AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Hazare Trophy 2022: ಭರ್ಜರಿ ಜಯದೊಂದಿಗೆ ಕ್ವಾರ್ಟರ್​ ಫೈನಲ್​ಗೆ ಎಂಟ್ರಿ ಕೊಟ್ಟ ಕರ್ನಾಟಕ

Vijay Hazare Trophy 2022: ಮೊದಲ 10 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಕೇವಲ 29 ರನ್​ ಕಲೆಹಾಕಿದ್ದ ಜಾರ್ಖಂಡ್ ತಂಡಕ್ಕೆ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಕುಶಾಗ್ರ ಆಸರೆಯಾದರು. ಅನ್ಕುಲ್ ರಾಯ್ ಜೊತೆ ಉತ್ತಮ ಜೊತೆಯಾಟವಾಡಿ ಕುಶರಂಗ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

Vijay Hazare Trophy 2022: ಭರ್ಜರಿ ಜಯದೊಂದಿಗೆ ಕ್ವಾರ್ಟರ್​ ಫೈನಲ್​ಗೆ ಎಂಟ್ರಿ ಕೊಟ್ಟ ಕರ್ನಾಟಕ
Karnataka Team
TV9 Web
| Edited By: |

Updated on: Nov 26, 2022 | 10:03 PM

Share

Vijay Hazare Trophy 2022:  ವಿಜಯ್ ಹಜಾರೆ ಟೂರ್ನಿಯ ಪ್ರೀ ಕ್ವಾರ್ಟರ್​ ಫೈನಲ್​ನಲ್ಲಿ ಕರ್ನಾಟಕ ತಂಡವು ಜಾರ್ಖಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಜಾರ್ಖಂಡ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ದಾಳಿ ಸಂಘಟಿಸಿದ ಕರ್ನಾಟಕದ ವೇಗಿ ವಿದ್ವತ್ ಕಾವೇರಪ್ಪ ಮೊದಲ ಓವರ್​ನಲ್ಲೇ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ರೋನಿತ್ ಮೋರೆ ಕೂಡ 2ನೇ ಓವರ್​ನಲ್ಲಿ ಮತ್ತೊಂದು ವಿಕೆಟ್ ಉರುಳಿಸಿದರು. ಆರಂಭಿಕರಿಬ್ಬರನ್ನು ಶೂನ್ಯಕ್ಕೆ ಪೆವಿಲಿಯನ್​ಗೆ ಕಳುಹಿಸುವ ಮೂಲಕ ಉತ್ತಮ ಆರಂಭ ಪಡೆದ ಕರ್ನಾಟಕ ಮೊದಲ 10 ಓವರ್​ಗಳಲ್ಲಿ ಮೇಲುಗೈ ಸಾಧಿಸಿದರು.

ಮೊದಲ 10 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಕೇವಲ 29 ರನ್​ ಕಲೆಹಾಕಿದ್ದ ಜಾರ್ಖಂಡ್ ತಂಡಕ್ಕೆ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಕುಶಾಗ್ರ ಆಸರೆಯಾದರು. ಅನ್ಕುಲ್ ರಾಯ್ ಜೊತೆ ಉತ್ತಮ ಜೊತೆಯಾಟವಾಡಿ ಕುಶರಂಗ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಅತ್ತ 80 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 8 ಫೋರ್​ನೊಂದಿಗೆ 74 ರನ್​ ಬಾರಿಸಿ ಅಪಾಯಕಾರಿಯಾಗುವ ಸೂಚನೆ ನೀಡಿದ್ದ ಕುಶಾಗ್ರರನ್ನು ಮುರಳೀಧರ ವೆಂಕಟೇಶ್ ಔಟ್ ಮಾಡುವಲ್ಲಿ ಯಶಸ್ವಿಯಾದರು. ಇದರ ಬೆನ್ನಲ್ಲೇ 57 ರನ್ ಬಾರಿಸಿದ್ದ ಅಂಕುಲ್ ರಾಯ್ ಕೂಡ ರೋನಿತ್ ಮೋರೆಗೆ ವಿಕೆಟ್ ಒಪ್ಪಿಸಿದರು.

ಈ ಹಂತದಲ್ಲಿ ಮತ್ತೆ ಹಿಡಿತ ಸಾಧಿಸಿದ ಕರ್ನಾಟಕ ಬೌಲರ್​ಗಳು ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದರು. ಪರಿಣಾಮ ಜಾರ್ಖಂಡ್ ತಂಡವು 47.1 ಓವರ್​ಗಳಲ್ಲಿ 187 ರನ್​ಗಳಿಗೆ ಆಲೌಟ್ ಆಯಿತು. ಕರ್ನಾಟಕ ಪರ ವಿದ್ವತ್ ಕಾವೇರಪ್ಪ, ರೋನಿತ್ ಮೋರೆ, ವೆಂಕಟೇಶ್ ತಲಾ 3 ವಿಕೆಟ್ ಕಬಳಿಸಿ ಮಿಂಚಿದರು.

188 ರನ್​ಗಳ ಟಾರ್ಗೆಟ್ ಪಡೆದ ಕರ್ನಾಟಕ ತಂಡಕ್ಕೆ ಆರಂಭಿಕ ಆಟಗಾರ ರವಿಕುಮಾರ್ ಸಮರ್ಥ್ ಉತ್ತಮ ಆರಂಭ ಒದಗಿಸಿದರು. ಒಂದೆಡೆ ಮಯಾಂಕ್ ಅರ್ಗವಾಲ್ 12 ರನ್​ಗಳಿಸಿ ಔಟಾದರೆ, ಮತ್ತೊಂದೆಡೆ ಸಮರ್ಥ್ 60 ಎಸೆತಗಳಲ್ಲಿ 7 ಫೋರ್​ನೊಂದಿಗೆ 53 ರನ್​ ಬಾರಿಸಿದರು. ಹಾಗೆಯೇ ಮೂರನೇ ಕ್ರಮಾಂಕದಲ್ಲಿ ಆಡಿದ ನಿಕಿನ್ ಜೋಸ್ 93 ಎಸೆತಗಳಲ್ಲಿ ಅಜೇಯ 63 ರನ್​ ಕಲೆಹಾಕಿದರು.

ರವಿಕುಮಾರ್ ಸಮರ್ಥ್ (53) ನಿರ್ಗಮನದ ಬಳಿಕ ಬಂದ ಮನೀಷ್ ಪಾಂಡೆ (18), ಶ್ರೇಯಸ್ ಗೋಪಾಲ್ (12) ಬೇಗನೆ ವಿಕೆಟ್ ಒಪ್ಪಿಸಿದರು. ಇದಾಗ್ಯೂ ಅಂತಿಮ ಹಂತದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದರು ನಿಕಿನ್ ಜೋಸ್ 40.5 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ ತಂಡವನ್ನು ಗುರಿ ಮುಟ್ಟಿಸಿದರು. ಈ ಗೆಲುವಿನೊಂದಿಗೆ ಕರ್ನಾಟಕ ತಂಡವು ಕ್ವಾರ್ಟರ್​ ಫೈನಲ್​ಗೆ ಪ್ರವೇಶಿಸಿದೆ. ಸೋಮವಾರ ನಡೆಯಲಿರುವ ಮೊದಲ ಕ್ವಾರ್ಟರ್ ಫೈನಲ್​ನಲ್ಲಿ ಕರ್ನಾಟಕ ತಂಡವು ಪಂಜಾಬ್ ತಂಡವನ್ನು ಎದುರಿಸಲಿದೆ.

ಕರ್ನಾಟಕ ಪ್ಲೇಯಿಂಗ್ ಇಲೆವೆನ್: ರವಿಕುಮಾರ್ ಸಮರ್ಥ್ , ಮಯಾಂಕ್ ಅಗರ್ವಾಲ್ (ನಾಯಕ) , ನಿಕಿನ್ ಜೋಸ್ , ಮನೀಶ್ ಪಾಂಡೆ , ಶ್ರೇಯಸ್ ಗೋಪಾಲ್ , ಶರತ್ ಬಿಆರ್​ ( ವಿಕೆಟ್ ಕೀಪರ್ ) , ಮನೋಜ್ ಭಾಂಡಗೆ , ಕೃಷ್ಣಪ್ಪ ಗೌತಮ್ , ರೋನಿತ್ ಮೋರೆ , ಮುರಳೀಧರ ವೆಂಕಟೇಶ್ , ವಿಧ್ವತ್ ಕಾವೇರಪ್ಪ

ಜಾರ್ಖಂಡ್ ಪ್ಲೇಯಿಂಗ್ ಇಲೆವೆನ್: ಅರ್ನವ್ ಸಿನ್ಹಾ , ಉತ್ಕರ್ಷ್ ಸಿಂಗ್ , ಶಹಬಾಜ್ ನದೀಮ್ , ವಿರಾಟ್ ಸಿಂಗ್ (ನಾಯಕ) , ಸೌರಭ್ ತಿವಾರಿ , ರಾಜನ್ದೀಪ್ ಸಿಂಗ್ , ಕುಮಾರ್ ಕುಶಾಗ್ರ ( ವಿಕೆಟ್ ಕೀಪರ್) , ಅಂಕುಲ್ ರಾಯ್ , ಬಾಲ ಕೃಷ್ಣ , ರಾಹುಲ್ ಶುಕ್ಲಾ , ಆಶಿಶ್ ಕುಮಾರ್.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ