AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಟೀಮ್ ಇಂಡಿಯಾ ಸೋತರೂ ಚಪ್ಪಾಳೆ ತಟ್ಟಿದ ಡಿಕೆ: ಪಂಚ್ ನೀಡಿದ ಹಿಟ್​ಮ್ಯಾನ್..!

India vs South Africa: ಸೌತ್ ಆಫ್ರಿಕಾ ತಂಡವು ಅಂತಿಮವಾಗಿ 18.3 ಓವರ್​ಗಳಲ್ಲಿ ಟೀಮ್ ಇಂಡಿಯಾವನ್ನು 170 ರನ್​ಗಳಿಗೆ ಆಲೌಟ್ ಮಾಡಿ ಭರ್ಜರಿ ಜಯ ಸಾಧಿಸಿತು.

VIDEO: ಟೀಮ್ ಇಂಡಿಯಾ ಸೋತರೂ ಚಪ್ಪಾಳೆ ತಟ್ಟಿದ ಡಿಕೆ: ಪಂಚ್ ನೀಡಿದ ಹಿಟ್​ಮ್ಯಾನ್..!
DK - Rohit Sharma
TV9 Web
| Updated By: ಝಾಹಿರ್ ಯೂಸುಫ್|

Updated on: Oct 05, 2022 | 1:55 PM

Share

ಇಂದೋರ್​ನ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆದ ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 49 ರನ್​ಗಳಿಂದ ಸೋಲನುಭವಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ರಿಲೀ ರೊಸ್ಸೊ ಅವರ ಭರ್ಜರಿ ಶತಕದ ನೆರವಿನಿಂದ 3 ವಿಕೆಟ್ ನಷ್ಟಕ್ಕೆ 227 ರನ್​ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಟೀಮ್ ಇಂಡಿಯಾ ಸ್ಪೋಟಕ ಆರಂಭ ಪಡೆಯುವಲ್ಲಿ ವಿಫಲವಾಗಿತ್ತು.

ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ದಿನೇಶ್ ಕಾರ್ತಿಕ್ 21 ಎಸೆತಗಳಲ್ಲಿ 46 ರನ್​ ಬಾರಿಸಿ ಅಬ್ಬರಿಸಿದರು. ಆದರೆ ಉತ್ತಮ ದಾಳಿ ಸಂಘಟಿಸುವಲ್ಲಿ ಯಶಸ್ವಿಯಾದ ಸೌತ್ ಆಫ್ರಿಕಾ ತಂಡವು ಅಂತಿಮವಾಗಿ 18.3 ಓವರ್​ಗಳಲ್ಲಿ ಟೀಮ್ ಇಂಡಿಯಾವನ್ನು 170 ರನ್​ಗಳಿಗೆ ಆಲೌಟ್ ಮಾಡಿ ಭರ್ಜರಿ ಜಯ ಸಾಧಿಸಿತು.

ಇದನ್ನೂ ಓದಿ
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?

ಈ ಸೋಲಿನ ಬಳಿಕ ಟೀಮ್ ಇಂಡಿಯಾದ ಡಗೌಟ್​ನಲ್ಲಿ ದಿನೇಶ್ ಕಾರ್ತಿಕ್ ಚಪ್ಪಾಳೆ ತಟ್ಟುತ್ತಿರುವುದು ಕಂಡು ಬಂತು. ಇದನ್ನು ಗಮನಿಸಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಡಿಕೆಗೆ ಬೆನ್ನಿಗೆ ಗುದ್ದಿದ್ದಾರೆ. ಮೇಲ್ನೋಟಕ್ಕೆ ಸರಣಿ ಗೆಲುವಿನ ಖುಷಿಯಲ್ಲಿದ್ದ ದಿನೇಶ್ ಕಾರ್ತಿಕ್ ಸೋಲನ್ನು ಮರೆತು ಚಪ್ಪಾಳೆ ತಟ್ಟುತ್ತಿದ್ದರು. ಆದರೆ ಇತ್ತ ಕೊನೆಯ ಪಂದ್ಯದಲ್ಲಿ ಸೋತಿದ್ದರಿಂದ ರೋಹಿತ್ ಶರ್ಮಾ ದಿನೇಶ್ ಕಾರ್ತಿಕ್​ಗೆ ನಾವು ಸೋತಿದ್ದೇವೆ ಎಂದೇಳುವ ಮೂಲಕ ಪಂಚ್ ನೀಡಿದ್ದಾರೆ.

ಇದೀಗ ಈ ತಮಾಷೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದಾದ ಬಳಿಕ ಡಿಕೆ-ಹಿಟ್​ಮ್ಯಾನ್ ಮತ್ತಷ್ಟು ಫನ್​ ಟಾಕ್​ನಲ್ಲಿ ತೊಡಗಿಸಿಕೊಂಡಿರುವ ಮತ್ತೊಂದು ವಿಡಿಯೋವನ್ನು ಸಹ ಬಿಸಿಸಿಐ ಹಂಚಿಕೊಂಡಿದೆ.

ಒಟ್ಟಿನಲ್ಲಿ ಸೌತ್ ಆಫ್ರಿಕಾ ವಿರುದ್ಧ ಕೊನೆಯ ಟಿ20 ಪಂದ್ಯದಲ್ಲಿ ಸೋತಿರುವ ಟೀಮ್ ಇಂಡಿಯಾ 3 ಪಂದ್ಯಗಳ ಮೊದಲೆರಡು ಪಂದ್ಯಗಳಲ್ಲಿ ಗೆಲುವು ದಾಖಲಿಸಿ 2-1 ಅಂತರದಿಂದ ಸರಣಿ ಗೆದ್ದುಕೊಂಡಿದೆ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?