AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vidhwath Kaverappa: ವಿಧ್ವತ್ ಕಾವೇರಪ್ಪ ಬೆಂಕಿ ಬೌಲಿಂಗ್: ಕೇವಲ 60 ರನ್​ಗೆ ಆಲೌಟ್

Deodhar Trophy 2023: ದಕ್ಷಿಣ ವಲಯ ಪರ ಕರಾರುವಾಕ್ ದಾಳಿ ಸಂಘಟಿಸಿದ ವಿಧ್ವತ್ ಕಾವೇರಪ್ಪ ಕೇವಲ 17 ರನ್ 5 ವಿಕೆಟ್​ ಕಬಳಿಸಿ ಮಿಂಚಿದ್ದಾರೆ.

Vidhwath Kaverappa: ವಿಧ್ವತ್ ಕಾವೇರಪ್ಪ ಬೆಂಕಿ ಬೌಲಿಂಗ್: ಕೇವಲ 60 ರನ್​ಗೆ ಆಲೌಟ್
Vidhwath Kaverappa
TV9 Web
| Edited By: |

Updated on: Jul 25, 2023 | 3:32 PM

Share

Deodhar Trophy 2023: ಪುದುಚೇರಿಯಲ್ಲಿ ನಡೆದ ದೇವಧರ್ ಟ್ರೋಫಿಯ ಮೊದಲ ಪಂದ್ಯದಲ್ಲಿ ದಕ್ಷಿಣ ವಲಯ ತಂಡವು ಭರ್ಜರಿ ಜಯ ಸಾಧಿಸಿದೆ. ಉತ್ತರ ವಲಯ ವಿರುದ್ಧದ ಈ ಪಂದ್ಯದ ಗೆಲುವಿನ ರೂವಾರಿ ಕೊಡಗಿನ ಕುವರ ವಿಧ್ವತ್ ಕಾವೇರಪ್ಪ ಎಂಬುದು ವಿಶೇಷ. ಈ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ವಲಯ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಇನಿಂಗ್ಸ್ ಆರಂಭಿಸಿದ ರೋಹನ್ ಕುನ್ನುಮ್ಮಲ್ ಹಾಗೂ ಮಯಾಂಕ್ ಅಗರ್ವಾಲ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 117 ರನ್​ಗಳ ಜೊತೆಯಾಟವಾಡಿದ ಈ ಜೋಡಿ ಬೃಹತ್ ಮೊತ್ತಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು. 61 ಎಸೆತಗಳನ್ನು ಎದುರಿಸಿದ ರೋಹನ್ 3 ಭರ್ಜರಿ ಸಿಕ್ಸ್, 8 ಫೋರ್​ಗಳೊಂದಿಗೆ 70 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಇನ್ನೊಂದೆಡೆ ಮಯಾಂಕ್ ಅಗರ್ವಾಲ್ 68 ಎಸೆತಗಳಲ್ಲಿ 64 ರನ್​ ಸಿಡಿಸಿದರು. ಆದರೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೇವದತ್ ಪಡಿಕ್ಕಲ್ ಕೇವಲ 17 ರನ್​ಗಳಿಸಿ ನಿರಾಸೆ ಮೂಡಿಸಿದರು. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಎನ್​. ಜಗದೀಸನ್ 66 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್​ ಹಾಗೂ 4 ಫೋರ್​ಗಳೊಂದಿಗೆ 72 ರನ್​ ಚಚ್ಚಿದರು. ಈ ಮೂಲಕ ತಂಡದ ಮೊತ್ತ 300 ರ ಗಡಿದಾಟುವಲ್ಲಿ ಪ್ರಮುಖ ಪಾತ್ರವಹಿಸಿದರು. ಅಂತಿಮವಾಗಿ 50 ಓವರ್​ಗಳಲ್ಲಿ 8 ವಿಕೆಟ್​ ಕಳೆದುಕೊಂಡು ದಕ್ಷಿಣ ವಲಯ ತಂಡ 303 ರನ್ ಕಲೆಹಾಕಿತು.

304 ರನ್​ಗಳ ಕಠಿಣ ಗುರಿ ಪಡೆದ ಉತ್ತರ ವಲಯ ತಂಡಕ್ಕೆ ಆರಂಭದಲ್ಲೇ ಕನ್ನಡಿಗ ವಿಧ್ವತ್ ಕಾವೇರಪ್ಪ ಆಘಾತ ನೀಡಿದರು. ಮೂರನೇ ಓವರ್​ನಲ್ಲಿ ಅಭಿಷೇಕ್ ಶರ್ಮಾ (1) ಹಾಗೂ ಶುಭಂ ಖಜುರಿಯಾ (10) ವಿಕೆಟ್ ಉರುಳಿಸಿದ ವಿಧ್ವತ್ ದಕ್ಷಿಣ ವಲಯಕ್ಕೆ ಉತ್ತಮ ಆರಂಭ ಒದಗಿಸಿದರು.

ಇನ್ನು 5ನೇ ಓವರ್​ನಲ್ಲಿ ವಿಧ್ವತ್ ಕಾವೇರಪ್ಪ ಪ್ರಭ್​ಸಿಮ್ರಾನ್ ಸಿಂಗ್ (2) ಹಾಗೂ ನಾಯಕ ನಿತೀಶ್ ರಾಣಾ (4) ವಿಕೆಟ್ ಕಬಳಿಸಿದರು. ಹಾಗೆಯೇ ವಿವ್ರಾಂತ್ ಶರ್ಮಾ (4) ರನ್ನು ಔಟ್ ಮಾಡಿ ವಿ ಕೌಶಿಕ್ 5ನೇ ಯಶಸ್ಸು ತಂದುಕೊಟ್ಟರು.

ಇತ್ತ ಕೇವಲ 26 ರನ್​ಗಳಿಗೆ 5 ವಿಕೆಟ್​ ಕಳೆದುಕೊಂಡು ಉತ್ತರ ವಲಯ ತಂಡ ಸಂಕಷ್ಟಕ್ಕೆ ಸಿಲುಕಿತು. ಈ ವೇಳೆ ಪಂದ್ಯಕ್ಕೆ ಮಳೆ ಅಡಚಣೆಯನ್ನುಂಟು ಮಾಡಿತು. ಆ ಬಳಿಕ ಪಂದ್ಯ ಶುರುವಾದಾಗ ವಿಜೆಡಿ ನಿಯಮ ಅನ್ವಯ 35 ಓವರ್​ಗಳಲ್ಲಿ 262 ರನ್​ಗಳ ಟಾರ್ಗೆಟ್ ನೀಡಲಾಯಿತು.

ಆದರೆ ಅದಾಗಲೇ ಇಡೀ ಪಂದ್ಯದ ಮೇಲೆ ಹಿಡಿತ ಸಾಧಿಸಿದ ದಕ್ಷಿಣ ವಲಯ ಪರ ವಿಜಯಕುಮಾರ್ ವೈಶಾಕ್ ಮತ್ತೆರಡು ವಿಕೆಟ್ ಪಡೆದರು. ಇನ್ನು ಸಂದೀಪ್ ಶರ್ಮಾ ವಿಕೆಟ್ ಕಬಳಿಸಿ ವಿಧ್ವತ್ ಕಾವೇರಪ್ಪ 5 ವಿಕೆಟ್​ಗಳ ಸಾಧನೆ ಮಾಡಿದರು. ಪರಿಣಾಮ ಉತ್ತರ ವಲಯ ತಂಡವು ಕೇವಲ 60 ರನ್​ಗಳಿಗೆ ಆಲೌಟ್ ಆಯಿತು.

ದಕ್ಷಿಣ ವಲಯ ಪರ ಕರಾರುವಾಕ್ ದಾಳಿ ಸಂಘಟಿಸಿದ ವಿಧ್ವತ್ ಕಾವೇರಪ್ಪ 6 ಓವರ್​ಗಳಲ್ಲಿ 17 ರನ್ 5 ವಿಕೆಟ್​ ಕಬಳಿಸಿ ಮಿಂಚಿದರು.

ಉತ್ತರ ವಲಯ (ಪ್ಲೇಯಿಂಗ್ XI): ಪ್ರಭ್‌ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಮನ್‌ದೀಪ್ ಸಿಂಗ್, ನಿತೀಶ್ ರಾಣಾ (ನಾಯಕ), ಶುಭಂ ಖಜುರಿಯಾ, ವಿವ್ರಾಂತ್ ಶರ್ಮಾ, ಮಯಾಂಕ್ ಮಾರ್ಕಾಂಡೆ, ರಿಷಿ ಧವನ್, ಮಯಾಂಕ್ ದಾಗರ್, ಮಯಾಂಕ್ ಯಾದವ್, ಸಂದೀಪ್ ಶರ್ಮಾ.

ಇದನ್ನೂ ಓದಿ: Vidhwath Kaverappa: ದೇಶೀಯ ಅಂಗಳದಲ್ಲಿ ಕನ್ನಡಿಗ ಕಾವೇರಪ್ಪನ ಕರಾಮತ್ತು

ದಕ್ಷಿಣ ವಲಯ (ಪ್ಲೇಯಿಂಗ್ XI): ಮಯಾಂಕ್ ಅಗರ್ವಾಲ್ (ನಾಯಕ), ದೇವದತ್ ಪಡಿಕ್ಕಲ್, ಎನ್ ಜಗದೀಸನ್ (ವಿಕೆಟ್ ಕೀಪರ್), ಅರುಣ್ ಕಾರ್ತಿಕ್, ರಿಕಿ ಭುಯಿ, ವಾಷಿಂಗ್ಟನ್ ಸುಂದರ್, ರೋಹನ್ ಕುನ್ನುಮ್ಮಲ್, ಸಾಯಿ ಕಿಶೋರ್, ವಾಸುಕಿ ಕೌಶಿಕ್, ವಿಜಯ್‌ಕುಮಾರ್ ವೈಶಾಕ್, ವಿಧ್ವತ್ ಕಾವೇರಪ್ಪ.

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​