AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Hazare Trophy 2022: ಸೌರಾಷ್ಟ್ರಗೆ ಭರ್ಜರಿ ಜಯ: ಕರ್ನಾಟಕ ತಂಡದ ಫೈನಲ್ ಕನಸು ಭಗ್ನ..!

Vijay Hazare Trophy 2022: 172 ರನ್​ಗಳ ಸುಲಭ ಗುರಿ ಪಡೆದ ಸೌರಾಷ್ಟ್ರ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಕರ್ನಾಟಕದ ವೇಗಿಗಳು ಯಶಸ್ವಿಯಾಗಿದ್ದರು. ಮೊದಲ ಓವರ್​ನ 2ನೇ ಎಸೆತದಲ್ಲೇ ಹಾರ್ವಿಕ್ ದೇಸಾಯಿಯನ್ನು ಶೂನ್ಯಕ್ಕೆ ಪೆವಿಲಿಯನ್​ಗೆ ಕಳುಹಿಸಿ ವಿಧ್ವತ್ ಕಾವೇರಪ್ಪ ಕರ್ನಾಟಕಕ್ಕೆ ಮೊದಲ ಯಶಸ್ಸು ತಂದುಕೊಟ್ಟರು.

Vijay Hazare Trophy 2022: ಸೌರಾಷ್ಟ್ರಗೆ ಭರ್ಜರಿ ಜಯ: ಕರ್ನಾಟಕ ತಂಡದ ಫೈನಲ್ ಕನಸು ಭಗ್ನ..!
Karnataka Team
TV9 Web
| Edited By: |

Updated on:Nov 30, 2022 | 4:01 PM

Share

Vijay Hazare Trophy 2022:  ವಿಜಯ್ ಹಜಾರೆ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌರಾಷ್ಟ್ರ ವಿರುದ್ಧ ಕರ್ನಾಟಕ (Karnataka vs Saurashtra) ತಂಡವು ಸೋಲನುಭವಿಸಿದೆ. ಇದರೊಂದಿಗೆ ಫೈನಲ್ ಪ್ರವೇಶಿಸುವ ಕರ್ನಾಟಕ ತಂಡದ ಕನಸು ಕೂಡ ಕಮರಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌರಾಷ್ಟ್ರ ತಂಡದ ನಾಯಕ ಜಯದೇವ್ ಉನಾದ್ಕಟ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ನಾಯಕ ಮಯಾಂಕ್ ಅಗರ್ವಾಲ್ (1) ಉನಾದ್ಕಟ್ ಎಸೆತದಲ್ಲಿ ಕ್ಯಾಚ್ ಬೇಗನೆ ನಿರ್ಗಮಿಸಿದರು. ಇದರ ಬೆನ್ನಲ್ಲೇ ಬಿಆರ್​ ಶರತ್ (3) ಸಹ ವಿಕೆಟ್ ಒಪ್ಪಿಸಿದರು. ನಂತರ ಬಂದ ನಿಕಿನ್ ಜೋಸ್ 12 ರನ್​ಗಳಿಸಿ ಔಟಾದರೆ, ಮನೀಷ್ ಪಾಂಡೆ ಶೂನ್ಯದೊಂದಿಗೆ ಪೆವಿಲಿಯನ್​ಗೆ ಹಿಂತಿರುಗಿದರು. ಪರಿಣಾಮ ಕೇವಲ 47 ರನ್​ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡು ಕರ್ನಾಟಕ ತಂಡವು ಸಂಕಷ್ಟಕ್ಕೆ ಸಿಲುಕಿತು.

ಇದಾಗ್ಯೂ ಮತ್ತೋರ್ವ ಆರಂಭಿಕ ಆಟಗಾರ ರವಿಕುಮಾರ್ ಸಮರ್ಥ್ ಜವಾಬ್ದಾರಿಯುತ ಇನಿಂಗ್ಸ್ ಆಡಿದರು. ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಸಮರ್ಥ್ ಸೌರಾಷ್ಟ್ರ ಬೌಲರ್​ಗಳನ್ನು ಸಮರ್ಥವಾಗಿಯೇ ಎದುರಿಸಿದರು. ಈ ಮೂಲಕ 135 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 4 ಫೋರ್​ನೊಂದಿಗೆ 88 ರನ್​ಗಳನ್ನು ಕಲೆಹಾಕಿದರು. ಆದರೆ ಉಳಿದ ಆಟಗಾರರಿಂದ ಸಮರ್ಥ್​ಗೆ ಉತ್ತಮ ಸಾಥ್ ಸಿಕ್ಕಿರಲಿಲ್ಲ. ಪರಿಣಾಮ ಕರ್ನಾಟಕ ತಂಡವು 49. 1 ಓವರ್​ಗಳಲ್ಲಿ 171 ರನ್​ಗಳಿಗೆ ಆಲೌಟ್ ಆಯಿತು. ಸೌರಾಷ್ಟ್ರ ಪರ ನಾಯಕ ಜಯದೇವ್ ಉನಾದ್ಕಟ್ 10 ಓವರ್​ಗಳಲ್ಲಿ 26 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದರು.

ಇನ್ನು 172 ರನ್​ಗಳ ಸುಲಭ ಗುರಿ ಪಡೆದ ಸೌರಾಷ್ಟ್ರ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಕರ್ನಾಟಕದ ವೇಗಿಗಳು ಯಶಸ್ವಿಯಾಗಿದ್ದರು. ಮೊದಲ ಓವರ್​ನ 2ನೇ ಎಸೆತದಲ್ಲೇ ಹಾರ್ವಿಕ್ ದೇಸಾಯಿಯನ್ನು ಶೂನ್ಯಕ್ಕೆ ಪೆವಿಲಿಯನ್​ಗೆ ಕಳುಹಿಸಿ ವಿಧ್ವತ್ ಕಾವೇರಪ್ಪ ಕರ್ನಾಟಕಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಶೆಲ್ಡನ್ ಜಾಕ್ಸನ್ (0) ವಿಕೆಟ್ ಪಡೆಯುವ ಮೂಲಕ ವಿ ಕೌಶಿಕ್ ಸೌರಾಷ್ಟ್ರಗೆ ಮತ್ತೊಂದು ಆಘಾತ ನೀಡಿದರು.

ಇದನ್ನೂ ಓದಿ
Image
Suryakumar Yadav: ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಸೂರ್ಯಕುಮಾರ್ ಯಾದವ್
Image
BPL 2023: ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ಗೆ ಭಾರತೀಯ ಆಟಗಾರ ಎಂಟ್ರಿ..!
Image
IPL 2023: 4 ವರ್ಷಗಳ ಬಳಿಕ ಐಪಿಎಲ್​ನತ್ತ ಜೋ ರೂಟ್..!
Image
ICC T20 Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ

ಇದನ್ನೂ ಓದಿ: Ruturaj Gaikwad: ಒಂದೇ ಓವರ್​ನಲ್ಲಿ ಅತ್ಯಧಿಕ ರನ್: ವಿಶ್ವ ದಾಖಲೆ ಸರಿಗಟ್ಟಿದ ರುತುರಾಜ್ ಗಾಯಕ್ವಾಡ್

ಆದರೆ ಈ ಹಂತದಲ್ಲಿ ಜೊತೆಯಾದ ಜಯ್ ಗೋಯಿಲ್ ಹಾಗೂ ಸಮರ್ಥ್ ವ್ಯಾಸ್ 75 ರನ್​ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಈ ವೇಳೆ ಜಯ್ ಗೋಯಿಲ್ (61) ರನ್​ ಕಲೆಹಾಕಿ ಔಟಾದರೆ, ಸಮರ್ಥ್ ವ್ಯಾಸ್ 33 ರನ್​ಗಳ ಉತ್ತಮ ಕಾಣಿಕೆ ನೀಡಿದರು.

ಆ ಬಳಿಕ ಬಂದರೆ ಪ್ರೇರಕ್ ಮಂಕಡ್ ಕೂಡ 35 ರನ್​ ಬಾರಿಸುವ ಮೂಲಕ ತಂಡಕ್ಕೆ ಆಸರೆಯಾದರು. ಅಂತಿಮವಾಗಿ 36.2 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 172 ರನ್​ ಕಲೆಹಾಕುವ ಮೂಲಕ ಸೌರಾಷ್ಟ್ರ ತಂಡವು ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಸೌರಾಷ್ಟ್ರ ತಂಡವು ಫೈನಲ್​ಗೆ ಪ್ರವೇಶಿಸಿದೆ.

ಕರ್ನಾಟಕ ಪ್ಲೇಯಿಂಗ್ ಇಲೆವೆನ್: ರವಿಕುಮಾರ್ ಸಮರ್ಥ್ , ಮಯಾಂಕ್ ಅಗರ್ವಾಲ್ (ನಾಯಕ) , ನಿಕಿನ್ ಜೋಸ್ , ಮನೀಶ್ ಪಾಂಡೆ , ಶ್ರೇಯಸ್ ಗೋಪಾಲ್ , ಶರತ್ ಬಿ ಆರ್ ( ವಿಕೆಟ್ ಕೀಪರ್ ) , ಮನೋಜ್ ಭಾಂಡಗೆ , ಕೃಷ್ಣಪ್ಪ ಗೌತಮ್ , ರೋನಿತ್ ಮೋರ್ , ವಾಸುಕಿ ಕೌಶಿಕ್ , ವಿಧ್ವತ್ ಕಾವೇರಪ್ಪ.

ಸೌರಾಷ್ಟ್ರ ಪ್ಲೇಯಿಂಗ್ ಇಲೆವೆನ್: ಹಾರ್ವಿಕ್ ದೇಸಾಯಿ (ವಿಕೆಟ್ ಕೀಪರ್) , ಶೆಲ್ಡನ್ ಜಾಕ್ಸನ್ , ಜಯ್ ಗೋಯಿಲ್ , ಸಮರ್ಥ ವ್ಯಾಸ್ , ಅರ್ಪಿತ್ ವಾಸವಾದ , ಪ್ರೇರಕ್ ಮಂಕಡ್ , ಚಿರಾಗ್ ಜಾನಿ , ಧರ್ಮೇಂದ್ರಸಿನ್ಹ್ ಜಡೇಜಾ , ಕುಶಾಂಗ್ ಪಟೇಲ್ , ಜಯದೇವ್ ಉನಾದ್ಕತ್ (ನಾಯಕ) , ಪಾರ್ಥ್ ಭುತ್

Published On - 4:01 pm, Wed, 30 November 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ