AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Hazare Trophy 2023: ಕರ್ನಾಟಕ ಪರ ಅಬ್ಬರಿಸಿದ ಮನೋಜ್-ಮನೋಹರ್: ರಾಜಸ್ಥಾನ್​ಗೆ ಕಠಿಣ ಗುರಿ

Vijay Hazare Trophy 2023: ಆರಂಭಿಕ ಆಟಗಾರ ರವಿಕುಮಾರ್ ಸಮರ್ಥ್ (8) ಹಾಗೂ ಮಯಾಂಕ್ ಅಗರ್ವಾಲ್ (13) ಬೇಗನೆ ವಿಕೆಟ್ ಒಪ್ಪಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿಕಿನ್ ಜೋಸ್ 21 ರನ್​ಗಳಿಸಲಷ್ಟೇ ಶಕ್ತರಾದರು. ಕೃಷ್ಣನ್ ಶ್ರೀಜಿತ್ 45 ಎಸೆತಗಳಲ್ಲಿ 37 ರನ್ ಬಾರಿಸಿ ಮಧ್ಯಮ ಕ್ರಮಾಂಕದಲ್ಲಿ ಆಸರೆಯಾಗಿ ನಿಂತರು.

Vijay Hazare Trophy 2023: ಕರ್ನಾಟಕ ಪರ ಅಬ್ಬರಿಸಿದ ಮನೋಜ್-ಮನೋಹರ್: ರಾಜಸ್ಥಾನ್​ಗೆ ಕಠಿಣ ಗುರಿ
Manoj-Abhinav
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 14, 2023 | 6:01 PM

ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ ವಿಜಯ್​ ಹಜಾರೆ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ರಾಜಸ್ಥಾನ್​ಗೆ ಕಠಿಣ ಗುರಿ ನೀಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ (Mayank Agarwal) ಬ್ಯಾಟಿಂಗ್ ಆಯ್ದುಕೊಂಡರು. ಆದರೆ ಕರ್ನಾಟಕ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

ಆರಂಭಿಕ ಆಟಗಾರ ರವಿಕುಮಾರ್ ಸಮರ್ಥ್ (8) ಹಾಗೂ ಮಯಾಂಕ್ ಅಗರ್ವಾಲ್ (13) ಬೇಗನೆ ವಿಕೆಟ್ ಒಪ್ಪಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿಕಿನ್ ಜೋಸ್ 21 ರನ್​ಗಳಿಸಲಷ್ಟೇ ಶಕ್ತರಾದರು. ಕೃಷ್ಣನ್ ಶ್ರೀಜಿತ್ 45 ಎಸೆತಗಳಲ್ಲಿ 37 ರನ್ ಬಾರಿಸಿ ಮಧ್ಯಮ ಕ್ರಮಾಂಕದಲ್ಲಿ ಆಸರೆಯಾಗಿ ನಿಂತರು. ಇನ್ನು ಮನೀಶ್ ಪಾಂಡೆ 28 ರನ್​ಗಳ ಕೊಡುಗೆ ನೀಡಿದರು.

ಆದರೆ ಕೊನೆಯ 13 ಓವರ್​ಗಳಿರುವಾಗ ಜೊತೆಗೂಡಿದ ಅಭಿನವ್ ಮನೋವರ್ ಹಾಗೂ ಮನೋಜ್ ಭಾಂಡಗೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಬಿರುಸಿನ ಬ್ಯಾಟಿಂಗ್​ನೊಂದಿಗೆ ರಾಜಸ್ಥಾನ್ ಬೌಲರ್​ಗಳ ಬೆಂಡೆತ್ತಿದ ಅಭಿನವ್ ಮನೋಹರ್ 80 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 91 ರನ್ ಬಾರಿಸಿದರು. ಇನ್ನು ಮನೋಜ್ ಭಾಂಡಗೆ 39 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 63 ರನ್ ಚಚ್ಚಿದರು.

ಮನೋಜ್-ಮನೋಹರ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ಕರ್ನಾಟಕ ತಂಡವು ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 282 ರನ್ ಕಲೆಹಾಕಿದೆ. ಈ ಮೂಲಕ ರಾಜಸ್ಥಾನ್ ತಂಡಕ್ಕೆ 283 ರನ್​ಗಳ ಗುರಿ ನೀಡಿದೆ.

ರಾಜಸ್ಥಾನ್ ಪ್ಲೇಯಿಂಗ್ 11: ಅಭಿಜಿತ್ ತೋಮರ್ , ರಾಮ್ ಮೋಹನ್ ಚೌಹಾಣ್ , ಮಹಿಪಾಲ್ ಲೊಮ್ರೋರ್ , ದೀಪಕ್ ಹೂಡಾ (ನಾಯಕ) , ಕರಣ್ ಲಂಬಾ , ಕುನಾಲ್ ಸಿಂಗ್ ರಾಥೋರ್ (ವಿಕೆಟ್ ಕೀಪರ್) , ರಾಹುಲ್ ಚಾಹರ್ , ಅನಿಕೇತ್ ಚೌಧರಿ , ಅರಾಫತ್ ಖಾನ್ , ಖಲೀಲ್ ಅಹ್ಮದ್ , ಕುಕ್ನಾ ಅಜಯ್ ಸಿಂಗ್.

ಇದನ್ನೂ ಓದಿ: IPL 2024 Auction: ಐಪಿಎಲ್ ಹರಾಜಿನಲ್ಲಿ ಕರ್ನಾಟಕದ 14 ಕ್ರಿಕೆಟಿಗರು

ಕರ್ನಾಟಕ ಪ್ಲೇಯಿಂಗ್ 11: ರವಿಕುಮಾರ್ ಸಮರ್ಥ್ , ಮಯಾಂಕ್ ಅಗರ್ವಾಲ್ (ನಾಯಕ) , ನಿಕಿನ್ ಜೋಸ್ , ಕೃಷ್ಣನ್ ಶ್ರೀಜಿತ್ (ವಿಕೆಟ್ ಕೀಪರ್) , ಮನೀಶ್ ಪಾಂಡೆ , ಅಭಿನವ್ ಮನೋಹರ್ , ಮನೋಜ್ ಭಾಂಡಗೆ , ಕೃಷ್ಣಪ್ಪ ಗೌತಮ್ , ಜಗದೀಶ ಸುಚಿತ್ , ವಾಸುಕಿ ಕೌಶಿಕ್ , ವಿಜಯ್ ಕುಮಾರ್ ವೈಶಾಕ್.

ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ