AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Hazare Trophy 2021: ತಮಿಳುನಾಡು ವಿರುದ್ದ ಕರ್ನಾಟಕಕ್ಕೆ ಹೀನಾಯ ಸೋಲು

Vijay Hazare Trophy 2021-22: ರೋಹನ್-ಮನೀಷ್ ಜೋಡಿ 3ನೇ ವಿಕೆಟ್​ಗೆ 67 ರನ್​ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ 37 ರನ್​ಗಳಿಸಿದ್ದ ಕದಮ್ ವಾಷಿಂಗ್ಟನ್ ಸುಂದರ್​​ಗೆ ವಿಕೆಟ್ ಒಪ್ಪಿಸಿದರು.

Vijay Hazare Trophy 2021: ತಮಿಳುನಾಡು ವಿರುದ್ದ ಕರ್ನಾಟಕಕ್ಕೆ ಹೀನಾಯ ಸೋಲು
Tamil Nadu Team
TV9 Web
| Edited By: |

Updated on: Dec 09, 2021 | 3:20 PM

Share

ವಿಜಯ್ ಹಜಾರೆ ಟೂರ್ನಿಯಲ್ಲಿನ (Vijay Hazare Trophy 2021) 2ನೇ ಪಂದ್ಯದಲ್ಲಿ ಕರ್ನಾಟಕ ತಂಡವು ತಮಿಳುನಾಡುವ ವಿರುದ್ದ ಹೀನಾಯ ಸೋಲನುಭವಿಸಿದೆ. ಮೊದಲ ಪಂದ್ಯದಲ್ಲಿ ಪುದುಚೇರಿ ವಿರುದ್ದ 236 ರನ್​ಗಳ ಭರ್ಜರಿ ಜಯ ಸಾಧಿಸಿದ್ದ ಕರ್ನಾಟಕ ತಂಡವು ತಮಿಳುನಾಡುವ ವಿರುದ್ದ ಮುಗ್ಗರಿಸಿತು. ಟಾಸ್ ಗೆದ್ದ ನಾಯಕ ಮನೀಷ್ ಪಾಂಡೆ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್​ ಆರಂಭಿಸಿದ ಆರಂಭಿಕ ಆಘಾತಕ್ಕೆ ಒಳಗಾಯಿತು. ಮೊದಲ ಓವರ್​ನಲ್ಲೇ ರವಿಕುಮಾರ್ ಸಮರ್ಥ್ ಶೂನ್ಯಕ್ಕೆ ಔಟಾದರು. ಆ ಬಳಿಕ ಬಂದ ಸಿದ್ಧಾರ್ಥ್ (7) ಕೂಡ ಬೇಗನೆ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಆರಂಭಿಕ ರೋಹನ್ ಕದಮ್ ಜೊತೆಗೂಡಿದ ನಾಯಕ ಮನೀಷ್ ಪಾಂಡೆ ತಂಡಕ್ಕೆ ಆಸರೆಯಾದರು.

ಅದರಂತೆ ರೋಹನ್-ಮನೀಷ್ ಜೋಡಿ 3ನೇ ವಿಕೆಟ್​ಗೆ 67 ರನ್​ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ 37 ರನ್​ಗಳಿಸಿದ್ದ ಕದಮ್ ವಾಷಿಂಗ್ಟನ್ ಸುಂದರ್​​ಗೆ ವಿಕೆಟ್ ಒಪ್ಪಿಸಿದರು. ಇನ್ನು ತಂಡದ ಮೊತ್ತ 103 ರನ್ ಆಗಿದ್ದ ವೇಳೆ 40 ರನ್​ಗಳಿಸಿದ್ದ ಮನೀಷ್ ಪಾಂಡೆ ಕೂಡ ಔಟಾದರು. ನಾಲ್ಕು ವಿಕೆಟ್​ ನಷ್ಟಕ್ಕೆ 103 ರನ್​ಗಳಿಸಿದ್ದ ಕರ್ನಾಟಕ ಆ ಬಳಿಕ ದಿಢೀರ್ ಕುಸಿತಕ್ಕೊಳಗಾಯಿತು.

ಕರುಣ್ ನಾಯರ್ (9), ಶರತ್ (3), ಸುಚಿತ್ (0) ಹಾಗೂ ವೆಂಟಕೇಶ್ (2) ಬ್ಯಾಕ್ ಟು ಬ್ಯಾಕ್ ವಿಕೆಟ್ ಒಪ್ಪಿಸಿದರು. ಇನ್ನು ಅಂತಿಮವಾಗಿ ಬೌಲರುಗಳನ್ನು ಕ್ಷಣಾರ್ಧದಲ್ಲೇ ತಮಿಳುನಾಡು ತಂಡ ಔಟ್ ಮಾಡಿದರು. ಪರಿಣಾಮ ಕೇವಲ 19 ರನ್​ಗಳಿಸುವಷ್ಟರಲ್ಲಿ ಕರ್ನಾಟಕ ತಂಡವು 6 ವಿಕೆಟ್ ಕಳೆದುಕೊಂಡಿತು. ಅಂತಿಮವಾಗಿ 36.3 ಓವರ್​ನಲ್ಲಿ ಕರ್ನಾಟಕ ತಂಡವು 122 ರನ್​ಗಳಿಗೆ ಸರ್ವಪತನ ಕಂಡಿತು. ತಮಿಳುನಾಡು ಪರ ಸಿದ್ದಾರ್ಥ್ 4 ವಿಕೆಟ್​ ಕಬಳಿಸಿದರೆ, ಸಾಯಿ ಕಿಶೋರ್ 3 ವಿಕೆಟ್ ಪಡೆದರು.

123 ರನ್​ಗಳ ಸಾಧಾರಣ ಗುರಿ ಪಡೆದ ತಮಿಳುನಾಡು ತಂಡವು ಎಚ್ಚರಿಕೆಯ ಆಟ ಪ್ರದರ್ಶಿಸಿದರು. ತಂಡದ ಮೊತ್ತ 58 ರನ್​ ವೇಳೆಗೆ ಇಬ್ಬರು ಆರಂಭಿಕರನ್ನು ಕರ್ನಾಟಕ ತಂಡವು ಔಟ್ ಮಾಡಿದರೂ, ಆ ಬಳಿಕ ಬಂದ ಬಾಬಾ ಇಂದ್ರಜಿತ್ ಅಜೇಯ ಅರ್ಧಶತಕ ಬಾರಿಸಿದರು. ಇನ್ನು ವಾಷಿಂಗ್ಟನ್ ಸುಂದರ್ 31 ರನ್​ಗಳ ಕಾಣಿಕೆ ನೀಡಿದರು. ಅದರಂತೆ ತಮಿಳುನಾಡು ತಂಡವು 28 ಓವರ್​ನಲ್ಲಿ 2 ವಿಕೆಟ್ ಕಳೆದುಕೊಂಡು 123 ರನ್​ಗಳ ಗುರಿ ಮುಟ್ಟಿತು. ಈ ಮೂಲಕ 8 ವಿಕೆಟ್​ ಭರ್ಜರಿ ಜಯ ಸಾಧಿಸಿತು.

ಇದನ್ನೂ ಓದಿ: World Record: ಬರೋಬ್ಬರಿ 15 ಸಿಕ್ಸ್​: ಕ್ರಿಕೆಟ್ ಇತಿಹಾಸದ ಅತೀ ವೇಗದ ಶತಕ

ಇದನ್ನೂ ಓದಿ: IPL 20222: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

ಇದನ್ನೂ ಓದಿ: Virat Kohli: ಭಾರತ ತಂಡ ಕಂಡ ಅತ್ಯಂತ ಯಶಸ್ವಿ ನಾಯಕ ವಿರಾಟ್ ಕೊಹ್ಲಿ…ಆದರೂ

(Vijay Hazare Trophy 2021: Tamil Nadu Beat Karnataka)

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ