Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Hazare Trophy: ಹರ್ಯಾಣ ವಿರುದ್ಧ ಕರ್ನಾಟಕ ತಂಡಕ್ಕೆ ಹೀನಾಯ ಸೋಲು..!

Vijay Hazare Trophy: ಈ ಪಂದ್ಯದಲ್ಲಿ 10ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕರ್ನಾಟಕ ತಂಡದ ಬೌಲರ್​ ವಿಜಯಕುಮಾರ್ ವೈಶಾಕ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. 61 ಎಸೆತಗಳನ್ನು ಎದುರಿಸಿದ ವೈಶಾಕ್ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 54 ರನ್​ಗಳ ಕೊಡುಗೆ ನೀಡಿದರು.

Vijay Hazare Trophy: ಹರ್ಯಾಣ ವಿರುದ್ಧ ಕರ್ನಾಟಕ ತಂಡಕ್ಕೆ ಹೀನಾಯ ಸೋಲು..!
Haryana vs KarnatakaImage Credit source: PC- Vijay Soneji _ The Hindu
Follow us
TV9 Web
| Updated By: ಝಾಹಿರ್ ಯೂಸುಫ್

Updated on:Dec 04, 2023 | 5:56 PM

ಗುಜರಾತ್​ನ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ನಡೆದ ವಿಜಯ ಹಜಾರೆ ಟೂರ್ನಿಯ ಗ್ರೂಪ್ ಸಿ ಪಂದ್ಯದಲ್ಲಿ ಕರ್ನಾಟಕ ವಿರುದ್ಧ ಹರ್ಯಾಣ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡಕ್ಕೆ ನಿರೀಕ್ಷಿತ ಆರಂಭ ದೊರಕಿರಲಿಲ್ಲ. ಆರಂಭಿಕ ಆಟಗಾರ ಆಟಗಾರ ಮಯಾಂಕ್ ಅಗರ್ವಾಲ್ (0) ಶೂನ್ಯಕ್ಕೆ ಔಟಾದರೆ, ರವಿಕುಮಾರ್ ಸಮರ್ಥ್ 1 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಆ ಬಳಿಕ ಬಂದ ಬಿಆರ್​ ಶರತ್ (15), ನಿಕಿಕ್ ಜೋಸ್ (9) ಹಾಗೂ ಮನೀಷ್ ಪಾಂಡೆ (24) ಬೇಗನೆ ನಿರ್ಗಮಿಸಿದರು. ಇನ್ನು ಅಭಿನವ್ ಮನೋಹರ್ 3 ರನ್​ಗಳಿಸಿದರೆ, ಮನೋಜ್ ಭಂಡಾಗೆ 8 ರನ್​ಗಳಿಸಿ ವಿಕೆಟ್ ಕೈಚೆಲ್ಲಿದರು.

ಇದಾಗ್ಯೂ 10ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿಜಯಕುಮಾರ್ ವೈಶಾಕ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. 61 ಎಸೆತಗಳನ್ನು ಎದುರಿಸಿದ ವೈಶಾಕ್ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 54 ರನ್​ಗಳ ಕೊಡುಗೆ ನೀಡಿದರು. ಈ ಅರ್ಧಶತಕದ ನೆರವಿನಿಂದ ಕರ್ನಾಟಕ ತಂಡವು 43.5 ಓವರ್​ಗಳಲ್ಲಿ 143 ರನ್​ಗಳಿಸಿ ಆಲೌಟ್ ಆಯಿತು.

ಹರ್ಯಾಣ ಪರ ಸುಮಿತ್ ಕುಮಾರ್ 3 ವಿಕೆಟ್ ಪಡೆದರೆ, ಯುಜ್ವೇಂದ್ರ ಚಹಾಲ್ ಹಾಗೂ ನಿಶಾಂತ್ ಸಿಂಧು ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.

ಇನ್ನು 144 ರನ್​​ಗಳ ಸುಲಭ ಗುರಿ ಬೆನ್ನತ್ತಿದ ಹರ್ಯಾಣ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 35 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿತ್ತು.

ಈ ಹಂತದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ನಿಶಾಂತ್ ಸಿಂಧು (43) ಹಾಗೂ ರೋಹಿತ್ ಪ್ರಮೋದ್ ಶರ್ಮಾ (63) ತಂಡಕ್ಕೆ ಆಸರೆಯಾದರು. ಅಲ್ಲದೆ 31.1 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು ಹರ್ಯಾಣ ತಂಡವು ಗೆಲುವಿನ ದಡ ಸೇರಿತು. ಈ ಮೂಲಕ ಹರ್ಯಾಣ ತಂಡವು 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಹರ್ಯಾಣ ಪ್ಲೇಯಿಂಗ್ ಇಲೆವೆನ್: ಅಂಕಿತ್ ಕುಮಾರ್ , ಯುವರಾಜ್ ಸಿಂಗ್ , ಹಿಮಾಂಶು ರಾಣಾ , ಅಶೋಕ್ ಮೆನಾರಿಯಾ (ನಾಯಕ) , ನಿಶಾಂತ್ ಸಿಂಧು , ರೋಹಿತ್ ಪರ್ಮೋದ್ ಶರ್ಮಾ ( ವಿಕೆಟ್ ಕೀಪರ್ ) , ರಾಹುಲ್ ತೆವಾಟಿಯಾ , ಸುಮಿತ್ ಕುಮಾರ್ , ಅನ್ಶುಲ್ ಕಾಂಬೋಜ್ , ಹರ್ಷಲ್ ಪಟೇಲ್ , ಯುಜ್ವೇಂದ್ರ ಚಾಹಲ್.

ಇದನ್ನೂ ಓದಿ: ವಿಶೇಷ ದಾಖಲೆ ಬರೆದ ರುತುರಾಜ್ ಗಾಯಕ್ವಾಡ್

ಕರ್ನಾಟಕ ಪ್ಲೇಯಿಂಗ್ ಇಲೆವೆನ್: ರವಿಕುಮಾರ್ ಸಮರ್ಥ್ , ಮಯಾಂಕ್ ಅಗರ್ವಾಲ್ (ನಾಯಕ) , ನಿಕಿನ್ ಜೋಸ್ , ಮನೀಷ್ ಪಾಂಡೆ , ಅಭಿನವ್ ಮನೋಹರ್ , ಶರತ್ ಬಿ ಆರ್ ( ವಿಕೆಟ್ ಕೀಪರ್ ) , ಮನೋಜ್ ಭಾಂಡಗೆ , ಕೃಷ್ಣಪ್ಪ ಗೌತಮ್ , ಜಗದೀಶ ಸುಚಿತ್ , ವಿಜಯ್ಕುಮಾರ್ ವೈಶಾಕ್ , ವಾಸುಕಿ ಕೌಶಿಕ್.

Published On - 5:55 pm, Mon, 4 December 23

ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ
ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ