AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Hazare Trophy 2023: ಸೆಮಿಫೈನಲ್​ಗೆ ಪ್ರವೇಶಿಸಿದ ಕರ್ನಾಟಕ

Vijay Hazare Trophy 2023: ಯಶ್ ಕಮ್ 72 ಎಸೆತಗಳಲ್ಲಿ 38 ರನ್ ಬಾರಿಸಿದರೆ, ಶುಭಂ ದುಬೆ 59 ಎಸೆತಗಳಲ್ಲಿ 1 ಸಿಕ್ಸ್​ ಹಾಗೂ 4 ಫೋರ್​ಗಳೊಂದಿಗೆ 41 ರನ್ ಬಾರಿಸಿದರು. ಆದರೆ ಇವರಿಬ್ಬರ ನಿರ್ಗಮನದ ಬಳಿಕ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಕರ್ನಾಟಕ ಬೌಲರ್​ಗಳು ವಿದರ್ಭ ತಂಡವನ್ನು 44.5 ಓವರ್​ಗಳಲ್ಲಿ 173 ರನ್​ಗಳಿಗೆ ಆಲೌಟ್ ಮಾಡಿದರು.

Vijay Hazare Trophy 2023: ಸೆಮಿಫೈನಲ್​ಗೆ ಪ್ರವೇಶಿಸಿದ ಕರ್ನಾಟಕ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 11, 2023 | 4:39 PM

Share

ರಾಜ್​ಕೋಟ್​ನ ಸನೋಸಾರ ಕ್ರಿಕೆಟ್ ಮೈದಾನದಲ್ಲಿ ನಡೆದ ಕ್ವಾರ್ಟರ್​ ಫೈನಲ್ ಪಂದ್ಯದಲ್ಲಿ ಕರ್ನಾಟಕ (Karnataka) ತಂಡ ಭರ್ಜರಿ ಜಯ ಸಾಧಿಸಿದೆ. ವಿದರ್ಭ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ವಿದರ್ಭ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಕರ್ನಾಟಕ ಬೌಲರ್​ಗಳು ಯಶಸ್ವಿಯಾಗಿದ್ದರು. ಕೇವಲ 39 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ವಿದರ್ಭ ತಂಡಕ್ಕೆ ಆಸರೆಯಾಗಿದ್ದು ಶುಭಂ ದುಬೆ ಹಾಗೂ ಯಶ್ ಕದಮ್.

ಯಶ್ ಕಮ್ 72 ಎಸೆತಗಳಲ್ಲಿ 38 ರನ್ ಬಾರಿಸಿದರೆ, ಶುಭಂ ದುಬೆ 59 ಎಸೆತಗಳಲ್ಲಿ 1 ಸಿಕ್ಸ್​ ಹಾಗೂ 4 ಫೋರ್​ಗಳೊಂದಿಗೆ 41 ರನ್ ಬಾರಿಸಿದರು. ಆದರೆ ಇವರಿಬ್ಬರ ನಿರ್ಗಮನದ ಬಳಿಕ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಕರ್ನಾಟಕ ಬೌಲರ್​ಗಳು ವಿದರ್ಭ ತಂಡವನ್ನು 44.5 ಓವರ್​ಗಳಲ್ಲಿ 173 ರನ್​ಗಳಿಗೆ ಆಲೌಟ್ ಮಾಡಿದರು.

ಕರ್ನಾಟಕ ಪರ ಅತ್ಯುತ್ತಮ ದಾಳಿ ಸಂಘಟಿಸಿದ ವಿಜಯಕುಮಾರ್ ವೈಶಾಕ್ 4 ವಿಕೆಟ್ ಕಬಳಿಸಿದರೆ, ಜಗದೀಶ್ ಸುಚಿತ್ ಹಾಗೂ ಮನೋಜ್ ಭಾಂಡಗೆ ತಲಾ 2 ವಿಕೆಟ್ ಪಡೆದರು.

ಕರ್ನಾಟಕಕ್ಕೆ 174 ರನ್​ಗಳ ಟಾರ್ಗೆಟ್:

50 ಓವರ್​ಗಳಲ್ಲಿ ಸುಲಭ ಗುರಿ ಪಡೆದ ಕರ್ನಾಟಕ ತಂಡಕ್ಕೆ ಆರಂಭಿಕರಾದ ಮಯಾಂಕ್ ಅಗರ್ವಾಲ್ ಹಾಗೂ ರವಿಕುಮಾರ್ ಸಮರ್ಥ್ ಅತ್ಯುತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 82 ರನ್​ಗಳ ಜೊತೆಯಾಟವಾಡಿದ ಬಳಿಕ ಮಯಾಂಕ್ ಅಗರ್ವಾಲ್ (51) ವಿಕೆಟ್ ಒಪ್ಪಿಸಿದರು.

ಆ ಬಳಿಕ ಬಂದ ನಿಕಿನ್ ಜೋಸ್ 45 ಎಸೆತಗಳಲ್ಲಿ 31 ರನ್​ಗಳ ಕೊಡುಗೆ ನೀಡಿದರು. ಮತ್ತೊಂದೆಡೆ ಕ್ರೀಸ್ ಕಚ್ಚಿ ನಿಂತು ಇನಿಂಗ್ಸ್ ಕಟ್ಟಿದ ರವಿಕುಮಾರ್ ಸಮರ್ಥ್ 113 ಎಸೆತಗಳಲ್ಲಿ 7 ಫೋರ್​ಗಳೊಂದಿಗೆ ಅಜೇಯ 72 ರನ್ ಬಾರಿಸಿದರು. ಈ ಮೂಲಕ ಕರ್ನಾಟಕ ತಂಡವು 40.3 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 177 ರನ್ ಬಾರಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಕರ್ನಾಟಕ ತಂಡವು ಸೆಮಿಫೈನಲ್​ಗೆ ಪ್ರವೇಶಿಸಿದೆ.

ವಿದರ್ಭ ಪ್ಲೇಯಿಂಗ್ ಇಲೆವೆನ್: ಯಶ್ ಕದಮ್ , ಅಥರ್ವ ತೈಡೆ (ನಾಯಕ) , ಅಮನ್ ಮೊಖಡೆ , ಕರುಣ್ ನಾಯರ್ , ಅಕ್ಷಯ್ ವಾಡ್ಕರ್ (ವಿಕೆಟ್ ಕೀಪರ್) , ಹರ್ಷ್ ದುಬೆ , ಅಕ್ಷಯ್ ಕರ್ನೇವರ್ , ಶುಭಂ ದುಬೆ , ಉಮೇಶ್ ಯಾದವ್ , ದರ್ಶನ್ ನಲ್ಕಂಡೆ , ಯಶ್ ಠಾಕೂರ್.

ಇದನ್ನೂ ಓದಿ:  RCB ತಂಡದ ಅತ್ಯಂತ ಕೆಟ್ಟ ಆಯ್ಕೆಗಳಾವುವು ಗೊತ್ತಾ?

ಕರ್ನಾಟಕ ಪ್ಲೇಯಿಂಗ್ ಇಲೆವೆನ್: ರವಿಕುಮಾರ್ ಸಮರ್ಥ್ , ಮಯಾಂಕ್ ಅಗರ್ವಾಲ್ (ನಾಯಕ) , ಮನೀಶ್ ಪಾಂಡೆ , ಅಭಿನವ್ ಮನೋಹರ್ , ಮನೋಜ್ ಭಾಂಡಗೆ , ನಿಕಿನ್ ಜೋಸ್ , ಕೃಷ್ಣನ್ ಶ್ರೀಜಿತ್ (ವಿಕೆಟ್ ಕೀಪರ್) , ಕೃಷ್ಣಪ್ಪ ಗೌತಮ್ , ಜಗದೀಶ್ ಸುಚಿತ್ , ವಾಸುಕಿ ಕೌಶಿಕ್ , ವಿಜಯಮಾರ್ ವೈಶಾಕ್.

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?