AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Hazare Trophy 2023: ಕರ್ನಾಟಕ ಪರ ಅಬ್ಬರಿಸಿದ ಮನೋಜ್-ಮನೋಹರ್: ರಾಜಸ್ಥಾನ್​ಗೆ ಕಠಿಣ ಗುರಿ

Vijay Hazare Trophy 2023: ಆರಂಭಿಕ ಆಟಗಾರ ರವಿಕುಮಾರ್ ಸಮರ್ಥ್ (8) ಹಾಗೂ ಮಯಾಂಕ್ ಅಗರ್ವಾಲ್ (13) ಬೇಗನೆ ವಿಕೆಟ್ ಒಪ್ಪಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿಕಿನ್ ಜೋಸ್ 21 ರನ್​ಗಳಿಸಲಷ್ಟೇ ಶಕ್ತರಾದರು. ಕೃಷ್ಣನ್ ಶ್ರೀಜಿತ್ 45 ಎಸೆತಗಳಲ್ಲಿ 37 ರನ್ ಬಾರಿಸಿ ಮಧ್ಯಮ ಕ್ರಮಾಂಕದಲ್ಲಿ ಆಸರೆಯಾಗಿ ನಿಂತರು.

Vijay Hazare Trophy 2023: ಕರ್ನಾಟಕ ಪರ ಅಬ್ಬರಿಸಿದ ಮನೋಜ್-ಮನೋಹರ್: ರಾಜಸ್ಥಾನ್​ಗೆ ಕಠಿಣ ಗುರಿ
Manoj-Abhinav
TV9 Web
| Edited By: |

Updated on: Dec 14, 2023 | 6:01 PM

Share

ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ ವಿಜಯ್​ ಹಜಾರೆ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ರಾಜಸ್ಥಾನ್​ಗೆ ಕಠಿಣ ಗುರಿ ನೀಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ (Mayank Agarwal) ಬ್ಯಾಟಿಂಗ್ ಆಯ್ದುಕೊಂಡರು. ಆದರೆ ಕರ್ನಾಟಕ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

ಆರಂಭಿಕ ಆಟಗಾರ ರವಿಕುಮಾರ್ ಸಮರ್ಥ್ (8) ಹಾಗೂ ಮಯಾಂಕ್ ಅಗರ್ವಾಲ್ (13) ಬೇಗನೆ ವಿಕೆಟ್ ಒಪ್ಪಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿಕಿನ್ ಜೋಸ್ 21 ರನ್​ಗಳಿಸಲಷ್ಟೇ ಶಕ್ತರಾದರು. ಕೃಷ್ಣನ್ ಶ್ರೀಜಿತ್ 45 ಎಸೆತಗಳಲ್ಲಿ 37 ರನ್ ಬಾರಿಸಿ ಮಧ್ಯಮ ಕ್ರಮಾಂಕದಲ್ಲಿ ಆಸರೆಯಾಗಿ ನಿಂತರು. ಇನ್ನು ಮನೀಶ್ ಪಾಂಡೆ 28 ರನ್​ಗಳ ಕೊಡುಗೆ ನೀಡಿದರು.

ಆದರೆ ಕೊನೆಯ 13 ಓವರ್​ಗಳಿರುವಾಗ ಜೊತೆಗೂಡಿದ ಅಭಿನವ್ ಮನೋವರ್ ಹಾಗೂ ಮನೋಜ್ ಭಾಂಡಗೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಬಿರುಸಿನ ಬ್ಯಾಟಿಂಗ್​ನೊಂದಿಗೆ ರಾಜಸ್ಥಾನ್ ಬೌಲರ್​ಗಳ ಬೆಂಡೆತ್ತಿದ ಅಭಿನವ್ ಮನೋಹರ್ 80 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 91 ರನ್ ಬಾರಿಸಿದರು. ಇನ್ನು ಮನೋಜ್ ಭಾಂಡಗೆ 39 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 63 ರನ್ ಚಚ್ಚಿದರು.

ಮನೋಜ್-ಮನೋಹರ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ಕರ್ನಾಟಕ ತಂಡವು ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 282 ರನ್ ಕಲೆಹಾಕಿದೆ. ಈ ಮೂಲಕ ರಾಜಸ್ಥಾನ್ ತಂಡಕ್ಕೆ 283 ರನ್​ಗಳ ಗುರಿ ನೀಡಿದೆ.

ರಾಜಸ್ಥಾನ್ ಪ್ಲೇಯಿಂಗ್ 11: ಅಭಿಜಿತ್ ತೋಮರ್ , ರಾಮ್ ಮೋಹನ್ ಚೌಹಾಣ್ , ಮಹಿಪಾಲ್ ಲೊಮ್ರೋರ್ , ದೀಪಕ್ ಹೂಡಾ (ನಾಯಕ) , ಕರಣ್ ಲಂಬಾ , ಕುನಾಲ್ ಸಿಂಗ್ ರಾಥೋರ್ (ವಿಕೆಟ್ ಕೀಪರ್) , ರಾಹುಲ್ ಚಾಹರ್ , ಅನಿಕೇತ್ ಚೌಧರಿ , ಅರಾಫತ್ ಖಾನ್ , ಖಲೀಲ್ ಅಹ್ಮದ್ , ಕುಕ್ನಾ ಅಜಯ್ ಸಿಂಗ್.

ಇದನ್ನೂ ಓದಿ: IPL 2024 Auction: ಐಪಿಎಲ್ ಹರಾಜಿನಲ್ಲಿ ಕರ್ನಾಟಕದ 14 ಕ್ರಿಕೆಟಿಗರು

ಕರ್ನಾಟಕ ಪ್ಲೇಯಿಂಗ್ 11: ರವಿಕುಮಾರ್ ಸಮರ್ಥ್ , ಮಯಾಂಕ್ ಅಗರ್ವಾಲ್ (ನಾಯಕ) , ನಿಕಿನ್ ಜೋಸ್ , ಕೃಷ್ಣನ್ ಶ್ರೀಜಿತ್ (ವಿಕೆಟ್ ಕೀಪರ್) , ಮನೀಶ್ ಪಾಂಡೆ , ಅಭಿನವ್ ಮನೋಹರ್ , ಮನೋಜ್ ಭಾಂಡಗೆ , ಕೃಷ್ಣಪ್ಪ ಗೌತಮ್ , ಜಗದೀಶ ಸುಚಿತ್ , ವಾಸುಕಿ ಕೌಶಿಕ್ , ವಿಜಯ್ ಕುಮಾರ್ ವೈಶಾಕ್.

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ