AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Hazare Trophy: ಹರ್ಯಾಣ ವಿರುದ್ಧ ಕರ್ನಾಟಕ ತಂಡಕ್ಕೆ ಹೀನಾಯ ಸೋಲು..!

Vijay Hazare Trophy: ಈ ಪಂದ್ಯದಲ್ಲಿ 10ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕರ್ನಾಟಕ ತಂಡದ ಬೌಲರ್​ ವಿಜಯಕುಮಾರ್ ವೈಶಾಕ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. 61 ಎಸೆತಗಳನ್ನು ಎದುರಿಸಿದ ವೈಶಾಕ್ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 54 ರನ್​ಗಳ ಕೊಡುಗೆ ನೀಡಿದರು.

Vijay Hazare Trophy: ಹರ್ಯಾಣ ವಿರುದ್ಧ ಕರ್ನಾಟಕ ತಂಡಕ್ಕೆ ಹೀನಾಯ ಸೋಲು..!
Haryana vs KarnatakaImage Credit source: PC- Vijay Soneji _ The Hindu
TV9 Web
| Edited By: |

Updated on:Dec 04, 2023 | 5:56 PM

Share

ಗುಜರಾತ್​ನ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ನಡೆದ ವಿಜಯ ಹಜಾರೆ ಟೂರ್ನಿಯ ಗ್ರೂಪ್ ಸಿ ಪಂದ್ಯದಲ್ಲಿ ಕರ್ನಾಟಕ ವಿರುದ್ಧ ಹರ್ಯಾಣ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡಕ್ಕೆ ನಿರೀಕ್ಷಿತ ಆರಂಭ ದೊರಕಿರಲಿಲ್ಲ. ಆರಂಭಿಕ ಆಟಗಾರ ಆಟಗಾರ ಮಯಾಂಕ್ ಅಗರ್ವಾಲ್ (0) ಶೂನ್ಯಕ್ಕೆ ಔಟಾದರೆ, ರವಿಕುಮಾರ್ ಸಮರ್ಥ್ 1 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಆ ಬಳಿಕ ಬಂದ ಬಿಆರ್​ ಶರತ್ (15), ನಿಕಿಕ್ ಜೋಸ್ (9) ಹಾಗೂ ಮನೀಷ್ ಪಾಂಡೆ (24) ಬೇಗನೆ ನಿರ್ಗಮಿಸಿದರು. ಇನ್ನು ಅಭಿನವ್ ಮನೋಹರ್ 3 ರನ್​ಗಳಿಸಿದರೆ, ಮನೋಜ್ ಭಂಡಾಗೆ 8 ರನ್​ಗಳಿಸಿ ವಿಕೆಟ್ ಕೈಚೆಲ್ಲಿದರು.

ಇದಾಗ್ಯೂ 10ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿಜಯಕುಮಾರ್ ವೈಶಾಕ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. 61 ಎಸೆತಗಳನ್ನು ಎದುರಿಸಿದ ವೈಶಾಕ್ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 54 ರನ್​ಗಳ ಕೊಡುಗೆ ನೀಡಿದರು. ಈ ಅರ್ಧಶತಕದ ನೆರವಿನಿಂದ ಕರ್ನಾಟಕ ತಂಡವು 43.5 ಓವರ್​ಗಳಲ್ಲಿ 143 ರನ್​ಗಳಿಸಿ ಆಲೌಟ್ ಆಯಿತು.

ಹರ್ಯಾಣ ಪರ ಸುಮಿತ್ ಕುಮಾರ್ 3 ವಿಕೆಟ್ ಪಡೆದರೆ, ಯುಜ್ವೇಂದ್ರ ಚಹಾಲ್ ಹಾಗೂ ನಿಶಾಂತ್ ಸಿಂಧು ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.

ಇನ್ನು 144 ರನ್​​ಗಳ ಸುಲಭ ಗುರಿ ಬೆನ್ನತ್ತಿದ ಹರ್ಯಾಣ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 35 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿತ್ತು.

ಈ ಹಂತದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ನಿಶಾಂತ್ ಸಿಂಧು (43) ಹಾಗೂ ರೋಹಿತ್ ಪ್ರಮೋದ್ ಶರ್ಮಾ (63) ತಂಡಕ್ಕೆ ಆಸರೆಯಾದರು. ಅಲ್ಲದೆ 31.1 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು ಹರ್ಯಾಣ ತಂಡವು ಗೆಲುವಿನ ದಡ ಸೇರಿತು. ಈ ಮೂಲಕ ಹರ್ಯಾಣ ತಂಡವು 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಹರ್ಯಾಣ ಪ್ಲೇಯಿಂಗ್ ಇಲೆವೆನ್: ಅಂಕಿತ್ ಕುಮಾರ್ , ಯುವರಾಜ್ ಸಿಂಗ್ , ಹಿಮಾಂಶು ರಾಣಾ , ಅಶೋಕ್ ಮೆನಾರಿಯಾ (ನಾಯಕ) , ನಿಶಾಂತ್ ಸಿಂಧು , ರೋಹಿತ್ ಪರ್ಮೋದ್ ಶರ್ಮಾ ( ವಿಕೆಟ್ ಕೀಪರ್ ) , ರಾಹುಲ್ ತೆವಾಟಿಯಾ , ಸುಮಿತ್ ಕುಮಾರ್ , ಅನ್ಶುಲ್ ಕಾಂಬೋಜ್ , ಹರ್ಷಲ್ ಪಟೇಲ್ , ಯುಜ್ವೇಂದ್ರ ಚಾಹಲ್.

ಇದನ್ನೂ ಓದಿ: ವಿಶೇಷ ದಾಖಲೆ ಬರೆದ ರುತುರಾಜ್ ಗಾಯಕ್ವಾಡ್

ಕರ್ನಾಟಕ ಪ್ಲೇಯಿಂಗ್ ಇಲೆವೆನ್: ರವಿಕುಮಾರ್ ಸಮರ್ಥ್ , ಮಯಾಂಕ್ ಅಗರ್ವಾಲ್ (ನಾಯಕ) , ನಿಕಿನ್ ಜೋಸ್ , ಮನೀಷ್ ಪಾಂಡೆ , ಅಭಿನವ್ ಮನೋಹರ್ , ಶರತ್ ಬಿ ಆರ್ ( ವಿಕೆಟ್ ಕೀಪರ್ ) , ಮನೋಜ್ ಭಾಂಡಗೆ , ಕೃಷ್ಣಪ್ಪ ಗೌತಮ್ , ಜಗದೀಶ ಸುಚಿತ್ , ವಿಜಯ್ಕುಮಾರ್ ವೈಶಾಕ್ , ವಾಸುಕಿ ಕೌಶಿಕ್.

Published On - 5:55 pm, Mon, 4 December 23

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ