AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊಹ್ಲಿ… ಕೊಹ್ಲಿ’.. ಆಸ್ಟ್ರೇಲಿಯಾದಲ್ಲಿ ಹೆಚ್ಚಿದ ವಿರಾಟ್ ಫೀವರ್; ಕೊಹ್ಲಿ ನೋಡಲು ಮುಗಿಬಿದ್ದ ಫ್ಯಾನ್ಸ್; ವಿಡಿಯೋ

T20 World Cup 2022: 6 ವರ್ಷಗಳ ನಂತರ ಮೆನ್ ಇನ್ ಬ್ಲೂ ತಂಡ ಟಿ20 ವಿಶ್ವಕಪ್‌ನ ಸೆಮಿಫೈನಲ್ ಆಡುತ್ತಿರುವುದರಿಂದ ಇಡೀ ಅಡಿಲೇಡ್ ಓವಲ್ ಭಾರತೀಯ ಅಭಿಮಾನಿಗಳಿಂದ ತುಂಬಿ ತುಳುಕುತ್ತಿದೆ.

‘ಕೊಹ್ಲಿ... ಕೊಹ್ಲಿ'.. ಆಸ್ಟ್ರೇಲಿಯಾದಲ್ಲಿ ಹೆಚ್ಚಿದ ವಿರಾಟ್ ಫೀವರ್; ಕೊಹ್ಲಿ ನೋಡಲು ಮುಗಿಬಿದ್ದ ಫ್ಯಾನ್ಸ್; ವಿಡಿಯೋ
ಕೊಹ್ಲಿ ಹಿಂದೆ ಮುಗಿಬಿದ್ದ ಫ್ಯಾನ್ಸ್Image Credit source: Timesnow
TV9 Web
| Updated By: ಪೃಥ್ವಿಶಂಕರ|

Updated on:Nov 09, 2022 | 12:24 PM

Share

ಟೀಂ ಇಂಡಿಯಾದ (Team India) ಸೂಪರ್‌ಸ್ಟಾರ್ ವಿರಾಟ್ ಕೊಹ್ಲಿ (Virat Kohli) ಸದ್ಯದ ಕ್ರಿಕೆಟ್ ಜಗತ್ತಿನ ಸಾಮ್ರಾಟನಾಗಿ ಮೆರೆಯುತ್ತಿದ್ದಾರೆ. ತಮ್ಮ ಅದ್ಭುತ ಬ್ಯಾಟಿಂಗ್ ಕಲೆಯಿಂದ ಕ್ರಿಕೆಟ್ ಪಂಡಿತರಿಂದ ಶಹಬ್ಬಾಸ್​ ಗಿರಿ ಪಡೆದಿರುವ ಕಿಂಗ್ ಕೊಹ್ಲಿಗೆ ಇಡೀ ವಿಶ್ವದಲ್ಲೇ ಕೋಟ್ಯಾಂತರ ಅಭಿಮಾನಿಗಳಿದ್ದಾರೆ. ಹೀಗಾಗಿ ಕೊಹ್ಲಿ ಎಲ್ಲಿಗೆ ಹೋದರೂ, ಅಭಿಮಾನಿಗಳು ಅವರ ಆಟೋಗ್ರಾಫ್ ತೆಗೆದುಕೊಳ್ಳಲು ಅಥವಾ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿಳುತ್ತಾರೆ. ಮಂಗಳವಾರ (ನವೆಂಬರ್ 8) ರಾತ್ರಿ ದಕ್ಷಿಣ ಆಸ್ಟ್ರೇಲಿಯಾದಲ್ಲೂ ಇದೇ ರೀತಿಯ ಘಟನೆ ಮರುಕಳಿಸಿದೆ.

ನವೆಂಬರ್ 10 ರಂದು ಗುರುವಾರ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ಗಾಗಿ ಭಾರತ ತಂಡ ಅಡಿಲೇಡ್‌ನಲ್ಲಿದೆ. ನಾಕೌಟ್ ಪಂದ್ಯದ ಮೊದಲು, ಕೋಚ್ ರಾಹುಲ್ ದ್ರಾವಿಡ್, ಕೊಹ್ಲಿ, ರಾಹುಲ್, ಸೂರ್ಯಕುಮಾರ್ ಯಾದವ್ ಮತ್ತು ಯುಜ್ವೇಂದ್ರ ಚಹಾಲ್​ರಂತಹ ದಿಗ್ಗಜರನ್ನು ಒಳಗೊಂಡ ಇಡೀ ಭಾರತ ತಂಡ ಅಡಿಲೇಡ್ ಬಳಿಯ ದಕ್ಷಿಣ ಆಸ್ಟ್ರೇಲಿಯಾದ ಟೊರೆನ್ಸ್‌ವಿಲ್ಲೆಯಲ್ಲಿರುವ ‘ಬ್ರಿಟಿಷ್ ರಾಜ್’ ರೆಸ್ಟೋರೆಂಟ್‌ಗೆ ಊಟಕ್ಕೆ ತೆರಳಿದೆ.

‘ಕೊಹ್ಲಿ… ಕೊಹ್ಲಿ’

ಈ ವೇಳೆ ಆಟಗಾರರು ಮತ್ತು ಮುಖ್ಯ ತರಬೇತುದಾರರು ರೆಸ್ಟೋರೆಂಟ್​ನಿಂದ ಊಟ ಮುಗಿಸಿ ಹೊರಬರುತ್ತಿದ್ದಂತೆ, ಅವರನ್ನು ನೋಡಲು ಅಭಿಮಾನಿಗಳ ಸಾಗರವೇ ರೆಸ್ಟೋರೆಂಟ್ ಮುಂದಿದೆ ನೆರೆದಿದೆ. ಅಭಿಮಾನಿಗಳು ದ್ರಾವಿಡ್, ರಾಹುಲ್ ಮತ್ತು ಚಹಾಲ್ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದಿದ್ದಾರೆ. ಈ ವೇಳೆ ಸೆಕ್ಯೂರಿಟಿ ಗಾರ್ಡ್‌ಗಳೊಂದಿಗೆ ರೆಸ್ಟೋರೆಂಟ್​ನಿಂದ ವಿರಾಟ್ ಕೊಹ್ಲಿ ಹೊರಗೆ ಬಂದ ಕೂಡಲೇ, ಅಭಿಮಾನಿಗಳು ಅವರ ಹಿಂದೆ ಮುಗಿಬಿದ್ದಿದ್ದಾರೆ. ಆದರೆ ಕೊಹ್ಲಿಯನ್ನು ಸೆಕ್ಯೂರಿಟಿಗಾರ್ಡ್​ಗಳು ಸುತ್ತುವರೆದುದರಿಂದ ಅಭಿಮಾನಿಗಳಿಗೆ ಕೊಹ್ಲಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ವಿರಾಟ್​ರನ್ನು ಕಂಡು ಪುಳಕಿತರಾದ ಅಭಿಮಾನಿಗಳು ‘ಕೊಹ್ಲಿ… ಕೊಹ್ಲಿ’ ಎಂದು ಕೂಗುತ್ತ ಅವರ ಹಿಂದೆ ಓಡಿದ್ದಾರೆ. ಈಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

ಇದನ್ನೂ ಓದಿ: PAK Vs NZ: ಇಂದು ಪಾಕಿಸ್ತಾನದಲ್ಲಿ ರಜೆ ಘೋಷಣೆ; ಪಾಕ್- ಕಿವೀಸ್ ಸೆಮಿಫೈನಲ್‌ ಪಂದ್ಯಕ್ಕೆ ಮತ್ತಷ್ಟು ರಂಗು..!

6 ವರ್ಷಗಳ ನಂತರ ಮೆನ್ ಇನ್ ಬ್ಲೂ ತಂಡ ಟಿ20 ವಿಶ್ವಕಪ್‌ನ ಸೆಮಿಫೈನಲ್ ಆಡುತ್ತಿರುವುದರಿಂದ ಇಡೀ ಅಡಿಲೇಡ್ ಓವಲ್ ಭಾರತೀಯ ಅಭಿಮಾನಿಗಳಿಂದ ತುಂಬಿ ತುಳುಕುತ್ತಿದೆ.

2022 ರ ಟಿ20 ವಿಶ್ವಕಪ್‌ನಲ್ಲಿ ಕೊಹ್ಲಿಯ ಸಾಧನೆ

ವಿರಾಟ್ ಕೊಹ್ಲಿ ಪ್ರಸ್ತುತ ಟಿ20 ವಿಶ್ವಕಪ್ 2022 ರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಕೊಹ್ಲಿ ಅವರ ಬ್ಯಾಟ್ 5 ಪಂದ್ಯಗಳಲ್ಲಿ 246 ರನ್ ಗಳಿಸಿದೆ. ಅವರ ಬ್ಯಾಟಿಂಗ್ ಸರಾಸರಿ 123 ಮತ್ತು ಸ್ಟ್ರೈಕ್ ರೇಟ್ ಕೂಡ 140 ರ ಸಮೀಪದಲ್ಲಿದೆ. ವಿರಾಟ್ ಕೊಹ್ಲಿ ಅವರ ಬ್ಯಾಟ್ 3 ಅರ್ಧ ಶತಕ ಬಾರಿಸಿ ಮಿಂಚಿದೆ. ಅದ್ಭುತ ಸಂಗತಿಯೆಂದರೆ ಅಡಿಲೇಡ್‌ನಲ್ಲಿ ಈ ಆಟಗಾರನ ಬ್ಯಾಟ್ ಹೆಚ್ಚು ರನ್ ಮಾಡಿದೆ.

ಅಡಿಲೇಡ್​ನಲ್ಲಿ ವಿರಾಟ್ ದಾಖಲೆ

ಅಡಿಲೇಡ್‌ನಲ್ಲಿ ವಿರಾಟ್ ಕೊಹ್ಲಿ ಎಲ್ಲಾ ಮೂರು ಸ್ವರೂಪಗಳಲ್ಲಿ ರನ್ ಗಳಿಸಿದ್ದಾರೆ. ವಿರಾಟ್ ಟೆಸ್ಟ್‌ನಲ್ಲಿ ಅಡಿಲೇಡ್ ಮೈದಾನದಲ್ಲಿ 63 ಕ್ಕಿಂತ ಹೆಚ್ಚು ಸರಾಸರಿ ಹೊಂದಿದ್ದಾರೆ ಮತ್ತು 3 ಶತಕ ಮತ್ತು ಅರ್ಧ ಶತಕದ ಸಹಾಯದಿಂದ 509 ರನ್ ಗಳಿಸಿದ್ದಾರೆ. ಅಡಿಲೇಡ್‌ನಲ್ಲಿ, ವಿರಾಟ್ 4 ಏಕದಿನ ಪಂದ್ಯಗಳಲ್ಲಿ 61 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 244 ರನ್ ಗಳಿಸಿದ್ದಾರೆ. ಇದರಲ್ಲಿ 2 ಶತಕಗಳು ಸೇರಿವೆ. ಟಿ20ಯಲ್ಲೂ ಅಡಿಲೇಡ್‌ನಲ್ಲಿ ಆಡಿರುವ 2 ಪಂದ್ಯಗಳಲ್ಲಿ ವಿರಾಟ್ 2 ಅರ್ಧಶತಕ ಬಾರಿಸಿದ್ದಾರೆ. ಈ ಮೈದಾನದಲ್ಲಿ ಅವರು 154 ಟಿ20 ರನ್ ಗಳಿಸಿದ್ದಾರೆ. ಅಡಿಲೇಡ್‌ನಲ್ಲಿ ವಿರಾಟ್ ತಮ್ಮ ಬ್ಯಾಟ್‌ನಿಂದ ಒಟ್ಟಾರೆ 5 ಶತಕ ಮತ್ತು 2 ಅರ್ಧ ಶತಕಗಳನ್ನು ಗಳಿಸಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:20 pm, Wed, 9 November 22

ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ