AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2025: ವಿದರ್ಭ ತಂಡಕ್ಕೆ ರಣಜಿ ಟ್ರೋಫಿ ಗೆದ್ದುಕೊಟ್ಟ ಕನ್ನಡಿಗ ಕರುಣ್ ನಾಯರ್

Ranji Trophy 2025: ವಿದರ್ಭ ತಂಡವು 2025 ರ ರಣಜಿ ಟ್ರೋಫಿ ಫೈನಲ್‌ನಲ್ಲಿ ಕೇರಳವನ್ನು ಮಣಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಕರುಣ್ ನಾಯರ್ ಮತ್ತು ದಾನಿಶ್ ಮಾಲೆವಾರ್ ಅವರ ಅದ್ಭುತ ಬ್ಯಾಟಿಂಗ್ ವಿದರ್ಭದ ಗೆಲುವಿಗೆ ಪ್ರಮುಖ ಕಾರಣ. ಮೊದಲ ಇನ್ನಿಂಗ್ಸ್‌ನಲ್ಲಿ 37 ರನ್‌ಗಳ ಮುನ್ನಡೆ ಸಾಧಿಸಿದ ವಿದರ್ಭ, ಪಂದ್ಯ ಡ್ರಾ ಆದರೂ ಮುನ್ನಡೆಯ ಆಧಾರದ ಮೇಲೆ ಗೆಲುವು ಸಾಧಿಸಿತು. ಇದು ವಿದರ್ಭದ ಮೂರನೇ ರಣಜಿ ಟ್ರೋಫಿ ಪ್ರಶಸ್ತಿಯಾಗಿದೆ.

Ranji Trophy 2025: ವಿದರ್ಭ ತಂಡಕ್ಕೆ ರಣಜಿ ಟ್ರೋಫಿ ಗೆದ್ದುಕೊಟ್ಟ ಕನ್ನಡಿಗ ಕರುಣ್ ನಾಯರ್
Ranji Trophy
ಪೃಥ್ವಿಶಂಕರ
|

Updated on: Mar 02, 2025 | 5:13 PM

Share

ಮೊದಲ ಇನ್ನಿಂಗ್ಸ್​ನಲ್ಲಿ 37 ರನ್​ಗಳ ಮುನ್ನಡೆ ಪಡೆದುಕೊಂಡಿದ್ದ ವಿದರ್ಭ ತಂಡ ನಿರೀಕ್ಷೆಯಂತೆಯೇ 2025 ರ ರಣಜಿ ಟ್ರೋಫಿ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಕೇರಳ ವಿರುದ್ಧದ ಫೈನಲ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ವಿದರ್ಭ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಮೂಲಕ ವಿದರ್ಭ ತಂಡವು ಮೂರನೇ ಬಾರಿಗೆ ಈ ಪ್ರಶಸ್ತಿಯನ್ನು ಗೆದ್ದ ಸಾಧನೆ ಮಾಡಿದೆ. ವಾಸ್ತವವಾಗಿ ಕಳೆದ ರಣಜಿ ಟ್ರೋಫಿ ಸೀಸನ್​ನಲ್ಲಿಯೂ ವಿದರ್ಭ ಫೈನಲ್ ತಲುಪಿತ್ತು, ಆದರೆ ಪ್ರಶಸ್ತಿ ಪಂದ್ಯದಲ್ಲಿ ಮುಂಬೈ ವಿರುದ್ಧ ಸೋತಿತ್ತು. ಈ ಬಾರಿ ಕರುಣ್ ನಾಯರ್ ಮತ್ತು 21 ವರ್ಷದ ಯುವ ಬ್ಯಾಟ್ಸ್‌ಮನ್ ಡ್ಯಾನಿಶ್ ಮಾಲೆವಾರ್ ಅವರ ಅದ್ಭುತ ಬ್ಯಾಟಿಂಗ್​ನ ಆಧಾರದ ಮೇಲೆ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು.

ಕನ್ನಡಿಗ ಕರುಣ್ ಆಟಕ್ಕೆ ಒಲಿದ ಜಯ

ವಿದರ್ಭ ತಂಡದ ಯಶಸ್ಸಿನಲ್ಲಿ ತಂಡದ ಬ್ಯಾಟ್ಸ್‌ಮನ್, ಕನ್ನಡಿಗ ಕರುಣ್ ನಾಯರ್ ಪ್ರಮುಖ ಪಾತ್ರ ವಹಿಸಿದರು. ಮೊದಲ ಇನ್ನಿಂಗ್ಸ್​ನಲ್ಲಿ ವಿದರ್ಭ, ಕೇವಲ 24 ರನ್‌ಗಳಿಗೆ 3 ವಿಕೆಟ್‌ಗಳನ್ನು ಕಳೆದುಕೊಂಡಾಗ ಕರುಣ್, ಡ್ಯಾನಿಶ್ ಮಾಲೆವಾರ್ ಅವರೊಂದಿಗೆ 215 ರನ್‌ಗಳ ನಿರ್ಣಾಯಕ ಪಾಲುದಾರಿಕೆಯನ್ನು ಹಂಚಿಕೊಂಡರು ಮತ್ತು ಫೈನಲ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 86 ರನ್‌ಗಳನ್ನು ಬಾರಿಸಿದರು. ಇತ್ತ ಡ್ಯಾನಿಶ್ 153 ರನ್​ಗಳ ಇನ್ನಿಂಗ್ಸ್ ಆಡಿದರು. ಇಬ್ಬರ ಈ ಇನ್ನಿಂಗ್ಸ್‌ನಿಂದಾಗಿ, ವಿದರ್ಭ ತಂಡವು ಮೊದಲ ಇನ್ನಿಂಗ್ಸ್​ನಲ್ಲಿ 379 ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ಎರಡನೇ ಇನ್ನಿಂಗ್ಸ್‌ನಲ್ಲೂ ಇಬ್ಬರೂ ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನ ನೀಡಿದರು. ಇದರಲ್ಲಿ ಕರುಣ್ ನಾಯರ್ 135 ರನ್ ಗಳಿಸಿದರೆ, ಡ್ಯಾನಿಶ್ 73 ರನ್ ಕಲೆ ಹಾಕಿದರು. ಇದರಿಂದಾಗಿ, ಪಂದ್ಯದ ಕೊನೆಯ ದಿನದಂದು ಇಡೀ ತಂಡ 9 ವಿಕೆಟ್‌ಗಳ ನಷ್ಟಕ್ಕೆ 375 ರನ್ ಗಳಿಸಿತು. ಪಂದ್ಯ ಡ್ರಾದಲ್ಲಿ ಕೊನೆಗೊಂಡರೂ, ಮೊದಲ ಇನ್ನಿಂಗ್ಸ್ ಮುನ್ನಡೆಯಿಂದಾಗಿ ವಿದರ್ಭ ತಂಡಕ್ಕೆ ಟ್ರೋಫಿ ದೊರೆಯಿತು.

ಈ ಪಂದ್ಯದಲ್ಲಿ ಡ್ಯಾನಿಶ್ ಮಾಲೆವಾರ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಇಡೀ ಋತುವಿನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಹರ್ಷ್ ದುಬೆ, ಟೂರ್ನಿಯ ಆಟಗಾರ ಪ್ರಶಸ್ತಿ ಪಡೆದರು. ಈ ಪಂದ್ಯದಲ್ಲೂ ಮಿಂಚಿದ ಹರ್ಷ್​, 44 ಓವರ್‌ಗಳನ್ನು ಬೌಲಿಂಗ್ ಮಾಡಿ 3 ವಿಕೆಟ್‌ಗಳನ್ನು ಪಡೆದರು. ಅವರಲ್ಲದೆ, ದರ್ಶನ್ ನಲ್ಕಂಡೆ ಮತ್ತು ಪಾರ್ಥ್ ರೇಖಾಡೆ ಕೂಡ ತಲಾ 3 ವಿಕೆಟ್ ಪಡೆದರೆ, ಯಶ್ ಠಾಕೂರ್ ಒಂದು ವಿಕೆಟ್ ಪಡೆದರು.

ಇದನ್ನೂ ಓದಿ: Ranji Trophy Final: ಕೇರಳ ವಿರುದ್ಧ ಗೆಲುವಿನ ಶತಕ ಸಿಡಿಸಿದ ಕನ್ನಡಿಗ ಕರುಣ್ ನಾಯರ್

ಕೇರಳದ ಕನಸು ಭಗ್ನ

ಮತ್ತೊಂದೆಡೆ, ಕೇರಳ ತಂಡದ ರಣಜಿ ಚಾಂಪಿಯನ್ ಆಗುವ ಕನಸು ಭಗ್ನವಾಯಿತು. ರಣರೋಚಕತೆಯಿಂದ ಕೂಡಿದ್ದ ಸೆಮಿಫೈನಲ್‌ನಲ್ಲಿ ಕೇವಲ 2 ರನ್‌ಗಳ ಮುನ್ನಡೆಯೊಂದಿಗೆ ಪಂದ್ಯಾವಳಿಯ ಇತಿಹಾಸದಲ್ಲಿ ಮೊದಲ ಬಾರಿಗೆ ಫೈನಲ್ ತಲುಪಿದ್ದ ಕೇರಳ ಅನೇಕ ಪ್ರಯತ್ನಗಳ ಹೊರತಾಗಿಯೂ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಲಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!