AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಠಪೂರ್ತಿ ಕುಡಿದು ರಸ್ತೆಯಲ್ಲೇ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ರಂಪಾಟ! ವಿಡಿಯೋ ಸಖತ್ ವೈರಲ್

Vinod kambli: ಹಿರಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಬಾಲ್ಯದ ಗೆಳೆಯ ಮತ್ತು ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರು ಕ್ರಿಕೆಟ್‌ಗಿಂತ ವಿವಾದಗಳಿಂದಲೇ ಹೆಚ್ಚು ಸುದ್ದಿಯಾಗುತ್ತಿದ್ದಾರೆ. ಭಾನುವಾರ ಮಧ್ಯಾಹ್ನ, ಮುಂಬೈನ ತನ್ನ ಸೊಸೈಟಿಯ ಗೇಟ್‌ನಲ್ಲಿ ಕಾಂಬ್ಳಿ ಒಂದು ಕಾರಿಗೆ ಡಿಕ್ಕಿ ಹೊಡೆದು, ಅಲ್ಲಿನ ನಾಗರೀಕರೊಂದಿಗೆ ರಂಪಾಟ ಮಾಡಿದ್ದರು.

ಕಂಠಪೂರ್ತಿ ಕುಡಿದು ರಸ್ತೆಯಲ್ಲೇ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ರಂಪಾಟ! ವಿಡಿಯೋ ಸಖತ್ ವೈರಲ್
ವಿನೋದ್ ಕಾಂಬ್ಳಿ
TV9 Web
| Edited By: |

Updated on: Mar 02, 2022 | 6:03 PM

Share

ಹಿರಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ಬಾಲ್ಯದ ಗೆಳೆಯ ಮತ್ತು ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ (Vinod Kambli) ಅವರು ಕ್ರಿಕೆಟ್‌ಗಿಂತ ವಿವಾದಗಳಿಂದಲೇ ಹೆಚ್ಚು ಸುದ್ದಿಯಾಗುತ್ತಿದ್ದಾರೆ. ಭಾನುವಾರ ಮಧ್ಯಾಹ್ನ, ಮುಂಬೈನ ತನ್ನ ಸೊಸೈಟಿಯ ಗೇಟ್‌ನಲ್ಲಿ ಕಾಂಬ್ಳಿ ಒಂದು ಕಾರಿಗೆ ಡಿಕ್ಕಿ ಹೊಡೆದು, ಅಲ್ಲಿನ ನಾಗರೀಕರೊಂದಿಗೆ ರಂಪಾಟ ಮಾಡಿದ್ದರು. ಅದೇ ಆರೋಪದ ಮೇಲೆ ಕಾಂಬ್ಳಿ ಅವರನ್ನು ಮುಂಬೈ ಪೊಲೀಸರು (Mumbai Police) ಭಾನುವಾರ ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ನಡುವೆ ವಿನೋದ್ ಕಾಂಬ್ಳಿ ಅಂದಿನ ಪರಿಸ್ಥಿತಿಯನ್ನು ತೋರಿಸುವ ವಿಡಿಯೋ ಇದೀಗ ವೈರಲ್ ಆಗಿದೆ. ಕೆಂಪು ಟಿ-ಶರ್ಟ್ ಮತ್ತು ಹಾಫ್ ಪ್ಯಾಂಟ್ ಧರಿಸಿರುವ ಕಾಂಬ್ಳಿ ಅವರ ರಂಪಾಟವನ್ನು ಈ ವೀಡಿಯೊದಲ್ಲಿ ನೋಡಬಹುದಾಗಿದೆ. ವಿನೋದ್ ಕುಡಿದ ಅಮಲಿನಲ್ಲಿ ಕಾರೊಂದಕ್ಕೆ ಡಿಕ್ಕಿ ಹೊಡೆದಿದ್ದಾರೆ. ಕಂಠಪೂರ್ತಿ ಕುಡಿದಿದ್ದ ವಿನೋದ್‌ಗೆ ಸರಿಯಾಗಿ ನಡೆಯಲು ಕೂಡ ಸಾಧ್ಯವಾಗುತ್ತಿರಲಿಲ್ಲ ಎಂಬುದು ವಿಡಿಯೋದಲ್ಲಿ ಸೆರೆಯಾಗಿದೆ.

ವಿನೋದ್ ಕಾಂಬ್ಳಿ ವಿರುದ್ಧ ಐಪಿಸಿಯ ಸೆಕ್ಷನ್ 279 (ಅಜಾಗರೂಕತೆಯಿಂದ ಚಾಲನೆ), ಸೆಕ್ಷನ್ 336 ಮತ್ತು ಸೆಕ್ಷನ್ 427 ರ ಅಡಿಯಲ್ಲಿ ಇನ್ನೊಬ್ಬರ ಜೀವಕ್ಕೆ ಅಪಾಯವನ್ನುಂಟುಮಾಡುವ ಆರೋಪ ಹೊರಿಸಲಾಗಿದೆ. ಬಾಂದ್ರಾ ಪೊಲೀಸ್ ಠಾಣೆಯ ಅಧಿಕಾರಿ ಈ ಮಾಹಿತಿ ನೀಡಿದ್ದರು. ಈ ಬಗ್ಗೆ ಪಿಟಿಐ ಮಾಹಿತಿ ನೀಡಿತ್ತು. ಬಂಧನದ ನಂತರ ಕಾಂಬ್ಳಿಗೆ ವೈದ್ಯಕೀಯ ಪರೀಕ್ಷೆ ನಡೆಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ಮುಂಬೈ ಪೊಲೀಸರು, ವಿನೋದ್ ಕಾಂಬ್ಳಿ ಅವರನ್ನು ಬಂಧಿಸಲಾಗಿದ್ದು, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಅವರ ವೈದ್ಯಕೀಯ ಪರೀಕ್ಷೆಯನ್ನು ಭಾಭಾ ಆಸ್ಪತ್ರೆಯಲ್ಲಿ ನಡೆಸಲಾಗಿದೆ ಮತ್ತು ಅವರ ರಕ್ತದ ಮಾದರಿಯನ್ನು ಸಿಎಗೆ ಸುರಕ್ಷಿತವಾಗಿ ಇರಿಸಲಾಗಿದೆ ಎಂದು ಹೇಳಿಕೆ ನೀಡಿದ್ದರು.

ವಾಚ್‌ಮನ್ ಮತ್ತು ನಿವಾಸಿಗಳೊಂದಿಗೆ ರಂಪಾಟ

ಕಾರು ಅಪಘಾತವಾದ ನಂತರ ವಿನೋದ್ ಕಾಂಬ್ಳಿ ವಾಚ್‌ಮನ್ ಮತ್ತು ಕಾಂಪ್ಲೆಕ್ಸ್‌ನ ಕೆಲವು ನಿವಾಸಿಗಳೊಂದಿಗೆ ವಾಗ್ವಾದ ನಡೆಸಿದ ವಿಡಿಯೋ ಕೂಡ ಸಖತ್ ವೈರಲ್ ಆಗುತ್ತಿದೆ.

ಸೈಬರ್ ವಂಚನೆ

ಕೆಲ ತಿಂಗಳ ಹಿಂದೆಯಷ್ಟೇ ಕಾಂಬ್ಳಿ ಬೇರೆ ಕಾರಣಕ್ಕೆ ಸುದ್ದಿಯಾಗಿದ್ದರು. ಡಿಸೆಂಬರ್ 2021 ರಲ್ಲಿ, ಸೈಬರ್ ವಂಚನೆಗೆ ಮಾಜಿ ಎಡಗೈ ಬ್ಯಾಟ್ಸ್‌ಮನ್ ಕಾಂಬ್ಳಿ ಬಲಿಯಾಗಿದ್ದರು. ತಮ್ಮ ಖಾತೆಯಿಂದ ಒಂದು ಲಕ್ಷ ರೂಪಾಯಿ ಹಣ ಡ್ರಾ ಆಗಿದೆ ಎಂದು ಹೇಳಿ ಕಾಂಬ್ಳಿ ಬಾಂದ್ರಾ ಪೊಲೀಸರಿಗೆ ದೂರು ನೀಡಿದ್ದರು.

ಕಾಂಬ್ಳಿ ಅವರ ವೃತ್ತಿಜೀವನ

ವಿನೋದ್ ಕಾಂಬ್ಳಿ 1990 ರ ದಶಕದಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದರು ಮತ್ತು ದೀರ್ಘಕಾಲದವರೆಗೆ ತಂಡದ ಭಾಗವಾಗಿದ್ದರು. ಅವರು 17 ಟೆಸ್ಟ್‌ಗಳಲ್ಲಿ 54 ರ ಸರಾಸರಿಯಲ್ಲಿ 1084 ರನ್ ಗಳಿಸಿದರು, ಇದರಲ್ಲಿ 4 ಶತಕಗಳು ಸೇರಿವೆ. ಅದೇ ಸಮಯದಲ್ಲಿ, 104 ODIಗಳಲ್ಲಿ, ಅವರ ಬ್ಯಾಟ್‌ನಿಂದ 2477 ರನ್ ಹರಿದುಬಂದಿವೆ. ಇದರಲ್ಲಿ ಅವರು 2 ಶತಕ ಮತ್ತು 14 ಅರ್ಧ ಶತಕಗಳನ್ನು ಗಳಿಸಿದರು.

ಇದನ್ನೂ ಓದಿ:ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಸಚಿನ್ ಬಾಲ್ಯ ಸೇಹಿತ ವಿನೋದ್ ಕಾಂಬ್ಳಿಯನ್ನು ಬಂಧಿಸಿದ ಮುಂಬೈ ಪೊಲೀಸರು..!

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?