂದರೆ 4 ಓವರ್​ಗಳು ಕೂಡ ಮೇಡನ್ ಆಗಿದ್ದವು. ಅಷ್ಟೇ ಅಲ್ಲ 2 ವಿಕೆಟ್ ಕಬಳಿಸಿ ಮಿಂಚಿದ್ದರು.

ಈ ಪಂದ್ಯದಲ್ಲಿ ವಿದರ್ಭ ಮೊದಲು ಬ್ಯಾಟ್ ಮಾಡಿದ ವಿಧರ್ಭ ತಂಡವು ನಿಗದಿತ 20 ಓವರ್​ನಲ್ಲಿ 4 ವಿಕೆಟ್‌ ನಷ್ಟಕ್ಕೆ 222 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ತಂಡದ ಪರ ಜಿತೇಶ್ ಶರ್ಮಾ 31 ಎಸೆತಗಳಲ್ಲಿ 5 ಬೌಂಡರಿ ಹಾಗೂ 5 ಸಿಕ್ಸರ್​ ಸಿಡಿಸಿ ಅಜೇಯ 71 ರನ್ ಗಳಿಸಿದರು. ಈ ಬೃಹತ್ ಗುರಿ ಬೆನ್ನತ್ತಿದ ಮಣಿಪುರ ತಂಡವು 16.3 ಓವರ್‌ಗಳಲ್ಲಿ ಕೇವಲ 55 ರನ್ ಗಳಿಸಿ ಆಲೌಟಾದರು. ತಂಡದ 9 ಬ್ಯಾಟರುಗಳು ಎರಡಂಕಿ ಕಲೆಹಾಕುವಲ್ಲಿ ವಿಫಲರಾಗಿದ್ದರು. ಈ ಮೂಲಕ ವಿದರ್ಭ ಭರ್ಜರಿ ಜಯ ಸಾಧಿಸಿತು.

ಇನ್ನು ಸಿಕ್ಕಿಂ ವಿರುದ್ಧದ ಪಂದ್ಯದಲ್ಲಿ ಅಕ್ಷಯ್ ಕರ್ನೆವಾರ್ 4 ಓವರ್​ಗಳಲ್ಲಿ 5 ರನ್ ನೀಡಿ ಹ್ಯಾಟ್ರಿಕ್ ವಿಕೆಟ್ ಸೇರಿದಂತೆ ಒಟ್ಟು 4 ವಿಕೆಟ್ ಪಡೆದಿದ್ದಾರೆ. ಈ ಮೂಲಕ ದೇಶೀಯ ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಈ ಜೋಡಿ ವಿಶ್ವಕಪ್ ಗೆದ್ದು ಕೊಡಲಿದೆ ಎಂದ ಮಾಜಿ ಕ್ರಿಕೆಟಿಗ

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಹೀಗಿದೆ

ಇದನ್ನೂ ಓದಿ:   IPL 2022: ಯುವ ನಾಯಕನ ಮೇಲೆ ಕಣ್ಣಿಟ್ಟಿರುವ CSK

(Vidarbha Bowler Akshay Karnewar Scripts World Record)

ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ
ಜೀವಂತ ಕ್ಷಿಪಣಿಯನ್ನು ಗಮನಿಸಿದ ಸ್ಥಳೀಯರಿಂದ ಸೇನೆಗೆ ಮಾಹಿತಿ
ಜೀವಂತ ಕ್ಷಿಪಣಿಯನ್ನು ಗಮನಿಸಿದ ಸ್ಥಳೀಯರಿಂದ ಸೇನೆಗೆ ಮಾಹಿತಿ
ಸೋನು ನಿಗಂ ವಿವಾದದ ಬಗ್ಗೆ ನಟ ಧನಂಜಯ್ ಮಾತು
ಸೋನು ನಿಗಂ ವಿವಾದದ ಬಗ್ಗೆ ನಟ ಧನಂಜಯ್ ಮಾತು
ಉನ್ನತ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಮಹತ್ವದ ಸಭೆ
ಉನ್ನತ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಮಹತ್ವದ ಸಭೆ
ಜಮೀರ್ ಅಹ್ಮದ್ ಯುದ್ಧಕ್ಕೆ ಹೋಗುವ ಮಾತನ್ನು ಹೇಳಿ ನಕ್ಕ ನಿಖಿಲ್
ಜಮೀರ್ ಅಹ್ಮದ್ ಯುದ್ಧಕ್ಕೆ ಹೋಗುವ ಮಾತನ್ನು ಹೇಳಿ ನಕ್ಕ ನಿಖಿಲ್
ಡಿಸ್ನಿ ಲ್ಯಾಂಡ್, ಕಾವೇರಿ ಆರತಿ ಯೋಜನೆಗಳನ್ನು ವಿರೋಧಿಸಿದ ರೈತ ಮಹಿಳೆಯರು
ಡಿಸ್ನಿ ಲ್ಯಾಂಡ್, ಕಾವೇರಿ ಆರತಿ ಯೋಜನೆಗಳನ್ನು ವಿರೋಧಿಸಿದ ರೈತ ಮಹಿಳೆಯರು