AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಕ್ರಿಕೆಟ್ ಲೀಗ್​ನಲ್ಲಿ ಕೈ ಕೈ ಮಿಲಾಯಿಸಿದ ಸೆಲೆಬ್ರಿಟಿಗಳು..!

ಸೆಲೆಬ್ರಿಟಿಗಳ ಜಗಳವನ್ನು ತಡೆಯಲು ಪಂದ್ಯಾವಳಿಯ ಆಯೋಜಕರು ಹರಸಾಹಸಪಟ್ಟರು. ಅಲ್ಲದೆ ಅಂತಿಮವಾಗಿ ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಲಾಯಿತು. ಇದೀಗ ಬಾಂಗ್ಲಾದೇಶ್​ ಸೆಲೆಬ್ರಿಟಿಗಳ ಜಗಳದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

VIDEO: ಕ್ರಿಕೆಟ್ ಲೀಗ್​ನಲ್ಲಿ ಕೈ ಕೈ ಮಿಲಾಯಿಸಿದ ಸೆಲೆಬ್ರಿಟಿಗಳು..!
BCCL Fight
TV9 Web
| Edited By: |

Updated on: Sep 30, 2023 | 9:31 PM

Share

ಕ್ರಿಕೆಟ್ ಮೈದಾನದಲ್ಲಿ ಮಾತಿನ ಚಕಮಕಿ ನಡೆಯುವುದು ಸಾಮಾನ್ಯ. ಅದರಲ್ಲೂ ಸ್ಲೆಡ್ಜಿಂಗ್ ಆಗಾಗ್ಗೆ ಕಾಣ ಸಿಗುತ್ತವೆ. ಆದರೆ ಇಲ್ಲೊಂದು ಲೀಗ್​ನಲ್ಲಿ ಒಂದು ಫೋರ್​ಗಳಾಗಿ ಖ್ಯಾತನಾಮರು ಕೈ ಕೈ ಮಿಲಾಯಿಸಿದ ಘಟನೆ ನಡೆದಿದೆ. ಇಂತಹದೊಂದು ಅಹಿತಕರ ಘಟನೆ ನಡೆದಿರುವುದು ಬಾಂಗ್ಲಾದೇಶ್​ನ ಸೆಲೆಬ್ರಿಟಿ ಕ್ರಿಕೆಟ್ ಲೀಗ್​ನಲ್ಲಿ. ಈ ಲೀಗ್‌ನ ಪಂದ್ಯವೊಂದರಲ್ಲಿ ಮುಸ್ತಫಾ ಕಮಾಲ್ ರಿಯಾಜ್ ಮತ್ತು ದೀಪಂಕರ್ ದೀಪನ್ ಅವರ ತಂಡಗಳು ಮುಖಾಮುಖಿಯಾಗಿತ್ತು.

ಜಿದ್ದಾಜಿದ್ದಿನ ಹೋರಾಟವನ್ನು ನಿರೀಕ್ಷಿಸಲಾಗಿದ್ದ ಈ ಪಂದ್ಯದಲ್ಲಿ ಹಣಾಹಣಿ ಕಂಡು ಬಂದಿದ್ದು ಮಾತ್ರ ಅಚ್ಚರಿ. ಅದು ಕೂಡ ಕೇವಲ ಒಂದು ಫೋರ್​ಗಾಗಿ ಉಭಯ ತಂಡಗಳ ಆಟಗಾರರು ಪರಸ್ಪರ ಹೊಡೆದಾಟಕ್ಕಿಳಿದಿರುವುದು ಪರಮಾಶ್ಚರ್ಯ ಎನ್ನದೇ ವಿಧಿಯಿಲ್ಲ.

ಏಕೆಂದರೆ ಇದೊಂದು ಸೆಲೆಬ್ರಿಟಿ ಲೀಗ್ ಪಂದ್ಯ. ಇದರ ಉದ್ದೇಶವೇ ಎಲ್ಲಾ ಕಲಾವಿದರನ್ನು ಒಗ್ಗೂಡಿಸುವುದಾಗಿತ್ತು. ಆದರೆ ಕ್ರಿಕೆಟ್ ಪಂದ್ಯಾಟ ರಣಾಂಗಣವಾದ ಪರಿಣಾಮ ಪಂದ್ಯವನ್ನೇ ರದ್ದುಗೊಳಿಸಲಾಯಿತು. ಅಷ್ಟೇ ಅಲ್ಲದೆ ಈ ಹೊಡೆದಾಟದಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ.

ಹೊಡೆದಾಟಕ್ಕೆ ಕಾರಣವೇನು?

ವರದಿಗಳ ಪ್ರಕಾರ, ಈ ಪಂದ್ಯದಲ್ಲಿ ಜಗಳಕ್ಕೆ ಮುಖ್ಯ ಕಾರಣ ಅಂಪೈರ್‌ ನೀಡಿದ ತಪ್ಪು ತೀರ್ಪು. ಅಂಪೈರ್ ಬೌಂಡರಿ ನೀಡದ ಹಿನ್ನೆಲೆಯಲ್ಲಿ ಈ ಉಭಯ ತಂಡಗಳ ನಡುವೆ ವಾಗ್ವಾದ ನಡೆಯಿತು. ಈ ಮಾತಿನ ಚಕಮಕಿ ಆ ಬಳಿಕ ಕಾದಾಟಕ್ಕೆ ಕಾರಣವಾಯಿತು.

ಇದರ ನಡುವೆ ಸೆಲೆಬ್ರಿಟಿಗಳ ಜಗಳವನ್ನು ತಡೆಯಲು ಪಂದ್ಯಾವಳಿಯ ಆಯೋಜಕರು ಹರಸಾಹಸಪಟ್ಟರು. ಅಲ್ಲದೆ ಅಂತಿಮವಾಗಿ ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಲಾಯಿತು. ಇದೀಗ ಈ ಜಗಳದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ