AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Hazare Trophy 2021: ರಾಜಸ್ಥಾನ್ ವಿರುದ್ದ ಭರ್ಜರಿ ಜಯ: ಮುಂದಿನ ಹಂತಕ್ಕೇರಿದ ಕರ್ನಾಟಕ

Vijay Hazare Trophy 2021-22: ಮೊದಲ ವಿಕೆಟ್ ಪ್ರಸಿದ್ಧ್ ಕೃಷ್ಣ ಪಡೆದರೆ ಉಳಿದ ನಾಲ್ಕು ವಿಕೆಟ್​ಗಳನ್ನು ವಿಜಯ್ ಕುಮಾರ್ ವೈಶಾಖ್ ಉರುಳಿಸಿದ್ದರು. ಇದಾಗ್ಯೂ ಮತ್ತೊಂದೆಡೆ ರಾಜಸ್ಥಾನ್ ನಾಯಕ ದೀಪಕ್ ಹೂಡಾ ಮಾತ್ರ ಕ್ರೀಸ್ ಕಚ್ಚಿ ನಿಂತಿದ್ದರು.

Vijay Hazare Trophy 2021: ರಾಜಸ್ಥಾನ್ ವಿರುದ್ದ ಭರ್ಜರಿ ಜಯ: ಮುಂದಿನ ಹಂತಕ್ಕೇರಿದ ಕರ್ನಾಟಕ
Karnataka Team
TV9 Web
| Edited By: |

Updated on:Dec 19, 2021 | 4:58 PM

Share

ವಿಜಯ್ ಹಜಾರೆ ಟೂರ್ನಿ (Vijay Hazare Trophy 2021) ಪ್ರೀ ಕ್ವಾರ್ಟರ್​ ಫೈನಲ್​ನಲ್ಲಿ ಕರ್ನಾಟಕ (Karnataka vs Rajasthan) ತಂಡವು ರಾಜಸ್ಥಾನ್ ವಿರುದ್ದ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಕರ್ನಾಟಕ ತಂಡವು ಕ್ವಾರ್ಟರ್​ ಫೈನಲ್​ಗೆ ಪ್ರವೇಶಿಸಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮನೀಷ್ ಪಾಂಡೆ ಬೌಲಿಂಗ್ ಆಯ್ದುಕೊಂಡಿದ್ದರು. ನಾಯಕ ನಿರ್ಧಾರವನ್ನು ಸಮರ್ಥಿಸುವಂತೆ ದಾಳಿ ಸಂಘಟಿಸಿದ ಕರ್ನಾಟಕ ಬೌಲರುಗಳು 20 ರನ್​ ಆಗುವಷ್ಟರಲ್ಲಿ 5 ವಿಕೆಟ್ ಉರುಳಿಸಿ ರಾಜಸ್ಥಾನ್​ಗೆ ಆರಂಭಿಕ ಆಘಾತ ನೀಡಿದ್ದರು.

ಮೊದಲ ವಿಕೆಟ್ ಪ್ರಸಿದ್ಧ್ ಕೃಷ್ಣ ಪಡೆದರೆ ಉಳಿದ ನಾಲ್ಕು ವಿಕೆಟ್​ಗಳನ್ನು ವಿಜಯ್ ಕುಮಾರ್ ವೈಶಾಖ್ ಉರುಳಿಸಿದ್ದರು. ಇದಾಗ್ಯೂ ಮತ್ತೊಂದೆಡೆ ರಾಜಸ್ಥಾನ್ ನಾಯಕ ದೀಪಕ್ ಹೂಡಾ ಮಾತ್ರ ಕ್ರೀಸ್ ಕಚ್ಚಿ ನಿಂತಿದ್ದರು. ಏಕಾಂಗಿಯಾಗಿ ಕರ್ನಾಟಕ ಬೌಲರುಗಳನ್ನು ಎದುರಿಸಿದ ಹೂಡಾ ಒತ್ತಡದ ನಡುವೆಯೂ ಅತ್ಯುತ್ತಮವಾಗಿ ಬ್ಯಾಟ್ ಬೀಸಿದ್ದರು. 5 ಭರ್ಜರಿ ಸಿಕ್ಸರ್ ಹಾಗೂ 9 ಬೌಂಡರಿಗಳೊಂದಿಗೆ 109 ಎಸೆತಗಳಲ್ಲಿ ಶತಕ ಬಾರಿಸಿ ಮಿಂಚಿದ್ದರು. ದೀಪಕ್ ಹೂಡಾ ಅವರ ಆಕರ್ಷಕ 109 ರನ್​ಗಳ ನೆರವಿನಿಂದ ರಾಜಸ್ಥಾನ್ ತಂಡದ ಮೊತ್ತ 150ರ ಗಡಿದಾಟಿತು. ಆದರೆ 9ನೇ ವಿಕೆಟ್​ ಆಗಿ ಹೂಡ ಕೂಡ ಔಟಾಗುವುದರೊಂದಿಗೆ ಅಂತಿಮವಾಗಿ 41.4 ಓವರ್​ನಲ್ಲಿ 200 ರನ್​ಗಳಿಗೆ ಸರ್ವಪತನ ಕಂಡಿತು. ಕರ್ನಾಟಕ ಪರ ವೈಶಾಖ್ 4 ವಿಕೆಟ್ ಪಡೆದರೆ, ಕೃಷ್ಣಪ್ಪ ಗೌತಮ್ 2 ವಿಕೆಟ್ ಕಬಳಿಸಿದರು.

ಇನ್ನು 201 ರನ್​ಗಳ ಗುರಿ ಪಡೆದ ಕರ್ನಾಟಕ ತಂಡದ ಆರಂಭ ಕೂಡ ಉತ್ತಮವಾಗಿರಲಿಲ್ಲ. ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ಕೇವಲ 4 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು. ಆ ಬಳಿಕ ಜೊತೆಗೂಡಿದ ರವಿಕುಮಾರ್ ಸಮರ್ಥ್ ಹಾಗೂ ಕೆ ಸಿದ್ಧಾರ್ಥ್ 2ನೇ ವಿಕೆಟ್​ಗೆ 75 ರನ್​ಗಳ ಜೊತೆಯಾಟವಾಡಿದರು. ಈ ನಡುವೆ ಸಮರ್ಥ್ 54 ರನ್​ಗಳಿಸಿ ವಿಕೆಟ್ ಕೈಚೆಲ್ಲಿ ಹೊರನಡೆದರು.

ಇದಾದ ಬಳಿಕ ಕ್ರೀಸ್​ಗೆ ಆಗಮಿಸಿದ ಮನೀಷ್ ಪಾಂಡೆ ಉತ್ತಮವಾಗಿ ಬ್ಯಾಟ್ ಬೀಸಿದರು. ಅದರಂತೆ ಮೂರನೇ ವಿಕೆಟ್​ಗೆ 104 ರನ್​ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಗುರಿ ಮುಟ್ಟಿಸಿದರು. ಕೆ ಸಿದ್ಧಾರ್ಥ್ ಅಜೇಯ 85 ರನ್​ಗಳಿಸಿದರೆ, ಮನೀಷ್ ಪಾಂಡೆ 52 ರನ್​ ಬಾರಿಸಿದರು. ಅದರಂತೆ 43.4 ಓವರ್​ನಲ್ಲಿ 2 ವಿಕೆಟ್ ನಷ್ಟಕ್ಕೆ 204 ರನ್​ಗಳಿಸುವ ಮೂಲಕ ಕರ್ನಾಟಕ ತಂಡವು 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಕರ್ನಾಟಕ ತಂಡವು ಕ್ವಾರ್ಟರ್​ ಫೈನಲ್​ಗೆ ಪ್ರವೇಶಿಸಿದೆ.

ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…

ಇದನ್ನೂ ಓದಿ: Sourav Ganguly: ವಿರಾಟ್ ಕೊಹ್ಲಿ ಇಲ್ಲದಿದ್ದಾಗಲೂ ಟೀಮ್ ಇಂಡಿಯಾ ಕಪ್ ಗೆದ್ದಿದೆ!

ಇದನ್ನೂ ಓದಿ: IPL 2022: ಪಂಜಾಬ್ ಕಿಂಗ್ಸ್​ಗೆ ಕನ್ನಡಿಗನೇ ಕಿಂಗ್ ಆಗುವ ಸಾಧ್ಯತೆ..!

(Vijay Hazare Trophy 2021-22: Karnataka won over Rajasthan)

Published On - 4:51 pm, Sun, 19 December 21

ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ