AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Hazare Trophy 2023: ಕರ್ನಾಟಕ ಪರ ಅಬ್ಬರಿಸಿದ ಮನೋಜ್-ಮನೋಹರ್: ರಾಜಸ್ಥಾನ್​ಗೆ ಕಠಿಣ ಗುರಿ

Vijay Hazare Trophy 2023: ಆರಂಭಿಕ ಆಟಗಾರ ರವಿಕುಮಾರ್ ಸಮರ್ಥ್ (8) ಹಾಗೂ ಮಯಾಂಕ್ ಅಗರ್ವಾಲ್ (13) ಬೇಗನೆ ವಿಕೆಟ್ ಒಪ್ಪಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿಕಿನ್ ಜೋಸ್ 21 ರನ್​ಗಳಿಸಲಷ್ಟೇ ಶಕ್ತರಾದರು. ಕೃಷ್ಣನ್ ಶ್ರೀಜಿತ್ 45 ಎಸೆತಗಳಲ್ಲಿ 37 ರನ್ ಬಾರಿಸಿ ಮಧ್ಯಮ ಕ್ರಮಾಂಕದಲ್ಲಿ ಆಸರೆಯಾಗಿ ನಿಂತರು.

Vijay Hazare Trophy 2023: ಕರ್ನಾಟಕ ಪರ ಅಬ್ಬರಿಸಿದ ಮನೋಜ್-ಮನೋಹರ್: ರಾಜಸ್ಥಾನ್​ಗೆ ಕಠಿಣ ಗುರಿ
Manoj-Abhinav
TV9 Web
| Edited By: |

Updated on: Dec 14, 2023 | 6:01 PM

Share

ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ ವಿಜಯ್​ ಹಜಾರೆ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ರಾಜಸ್ಥಾನ್​ಗೆ ಕಠಿಣ ಗುರಿ ನೀಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ (Mayank Agarwal) ಬ್ಯಾಟಿಂಗ್ ಆಯ್ದುಕೊಂಡರು. ಆದರೆ ಕರ್ನಾಟಕ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

ಆರಂಭಿಕ ಆಟಗಾರ ರವಿಕುಮಾರ್ ಸಮರ್ಥ್ (8) ಹಾಗೂ ಮಯಾಂಕ್ ಅಗರ್ವಾಲ್ (13) ಬೇಗನೆ ವಿಕೆಟ್ ಒಪ್ಪಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿಕಿನ್ ಜೋಸ್ 21 ರನ್​ಗಳಿಸಲಷ್ಟೇ ಶಕ್ತರಾದರು. ಕೃಷ್ಣನ್ ಶ್ರೀಜಿತ್ 45 ಎಸೆತಗಳಲ್ಲಿ 37 ರನ್ ಬಾರಿಸಿ ಮಧ್ಯಮ ಕ್ರಮಾಂಕದಲ್ಲಿ ಆಸರೆಯಾಗಿ ನಿಂತರು. ಇನ್ನು ಮನೀಶ್ ಪಾಂಡೆ 28 ರನ್​ಗಳ ಕೊಡುಗೆ ನೀಡಿದರು.

ಆದರೆ ಕೊನೆಯ 13 ಓವರ್​ಗಳಿರುವಾಗ ಜೊತೆಗೂಡಿದ ಅಭಿನವ್ ಮನೋವರ್ ಹಾಗೂ ಮನೋಜ್ ಭಾಂಡಗೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಬಿರುಸಿನ ಬ್ಯಾಟಿಂಗ್​ನೊಂದಿಗೆ ರಾಜಸ್ಥಾನ್ ಬೌಲರ್​ಗಳ ಬೆಂಡೆತ್ತಿದ ಅಭಿನವ್ ಮನೋಹರ್ 80 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 91 ರನ್ ಬಾರಿಸಿದರು. ಇನ್ನು ಮನೋಜ್ ಭಾಂಡಗೆ 39 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 63 ರನ್ ಚಚ್ಚಿದರು.

ಮನೋಜ್-ಮನೋಹರ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ಕರ್ನಾಟಕ ತಂಡವು ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 282 ರನ್ ಕಲೆಹಾಕಿದೆ. ಈ ಮೂಲಕ ರಾಜಸ್ಥಾನ್ ತಂಡಕ್ಕೆ 283 ರನ್​ಗಳ ಗುರಿ ನೀಡಿದೆ.

ರಾಜಸ್ಥಾನ್ ಪ್ಲೇಯಿಂಗ್ 11: ಅಭಿಜಿತ್ ತೋಮರ್ , ರಾಮ್ ಮೋಹನ್ ಚೌಹಾಣ್ , ಮಹಿಪಾಲ್ ಲೊಮ್ರೋರ್ , ದೀಪಕ್ ಹೂಡಾ (ನಾಯಕ) , ಕರಣ್ ಲಂಬಾ , ಕುನಾಲ್ ಸಿಂಗ್ ರಾಥೋರ್ (ವಿಕೆಟ್ ಕೀಪರ್) , ರಾಹುಲ್ ಚಾಹರ್ , ಅನಿಕೇತ್ ಚೌಧರಿ , ಅರಾಫತ್ ಖಾನ್ , ಖಲೀಲ್ ಅಹ್ಮದ್ , ಕುಕ್ನಾ ಅಜಯ್ ಸಿಂಗ್.

ಇದನ್ನೂ ಓದಿ: IPL 2024 Auction: ಐಪಿಎಲ್ ಹರಾಜಿನಲ್ಲಿ ಕರ್ನಾಟಕದ 14 ಕ್ರಿಕೆಟಿಗರು

ಕರ್ನಾಟಕ ಪ್ಲೇಯಿಂಗ್ 11: ರವಿಕುಮಾರ್ ಸಮರ್ಥ್ , ಮಯಾಂಕ್ ಅಗರ್ವಾಲ್ (ನಾಯಕ) , ನಿಕಿನ್ ಜೋಸ್ , ಕೃಷ್ಣನ್ ಶ್ರೀಜಿತ್ (ವಿಕೆಟ್ ಕೀಪರ್) , ಮನೀಶ್ ಪಾಂಡೆ , ಅಭಿನವ್ ಮನೋಹರ್ , ಮನೋಜ್ ಭಾಂಡಗೆ , ಕೃಷ್ಣಪ್ಪ ಗೌತಮ್ , ಜಗದೀಶ ಸುಚಿತ್ , ವಾಸುಕಿ ಕೌಶಿಕ್ , ವಿಜಯ್ ಕುಮಾರ್ ವೈಶಾಕ್.

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ