AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Hazare Trophy: ಕೇವಲ 33 ಎಸೆತಗಳಲ್ಲಿ ಪಂದ್ಯ ಗೆದ್ದು ಇತಿಹಾಸ ಬರೆದ ಮುಂಬೈ

Vijay Hazare Trophy: ಮುಂಬೈ ತಂಡವು ವಿಜಯ್ ಹಜಾರೆ ಟ್ರೋಫಿಯಲ್ಲಿ ಅರುಣಾಚಲ ಪ್ರದೇಶವನ್ನು 9 ವಿಕೆಟ್‌ಗಳಿಂದ ಸೋಲಿಸಿ ಅದ್ಭುತ ಸಾಧನೆ ಮಾಡಿದೆ. ಮುಂಬೈ ಕೇವಲ 33 ಎಸೆತಗಳಲ್ಲಿ ಈ ಪಂದ್ಯವನ್ನು ಗೆದ್ದುಕೊಂಡಿದ್ದು ತಂಡದ ಪರ ರಘುವಂಶಿ ಮತ್ತು ಶಾರ್ದೂಲ್ ಠಾಕೂರ್ ಅಮೋಘ ಪ್ರದರ್ಶನ ನೀಡಿದರು. ಈ ಗೆಲುವಿನೊಂದಿಗೆ ಮುಂಬೈ ಅತಿ ಕಡಿಮೆ ಎಸೆತಗಳಲ್ಲಿ ಪಂದ್ಯ ಗೆದ್ದ ದಾಖಲೆಯನ್ನೂ ಬರೆದಿದೆ.

Vijay Hazare Trophy: ಕೇವಲ 33 ಎಸೆತಗಳಲ್ಲಿ ಪಂದ್ಯ ಗೆದ್ದು ಇತಿಹಾಸ ಬರೆದ ಮುಂಬೈ
ಮುಂಬೈ ತಂಡ
ಪೃಥ್ವಿಶಂಕರ
|

Updated on: Dec 27, 2024 | 7:52 AM

Share

ವಿಜಯ್ ಹಜಾರೆ ಟ್ರೋಫಿಯಲ್ಲಿ ಮುಂಬೈ ತಂಡ ಅದ್ಭುತ ಸಾಧನೆ ಮಾಡಿದೆ. ಅಹಮದಾಬಾದ್‌ನ ಗುಜರಾತ್ ಕಾಲೇಜು ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ತಂಡವು ಅರುಣಾಚಲ ಪ್ರದೇಶವನ್ನು 9 ವಿಕೆಟ್‌ಗಳಿಂದ ಸೋಲಿಸಿದ್ದು, ಈ ಪಂದ್ಯವನ್ನು ಕೇವಲ 33 ಎಸೆತಗಳಲ್ಲಿ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅರುಣಾಚಲ ಪ್ರದೇಶ 32.2 ಓವರ್‌ಗಳಲ್ಲಿ ಕೇವಲ 73 ರನ್​ಗಳಿಗೆ ಆಲೌಟ್ ಆಯಿತು. ಇದಕ್ಕೆ ಉತ್ತರವಾಗಿ ಮುಂಬೈ ಒಂದು ವಿಕೆಟ್ ಕಳೆದುಕೊಂಡು ಕೇವಲ 5.3 ಓವರ್​ಗಳಲ್ಲಿ ಜಯದ ನಗೆಬೀರಿತು. ಈ ಗೆಲುವಿನೊಂದಿಗೆ ಮುಂಬೈ ವಿಜಯ್ ಹಜಾರೆ ಟ್ರೋಫಿಯಲ್ಲಿ ಅತಿ ಕಡಿಮೆ ಎಸೆತಗಳಲ್ಲಿ ಪಂದ್ಯ ಗೆದ್ದ ದಾಖಲೆಯನ್ನೂ ಬರೆಯಿತು.

ಶಾರ್ದೂಲ್ ನಾಯಕತ್ವದಲ್ಲಿ ಸಾಧನೆ

ವಾಸ್ತವವಾಗಿ ಈ ಪಂದ್ಯದಿಂದ ಶ್ರೇಯಸ್ ಅಯ್ಯರ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಶಾರ್ದೂಲ್ ಅವರಿಗೆ ತಂಡದ ನಾಯಕತ್ವ ನೀಡಲಾಗಿತ್ತು. ನಾಯಕತ್ವದ ಜೊತೆಗೆ ಬೌಲಿಂಗ್‌ನಲ್ಲೂ ಮಿಂಚಿದ ಠಾಕೂರ್ 3 ಓವರ್​ಗಳಲ್ಲಿ ಕೇವಲ 8 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಹರ್ಷ್ ತನ್ನಾ, ಹಿಮಾಂಶು ಸಿಂಗ್ ಮತ್ತು ಅಂಕೋಲೆಕರ್ ಕೂಡ ತಲಾ 2 ವಿಕೆಟ್ ಪಡೆದರು.

ಇನ್ನು ಅರುಣಾಚಲಪ್ರದೇಶ ತಂಡದ ಪ್ರದರ್ಶನದ ಬಗ್ಗೆ ಹೇಳುವುದಾದರೆ 10ನೇ ಕ್ರಮಾಂಕದ ಬಂದ ಯಾಬ್ ನಿಯಾ ತಂಡದ ಪರ ಗರಿಷ್ಠ 17 ರನ್ ಕಲೆಹಾಕಿದರೆ, ಆರಂಭಿಕ ಟೆಕಿ ಡೋರಿಯಾ 13 ರನ್​ಗಳ ಇನ್ನಿಂಗ್ಸ್ ಆಡಿದರು. ಉಳಿದಂತೆ ತಂಡದ ಮೂವರು ಬ್ಯಾಟ್ಸ್‌ಮನ್​ಗಳಿಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

ರಘುವಂಶಿ ಬಿರುಸಿನ ಬ್ಯಾಟಿಂಗ್

ಈ ಗುರಿ ಬೆನ್ನಟ್ಟಿದ ಮುಂಬೈ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಅಂಕ್ರಿಶ್ ರಘುವಂಶಿ ಕೇವಲ 18 ಎಸೆತಗಳಲ್ಲಿ 9 ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ 50 ರನ್ ಗಳಿಸಿದರು. 11 ಎಸೆತಗಳಲ್ಲಿ 15 ರನ್ ಗಳಿಸಿ ಔಟಾದ ಆಯುಷ್ ಮ್ಹಾತ್ರೆ ರೂಪದಲ್ಲಿ ಮುಂಬೈನ ಏಕೈಕ ವಿಕೆಟ್ ಪತನವಾಯಿತು.

ಟೂರ್ನಿಯ ಪಾಯಿಂಟ್ಸ್ ಪಟ್ಟಿ ಕುರಿತು ಮಾತನಾಡುವುದಾದರೆ, ಮುಂಬೈ ತಂಡ ಸಿ ಗುಂಪಿನಲ್ಲಿ 3 ಪಂದ್ಯಗಳಲ್ಲಿ 2 ಗೆದ್ದು ಎರಡನೇ ಸ್ಥಾನದಲ್ಲಿದೆ. ಇದುವರೆಗಿನ ಮೂರು ಪಂದ್ಯಗಳನ್ನು ಗೆದ್ದಿರುವ ಕರ್ನಾಟಕ ತಂಡ ಮೊದಲ ಸ್ಥಾನದಲ್ಲಿದೆ. ಪಂಜಾಬ್ ಮೂರನೇ ಸ್ಥಾನದಲ್ಲಿದ್ದು, ಸೌರಾಷ್ಟ್ರ ನಾಲ್ಕನೇ ಸ್ಥಾನದಲ್ಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು