AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Hazare Trophy 2022: ಕಾವೇರಪ್ಪ ಕರಾರುವಾಕ್ ದಾಳಿ: ಸೆಮೀಸ್​ಗೆ ಕರ್ನಾಟಕ

Vijay Hazare Trophy 2022: 236 ರನ್​ಗಳ ಟಾರ್ಗೆಟ್ ಪಡೆದ ಕರ್ನಾಟಕ ತಂಡ ಕೂಡ ಆರಂಭಿಕ ಆಘಾತಕ್ಕೆ ಒಳಗಾಯಿತು. ನಾಯಕ ಮಯಾಂಕ್ ಅಗರ್ವಾಲ್ (1) ಸಿದ್ದಾರ್ಥ್​ ಕೌಲ್​ಗೆ ವಿಕೆಟ್ ಒಪ್ಪಿಸಿ ಹೊರನಡೆದರು.

Vijay Hazare Trophy 2022: ಕಾವೇರಪ್ಪ ಕರಾರುವಾಕ್ ದಾಳಿ: ಸೆಮೀಸ್​ಗೆ ಕರ್ನಾಟಕ
Vidhwath Kaverappa
TV9 Web
| Edited By: |

Updated on: Nov 28, 2022 | 8:32 PM

Share

Vijay Hazare Trophy 2022: ವಿಜಯ್ ಹಜಾರೆ ಟೂರ್ನಿಯ ಮೊದಲ ಕ್ವಾರ್ಟರ್​ ಫೈನಲ್​ನಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಕರ್ನಾಟಕ (Karnataka Team) ತಂಡವು ಸೆಮಿಫೈನಲ್​ಗೆ ಪ್ರವೇಶಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂಜಾಬ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಪಂಜಾಬ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಮೊದಲ ಓವರ್​ನ ಮೊದಲ ಎಸೆತದಲ್ಲಿ ಪ್ರಭ್​ಸಿಮ್ರಾನ್ ಸಿಂಗ್ ವಿಕೆಟ್​ ಪಡೆಯುವ ಮೂಲಕ ವಿಧ್ವತ್ ಕಾವೇರಪ್ಪ ಕರ್ನಾಟಕಕ್ಕೆ ಮೊದಲ ಜಯ ತಂದುಕೊಟ್ಟಿದ್ದರು. ಇದರ ಬೆನ್ನಲ್ಲೇ ಅನ್ಮೋಲ್​ಪ್ರೀತ್ ಸಿಂಗ್ (4) ಹಾಗೂ ನಾಯಕ ಮಂದೀಪ್ ಸಿಂಗ್ (6) ಅವರನ್ನು ವಿ. ಕೌಶಿಕ್ ಹಾಗೂ ರೋನಿತ್ ಮೋರೆ ಪೆವಿಲಿಯನ್​ಗೆ ಕಳುಹಿಸಿದರು. ಇತ್ತ ಆರಂಭದಲ್ಲೇ 3 ವಿಕೆಟ್ ಕಳೆದುಕೊಂಡರೂ ಮತ್ತೋರ್ವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕ್ರೀಸ್ ಕಚ್ಚಿ ನಿಂತಿದ್ದರು.

ಕರ್ನಾಟಕ ಬೌಲರ್​ಗಳ ವಿರುದ್ಧ ಅತ್ಯುತ್ತಮ ಇನಿಂಗ್ಸ್​ ಆಡಿದ ಎಡಗೈ ದಾಂಡಿಗ ಅಭಿಷೇಕ್ ಶರ್ಮಾ 123 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 12 ಫೋರ್​ನೊಂದಿಗೆ 109 ರನ್ ಬಾರಿಸಿದರು. ಈ ಮೂಲಕ ತಂಡಕ್ಕೆ ಆಸರೆಯಾದರು. ಅಭಿಷೇಕ್ ಶರ್ಮಾ ಬಾರಿಸಿದ ಈ ಆಕರ್ಷಕ ಶತಕದ ನೆರವಿನಿಂದ ಪಂಜಾಬ್ ತಂಡವು 50 ಓವರ್​ಗಳಲ್ಲಿ 235 ರನ್​ಗಳಿಸಿ ಆಲೌಟ್ ಆಯಿತು. ಕರ್ನಾಟಕ ಪರ ವಿಧ್ವತ್ ಕಾವೇರಪ್ಪ 4 ವಿಕೆಟ್ ಕಬಳಿಸಿದರೆ, ರೋನಿತ್ ಮೋರೆ 2 ವಿಕೆಟ್ ಪಡೆದು ಮಿಂಚಿದರು.

236 ರನ್​ಗಳ ಟಾರ್ಗೆಟ್ ಪಡೆದ ಕರ್ನಾಟಕ ತಂಡ ಕೂಡ ಆರಂಭಿಕ ಆಘಾತಕ್ಕೆ ಒಳಗಾಯಿತು. ನಾಯಕ ಮಯಾಂಕ್ ಅಗರ್ವಾಲ್ (1) ಸಿದ್ದಾರ್ಥ್​ ಕೌಲ್​ಗೆ ವಿಕೆಟ್ ಒಪ್ಪಿಸಿ ಹೊರನಡೆದರು. ಇದಾಗ್ಯೂ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ರವಿಕುಮಾರ್ ಸಮರ್ಥ್ 106 ಎಸೆತಗಳಲ್ಲಿ 71 ರನ್​ ಕಲೆಹಾಕಿ ಸನ್​ವೀರ್ ಸಿಂಗ್ ಎಸೆತದಲ್ಲಿ ಔಟಾದರು.

ಇದನ್ನೂ ಓದಿ
Image
Suryakumar Yadav: ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಸೂರ್ಯಕುಮಾರ್ ಯಾದವ್
Image
BPL 2023: ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ಗೆ ಭಾರತೀಯ ಆಟಗಾರ ಎಂಟ್ರಿ..!
Image
IPL 2023: 4 ವರ್ಷಗಳ ಬಳಿಕ ಐಪಿಎಲ್​ನತ್ತ ಜೋ ರೂಟ್..!
Image
ICC T20 Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ

ಇದನ್ನೂ ಓದಿ: Suresh Raina: ಸುರೇಶ್ ರೈನಾ ಹೆಸರಿನಲ್ಲಿರುವ ಈ 3 IPL ದಾಖಲೆಗಳ ಬಗ್ಗೆ ಗೊತ್ತಾ?

ಆ ಬಳಿಕ ನಿಕಿನ್ ಜೋಸ್ (29), ಮನೀಷ್ ಪಾಂಡೆ (35) ಹಾಗೂ ಶ್ರೇಯಸ್ ಗೋಪಾಲ್ (42) ಉಪಯುಕ್ತ ಕಾಣಿಕೆ ನೀಡಿದರು. ಅಂತಿಮ ಹಂತದಲ್ಲಿ ಮನೋಜ್ ಭಂಡಗೆ ಅಜೇಯ 25 ಹಾಗೂ ಕೃಷ್ಣಪ್ಪ ಗೌತಮ್ ಅಜೇಯ 6 ರನ್​ಗಳಿಸುವ ಮೂಲಕ 49.2 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ ತಂಡವನ್ನು ಗುರಿ ಮುಟ್ಟಿಸಿದರು. ಈ ಗೆಲುವಿನೊಂದಿಗೆ ಕರ್ನಾಟಕ ತಂಡವು ಸೆಮಿಫೈನಲ್​​ಗೆ ಪ್ರವೇಶಿಸಿದೆ. 10 ಓವರ್​ಗಳಲ್ಲಿ 40 ರನ್​ ನೀಡಿ 4 ಪ್ರಮುಖ ವಿಕೆಟ್ ಕಬಳಿಸಿದ ವಿಧ್ವತ್ ಕಾವೇರಪ್ಪ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಪಂಜಾಬ್ ಪ್ಲೇಯಿಂಗ್ ಇಲೆವೆನ್: ಅಭಿಷೇಕ್ ಶರ್ಮಾ , ಪ್ರಭ್​ಸಿಮ್ರಾನ್ ಸಿಂಗ್ , ಅನ್ಮೋಲ್ಪ್ರೀತ್ ಸಿಂಗ್ , ಮಂದೀಪ್ ಸಿಂಗ್ (ನಾಯಕ) , ಅನ್ಮೋಲ್ ಮಲ್ಹೋತ್ರಾ ( ವಿಕೆಟ್ ಕೀಪರ್ ) , ಹರ್ಪ್ರೀತ್ ಬ್ರಾರ್ , ಸನ್ವಿರ್ ಸಿಂಗ್ , ರಮಣದೀಪ್ ಸಿಂಗ್ , ಮಯಾಂಕ್ ಮಾರ್ಕಾಂಡೆ , ಬಲ್ತೇಜ್ ಸಿಂಗ್ , ಸಿದ್ದಾರ್ಥ್ ಕೌಲ್.

ಇದನ್ನೂ ಓದಿ: Suryakumar Yadav: ಟಾಪ್-1 ಪಟ್ಟಿಗೆ ಸೂರ್ಯಕುಮಾರ್ ಯಾದವ್ ಎಂಟ್ರಿ..!

ಕರ್ನಾಟಕ ಪ್ಲೇಯಿಂಗ್ ಇಲೆವೆನ್: ರವಿಕುಮಾರ್ ಸಮರ್ಥ್ , ಮಯಾಂಕ್ ಅಗರ್ವಾಲ್ (ನಾಯಕ) , ನಿಕಿನ್ ಜೋಸ್ , ಮನೀಶ್ ಪಾಂಡೆ , ಶ್ರೇಯಸ್ ಗೋಪಾಲ್ , ಶರತ್ ಬಿ ಆರ್ ( ವಿಕೆಟ್ ಕೀಪರ್ ) , ಮನೋಜ್ ಭಂಡಗೆ , ಕೃಷ್ಣಪ್ಪ ಗೌತಮ್ , ರೋನಿತ್ ಮೋರೆ , ವಿಧ್ವತ್ ಕಾವೇರಪ್ಪ , ವಾಸುಕಿ ಕೌಶಿಕ್

ಸೆಮಿಫೈನಲ್​ಗೆ 4 ತಂಡ ಎಂಟ್ರಿ:

ಬುಧವಾರ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ಸೌರಾಷ್ಟ್ರ ತಂಡವನ್ನು ಎದುರಿಸಲಿದೆ. ಹಾಗೆಯೇ 2ನೇ ಸೆಮೀಸ್​ನಲ್ಲಿ ಮಹಾರಾಷ್ಟ್ರ ಹಾಗೂ ಅಸ್ಸಾಂ ತಂಡಗಳು ಮುಖಾಮುಖಿಯಾಗಲಿದೆ. ಫೈನಲ್ ಪಂದ್ಯವು ಡಿಸೆಂಬರ್ 2 ರಂದು ಅಹಮದಾಬಾದ್​ನಲ್ಲಿ ನಡೆಯಲಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್