AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಕ್ರಿಕೆಟ್ ಲೀಗ್​ನಲ್ಲಿ ಕೈ ಕೈ ಮಿಲಾಯಿಸಿದ ಸೆಲೆಬ್ರಿಟಿಗಳು..!

ಸೆಲೆಬ್ರಿಟಿಗಳ ಜಗಳವನ್ನು ತಡೆಯಲು ಪಂದ್ಯಾವಳಿಯ ಆಯೋಜಕರು ಹರಸಾಹಸಪಟ್ಟರು. ಅಲ್ಲದೆ ಅಂತಿಮವಾಗಿ ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಲಾಯಿತು. ಇದೀಗ ಬಾಂಗ್ಲಾದೇಶ್​ ಸೆಲೆಬ್ರಿಟಿಗಳ ಜಗಳದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

VIDEO: ಕ್ರಿಕೆಟ್ ಲೀಗ್​ನಲ್ಲಿ ಕೈ ಕೈ ಮಿಲಾಯಿಸಿದ ಸೆಲೆಬ್ರಿಟಿಗಳು..!
BCCL Fight
TV9 Web
| Edited By: |

Updated on: Sep 30, 2023 | 9:31 PM

Share

ಕ್ರಿಕೆಟ್ ಮೈದಾನದಲ್ಲಿ ಮಾತಿನ ಚಕಮಕಿ ನಡೆಯುವುದು ಸಾಮಾನ್ಯ. ಅದರಲ್ಲೂ ಸ್ಲೆಡ್ಜಿಂಗ್ ಆಗಾಗ್ಗೆ ಕಾಣ ಸಿಗುತ್ತವೆ. ಆದರೆ ಇಲ್ಲೊಂದು ಲೀಗ್​ನಲ್ಲಿ ಒಂದು ಫೋರ್​ಗಳಾಗಿ ಖ್ಯಾತನಾಮರು ಕೈ ಕೈ ಮಿಲಾಯಿಸಿದ ಘಟನೆ ನಡೆದಿದೆ. ಇಂತಹದೊಂದು ಅಹಿತಕರ ಘಟನೆ ನಡೆದಿರುವುದು ಬಾಂಗ್ಲಾದೇಶ್​ನ ಸೆಲೆಬ್ರಿಟಿ ಕ್ರಿಕೆಟ್ ಲೀಗ್​ನಲ್ಲಿ. ಈ ಲೀಗ್‌ನ ಪಂದ್ಯವೊಂದರಲ್ಲಿ ಮುಸ್ತಫಾ ಕಮಾಲ್ ರಿಯಾಜ್ ಮತ್ತು ದೀಪಂಕರ್ ದೀಪನ್ ಅವರ ತಂಡಗಳು ಮುಖಾಮುಖಿಯಾಗಿತ್ತು.

ಜಿದ್ದಾಜಿದ್ದಿನ ಹೋರಾಟವನ್ನು ನಿರೀಕ್ಷಿಸಲಾಗಿದ್ದ ಈ ಪಂದ್ಯದಲ್ಲಿ ಹಣಾಹಣಿ ಕಂಡು ಬಂದಿದ್ದು ಮಾತ್ರ ಅಚ್ಚರಿ. ಅದು ಕೂಡ ಕೇವಲ ಒಂದು ಫೋರ್​ಗಾಗಿ ಉಭಯ ತಂಡಗಳ ಆಟಗಾರರು ಪರಸ್ಪರ ಹೊಡೆದಾಟಕ್ಕಿಳಿದಿರುವುದು ಪರಮಾಶ್ಚರ್ಯ ಎನ್ನದೇ ವಿಧಿಯಿಲ್ಲ.

ಏಕೆಂದರೆ ಇದೊಂದು ಸೆಲೆಬ್ರಿಟಿ ಲೀಗ್ ಪಂದ್ಯ. ಇದರ ಉದ್ದೇಶವೇ ಎಲ್ಲಾ ಕಲಾವಿದರನ್ನು ಒಗ್ಗೂಡಿಸುವುದಾಗಿತ್ತು. ಆದರೆ ಕ್ರಿಕೆಟ್ ಪಂದ್ಯಾಟ ರಣಾಂಗಣವಾದ ಪರಿಣಾಮ ಪಂದ್ಯವನ್ನೇ ರದ್ದುಗೊಳಿಸಲಾಯಿತು. ಅಷ್ಟೇ ಅಲ್ಲದೆ ಈ ಹೊಡೆದಾಟದಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ.

ಹೊಡೆದಾಟಕ್ಕೆ ಕಾರಣವೇನು?

ವರದಿಗಳ ಪ್ರಕಾರ, ಈ ಪಂದ್ಯದಲ್ಲಿ ಜಗಳಕ್ಕೆ ಮುಖ್ಯ ಕಾರಣ ಅಂಪೈರ್‌ ನೀಡಿದ ತಪ್ಪು ತೀರ್ಪು. ಅಂಪೈರ್ ಬೌಂಡರಿ ನೀಡದ ಹಿನ್ನೆಲೆಯಲ್ಲಿ ಈ ಉಭಯ ತಂಡಗಳ ನಡುವೆ ವಾಗ್ವಾದ ನಡೆಯಿತು. ಈ ಮಾತಿನ ಚಕಮಕಿ ಆ ಬಳಿಕ ಕಾದಾಟಕ್ಕೆ ಕಾರಣವಾಯಿತು.

ಇದರ ನಡುವೆ ಸೆಲೆಬ್ರಿಟಿಗಳ ಜಗಳವನ್ನು ತಡೆಯಲು ಪಂದ್ಯಾವಳಿಯ ಆಯೋಜಕರು ಹರಸಾಹಸಪಟ್ಟರು. ಅಲ್ಲದೆ ಅಂತಿಮವಾಗಿ ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಲಾಯಿತು. ಇದೀಗ ಈ ಜಗಳದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್