AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Hazare Trophy: ಟೂರ್ನಿಯಲ್ಲಿ 4ನೇ ಶತಕ ಸಿಡಿಸಿದ ಮಯಾಂಕ್ ಅಗರ್ವಾಲ್; ಕರ್ನಾಟಕಕ್ಕೆ 6ನೇ ಜಯ

Vijay Hazare Trophy: ಕರ್ನಾಟಕ ಕ್ರಿಕೆಟ್ ತಂಡವು ವಿಜಯ್ ಹಜಾರೆ ಟ್ರೋಫಿಯಲ್ಲಿ ನಾಗಾಲ್ಯಾಂಡ್ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಇದರಿಂದಾಗಿ ತಂಡವು 7 ಪಂದ್ಯಗಳಲ್ಲಿ 6 ಗೆಲುವುಗಳೊಂದಿಗೆ ಸಿ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ತಂಡದ ಪರ ನಾಯಕ ಮಯಾಂಕ್ ಅಗರ್ವಾಲ್ ಅವರು 116 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದರೆ, ಬೌಲರ್‌ಗಳು ಸಹ ಅತ್ಯುತ್ತಮ ಪ್ರದರ್ಶನ ನೀಡಿದರು.

Vijay Hazare Trophy: ಟೂರ್ನಿಯಲ್ಲಿ 4ನೇ ಶತಕ ಸಿಡಿಸಿದ ಮಯಾಂಕ್ ಅಗರ್ವಾಲ್; ಕರ್ನಾಟಕಕ್ಕೆ 6ನೇ ಜಯ
ಮಯಾಂಕ್ ಅಗರ್ವಾಲ್ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Jan 05, 2025 | 7:30 PM

Share

ವಿಜಯ್ ಹಜಾರೆಯಲ್ಲಿ ಟ್ರೋಫಿಯಲ್ಲಿ ಕರ್ನಾಟಕ ತಂಡ ಆರನೇ ಜಯ ದಾಖಲಿಸಿದೆ. ಈ ಟೂರ್ನಿಯಲ್ಲಿ ಇದುವರೆಗೆ 7 ಪಂದ್ಯಗಳನ್ನಾಡಿರುವ ಮಯಾಂಕ್ ಅಗರ್ವಾಲ್ ನೇತೃತ್ವದ ಕರ್ನಾಟಕ ತಂಡ 6 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, 1 ಪಂದ್ಯದಲ್ಲಿ ಮಾತ್ರ ಸೋಲನುಭವಿಸಿದೆ. ಈ ಮೂಲಕ ಸಿ ಗುಂಪಿನಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆದಿದೆ. ಇಂದು ನಡೆದ ನಾಗಲ್ಯಾಂಡ್ ವಿರುದ್ಧದ ಪಂದ್ಯದಲ್ಲೂ ಅಮೋಘ ಪ್ರದರ್ಶನ ನೀಡಿದ ಕರ್ನಾಟಕ ತಂಡ ಬರೋಬ್ಬರಿ 9 ವಿಕೆಟ್​​ಗಳ ಭರ್ಜರಿ ಜಯ ದಾಖಲಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನಾಗಲ್ಯಾಂಡ್ ತಂಡ 206 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ ಕೇವಲ 1 ವಿಕೆಟ್ ಕಳೆದುಕೊಂಡು 37.5 ಓವರ್​ಗಳಲ್ಲಿ ಜಯದ ನಗೆ ಬೀರಿತು.

ನಾಗಲ್ಯಾಂಡ್​ಗೆ ಆರಂಭಿಕ ಆಘಾತ

ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ನಾಗಲ್ಯಾಂಡ್ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ಆರಂಭಿಕರಿಬ್ಬರು ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು. ಇದರಲ್ಲಿ ಸೆದೆಝಾಲಿ ರೂಪೆರೊ ಇನ್ನಿಂಗ್ಸ್​ನ ಮೊದಲ ಓವರ್​ನ ಮೊದಲ ಎಸೆತದಲ್ಲೇ ಕೌಶಿಕ್​ಗೆ ಬಲಿಯಾದರೆ, ಮತ್ತೊಬ್ಬ ಆರಂಭಿಕ ದೇಗಾ ನಿಶ್ಚಲ್ ಕೂಡ ಕೇವಲ 1 ರನ್​ಗಳಿಗೆ ವಿಕೆಟ್ ಒಪ್ಪಿಸಿದರು.

ಮತ್ತೆ ಮಿಂಚಿದ ಶ್ರೇಯಸ್

ಆ ಬಳಿಕ ಬಂದವರು ಕೂಡ ಕ್ರೀಸ್​ನಲ್ಲಿ ಹೆಚ್ಚು ಹೊತ್ತು ನಿಲ್ಲುವ ಕೆಲಸ ಮಾಡಲಿಲ್ಲ. ಮಧ್ಯಮ ಕ್ರಮಾಂಕದಲ್ಲಿ ಬಂದ ನಾಯಕ ರಾಂಗ್ಸೆನ್ ಜೊನಾಥನ್ ನಾಯಕನ ಇನ್ನಿಂಗ್ಸ್ ಆಡಿ 73 ಎಸೆತಗಳಲ್ಲಿ 51 ರನ್​ಗಳ ಕಾಣಿಕೆ ನೀಡಿದರು. ಇವರಿಗೆ ಸಾಥ್ ನೀಡಿದ ಚೇತನ್ ಬಿಸ್ಟ್ ಕೂಡ 77 ರನ್​ಗಳ ಇನ್ನಿಂಗ್ಸ್ ಆಡಿದರು. ಈ ಇಬ್ಬರನ್ನು ಹೊರತುಪಡಿಸಿ ತಂಡದಿಂದ ಮತ್ತ್ಯಾವ ಆಟಗಾರನಿಗೂ ಅರ್ಧಶತಕದ ಕೊಡುಗೆ ನೀಡಲು ಸಾಧ್ಯವಾಗಲಿಲ್ಲ. ಇದರ ಪರಿಣಾಮವಾಗಿ ಇಡೀ ತಂಡಕ್ಕೆ ಪೂರ್ಣ 50 ಓವರ್​ಗಳನ್ನು ಆಡಲು ಸಾಧ್ಯವಾಗದೆ 48.3 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿತು. ಇತ್ತ ಕರ್ನಾಟಕ ಪರ ಶ್ರೇಯಸ್ ಗೋಪಾಲ್ 4 ವಿಕೆಟ್ ಪಡೆದರೆ, ಅಭಿಲಾಷ್ ಶೆಟ್ಟಿ 2 ವಿಕೆಟ್ ಪಡೆದರು. ಉಳಿದವರಿಗೆ ತಲಾ ಒಂದೊಂದು ವಿಕೆಟ್ ಸಿಕ್ಕಿತು.

ಮಯಾಂಕ್ ಗೆಲುವಿನ ಶತಕ

ಈ ಗುರಿ ಬೆನ್ನಟ್ಟಿದ ಕರ್ನಾಟಕ ತಂಡಕ್ಕೂ ಉತ್ತಮ ಆರಂಭ ಸಿಗಲಿಲ್ಲ. ತಂಡದ ಮೊತ್ತ 9 ರನ್​ಗಳಿರುವಾಗ ಆರಂಭಿಕ ನಿಖಿನ್ ಜೋಶ್ ಕೇವಲ 1 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರು. ಆದರೆ ಆ ಬಳಿಕ ಜೊತೆಯಾದ ನಾಯಕ ಮಯಾಂಕ್ ಅಗರ್ವಾಲ್ ಹಾಗೂ ಕೆವಿ ಅವಿನಾಶ್ ತಂಡವನ್ನು ಗೆಲುವಿನ ದಡ ಮುಟ್ಟಿಸಿ ಅಜೇಯರಾಗಿ ಮರಳಿದರು. ಈ ವೇಳೆ ನಾಯಕ ಮಯಾಂಕ್ ಟೂರ್ನಿಯ 4ನೇ ಶತಕವನ್ನು ಪೂರ್ಣಗೊಳಿಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 119 ಎಸೆತಗಳನ್ನು ಎದುರಿಸಿದ ಮಯಾಂಕ್ 9 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 116 ರನ್ ಕಲೆಹಾಕಿದರೆ, ಅವಿನಾಶ್ 95 ಎಸೆತಗಳಲ್ಲಿ 10 ಬೌಂಡರಿ ಸಹಿತ 82 ರನ್​ಗಳ ಅಜೇಯ ಕೊಡುಗೆ ನೀಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!