AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಲಕ್ ವರ್ಮಾ ಮೇಲೆ ಪಾಂಡ್ಯ ಗರಂ? ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ!

IPL 2026 MI vs GT: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 199 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಕೇವಲ 100 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಹಾರ್ದಿಕ್ ಪಾಂಡ್ಯ ಪಡೆ 99 ರನ್​ಗಳ ಅಮೋಘ ಗೆಲುವು ದಾಖಲಿಸಿದೆ.

ತಿಲಕ್ ವರ್ಮಾ ಮೇಲೆ ಪಾಂಡ್ಯ ಗರಂ? ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ!
Hardik Pandya - Tilak Varma
ಝಾಹಿರ್ ಯೂಸುಫ್
| Edited By: |

Updated on:Apr 21, 2026 | 3:42 PM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 30ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಅಮೋಘ ಗೆಲುವು ದಾಖಲಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪರ ತಿಲಕ್ ವರ್ಮಾ (101) ಅಜೇಯ ಶತಕ ಸಿಡಿಸಿದ್ದರು. ಈ ಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್​ 20 ಓವರ್​ಗಳಲ್ಲಿ 199 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಕೇವಲ 100 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವು 99 ರನ್​ಗಳ ಭರ್ಜರಿ ಜಯ ಸಾಧಿಸಿತು.

ಈ ಗೆಲುವಿನ ಬಳಿಕ ಮೈದಾನದಲ್ಲಿ ನಡೆದ ಒಂದು ಸನ್ನಿವೇಶದ ವಿಡಿಯೋ ಭಾರೀ ವೈರಲ್ ಆಗಿದೆ. ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ಬ್ಯಾಟರ್ ತಿಲಕ್ ವರ್ಮಾ ಅವರ ಮೇಲೆ ರೇಗಿದ್ದಾರೆ ಎಂದು ಈ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡಲಾಗಿದೆ.

ಏನಿದು ಘಟನೆ?

ಈ ಪಂದ್ಯದ ನಡುವೆ ಸ್ಟ್ರಾಟಜಿಕ್ ಟೈಮ್‌ಔಟ್ ಸಮಯದಲ್ಲಿ ಈ ಘಟನೆ ನಡೆದಿದೆ. ತಿಲಕ್ ವರ್ಮಾ ಆರಂಭದಲ್ಲಿ ರನ್ ಗಳಿಸಲು ಪರದಾಡುತ್ತಿದ್ದರು (22 ಎಸೆತಗಳಲ್ಲಿ 19 ರನ್). ಈ ವೇಳೆ ಮೈದಾನಕ್ಕೆ ಬಂದ ನಾಯಕ ಹಾರ್ದಿಕ್ ಪಾಂಡ್ಯ, ತಿಲಕ್ ಅವರತ್ತ ಕೈ ಸನ್ನೆಯೊಂದಿಗೆ ಜೋರಾಗಿ ಏನನ್ನೋ ಹೇಳುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇದನ್ನು ಕಂಡ ಅಭಿಮಾನಿಗಳು ಹಾರ್ದಿಕ್ ತನ್ನದೇ ಆಟಗಾರನ ಮೇಲೆ ಕೋಪಗೊಂಡಿದ್ದಾರೆ ಎಂದು ಭಾವಿಸಿದ್ದರು.

ಹಾರ್ದಿಕ್ ಪಾಂಡ್ಯ ಸ್ಪಷ್ಟನೆ:

ಈ ಪಂದ್ಯದ ನಂತರ ಈ ಬಗ್ಗೆ ಸ್ಪಷ್ಟನೆ ನೀಡಿದ ಹಾರ್ದಿಕ್ ಪಾಂಡ್ಯ, “ನಾನು ಅವರ ಮೇಲೆ ರೇಗುತ್ತಿರಲಿಲ್ಲ, ಅದು ಪ್ರೇರೇಪಿಸುವ ಮಾತುಗಳಷ್ಟೇ. ‘ನೀನು ಇದನ್ನು ಮಾಡಬಲ್ಲೆ, ನೀನು ಗೆಲ್ಲಿಸಿ ತೋರಿಸುತ್ತೀಯಾ!’ ಎಂದು ಅವರನ್ನು ಹುರಿದುಂಬಿಸಿದ್ದೆ” ಎಂದಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿದ ತಿಲಕ್ ವರ್ಮಾ ಕೂಡ ಹಾರ್ದಿಕ್ ಪಾಂಡ್ಯ ತನ್ನ ಹುರಿದುಂಬಿಸಿದ್ದರು ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ನಮ್ಮ ನಾಯಕ ರಣ ಉತ್ಸಾಹದಲ್ಲಿದ್ದರು. ಹೀಗಾಗಿ ನಾನು ಅವರಿಗೆ ಸ್ವಲ್ಪ ಶಾಂತರಾಗಿ ಎಂದು ಹೇಳಿದ್ದೆ ಎಂದು ತಿಳಿಸಿದ್ದಾರೆ.

ಕೆಲಸ ಮಾಡಿದ “ಪೆಪ್ ಟಾಕ್”:

ತಿಲಕ್ ವರ್ಮಾ ಅವರನ್ನು ಹುರಿದುಂಬಿಸಿದ ಬೆನ್ನಲ್ಲೇ ಟೈಮ್‌ಔಟ್ ಬಳಿಕ ಅಬ್ಬರಿಸಿದ ತಿಲಕ್ ವರ್ಮಾ, ಕೇವಲ 45 ಎಸೆತಗಳಲ್ಲಿ ತಮ್ಮ ಚೊಚ್ಚಲ ಐಪಿಎಲ್ ಶತಕ (101* ರನ್) ಸಿಡಿಸಿದರು. ಇವರ ಈ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ 99 ರನ್‌ಗಳ ಬೃಹತ್ ಜಯ ದಾಖಲಿಸಲು ಸಾಧ್ಯವಾಯಿತು.

ಇದನ್ನೂ ಓದಿ: ವಿರಾಟ್ ಕೊಹ್ಲಿಗಾಗಿ ಬ್ಯಾಟ್ ಹಿಡಿಯಲಿದ್ದಾರೆ ನೊವಾಕ್ ಜೋಕೊವಿಚ್!

ಈ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಿಂದ ಏಳನೇ ಸ್ಥಾನಕ್ಕೇರಿದೆ. ಅಲ್ಲದೆ ಒಟ್ಟು 4 ಅಂಕಗಳೊಂದಿಗೆ ಪ್ಲೇಆಫ್ ರೇಸ್ ಆಸೆಯನ್ನು ಜೀವಂತವಿರಿಸಿಕೊಂಡಿದೆ.

Published On - 1:53 pm, Tue, 21 April 26

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’