AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಶತಕ, ಅರ್ಧಶತಕ ಬೇಡ; ಕೊಹ್ಲಿ ಇಷ್ಟು ರನ್ ಬಾರಿಸಿದರೆ ಸಾಕು ಗೆಲುವು ಖಚಿತ

Virat Kohli's 43-Run Magic: ವಿರಾಟ್ ಕೊಹ್ಲಿ ಅದ್ಭುತ ಫಾರ್ಮ್‌ನಲ್ಲಿರುವ ಕಾರಣ ಐಪಿಎಲ್ 2026ರಲ್ಲಿ ಆರ್​ಸಿಬಿ ತಂಡ ಫೈನಲ್ ಪ್ರವೇಶಿಸಿದೆ. ಕ್ವಾಲಿಫೈಯರ್ 1 ರಲ್ಲಿ ಕೊಹ್ಲಿ ಗಳಿಸಿದ 43 ರನ್‌ಗಳು ತಂಡದ ಗೆಲುವಿಗೆ ಪ್ರಮುಖ ಕಾರಣ. ಕೊಹ್ಲಿ 43 ರನ್ ಗಳಿಸಿದಾಗಲೆಲ್ಲಾ ತಂಡ ಗೆಲ್ಲುವ ಐತಿಹಾಸಿಕ ದಾಖಲೆ ಇದೆ. ಇದು ಮೂರನೇ ಬಾರಿ ಸಂಭವಿಸಿದ್ದು, ಹಿಂದೆಯೂ ಐಪಿಎಲ್ ಫೈನಲ್ ಮತ್ತು ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಈ ಅದೃಷ್ಟದ ಸಂಖ್ಯೆ ಗೆಲುವು ತಂದಿದೆ.

IPL 2026: ಶತಕ, ಅರ್ಧಶತಕ ಬೇಡ; ಕೊಹ್ಲಿ ಇಷ್ಟು ರನ್ ಬಾರಿಸಿದರೆ ಸಾಕು ಗೆಲುವು ಖಚಿತ
Virat KohliImage Credit source: PTI
ಪೃಥ್ವಿಶಂಕರ
|

Updated on:May 27, 2026 | 4:44 PM

Share

ವಿರಾಟ್ ಕೊಹ್ಲಿ (Virat Kohli) ರನ್ ಗಳಿಸಿದಾಗಲೆಲ್ಲಾ ತಂಡಕ್ಕೆ ಗೆಲುವು ಖಚಿತ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಅದು ಟೀಂ ಇಂಡಿಯಾ ಆಗಿರಲಿ ಅಥವಾ ಐಪಿಎಲ್ (IPL) ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಗಿರಲಿ, ಕೊಹ್ಲಿ ರನ್ ಗಳಿಸಿದಾಗಲೆಲ್ಲ ತಂಡಕ್ಕೆ ಗೆಲುವು ಕಟ್ಟಿಟ್ಟ ಬುತ್ತಿ. ಪ್ರಸ್ತುತ ನಡೆಯುತ್ತಿರುವ ಐಪಿಎಲ್​ನಲ್ಲಿ ಅದ್ಭುತ ಫಾರ್ಮ್​ನಲ್ಲಿರುವ ವಿರಾಟ್ ಕೊಹ್ಲಿ 600 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಕೊಹ್ಲಿಯ ಈ ಆಟದಿಂದಾಗಿ ತಂಡ ಕೂಡ ಕ್ವಾಲಿಫೈಯರ್ 1 ಗೆದ್ದು ಫೈನಲ್​ಗೇರಿದೆ. ಕ್ವಾಲಿಫೈಯರ್ 1 ರಲ್ಲಿಯೂ ಕೊಹ್ಲಿ 43 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಕಾಕತಾಳೀಯವೆಂಬಂತೆ ಕೊಹ್ಲಿ ತಮ್ಮ ವೃತ್ತಿಜೀವನದಲ್ಲಿ ಮೂರನೇ ಬಾರಿ ಪ್ಲೇಆಫ್ ಅಥವಾ ನಾಕೌಟ್ ಪಂದ್ಯದಲ್ಲಿ 43 ರನ್​ಗಳ ಇನ್ನಿಂಗ್ಸ್ ಆಡಿದ್ದು ಈ ಮೂರು ಪಂದ್ಯಗಳಲ್ಲೂ ತಂಡ ಗೆಲುವು ಸಾಧಿಸಿದೆ.

ಐಪಿಎಲ್ 2026 ರ ಮೊದಲ ಕ್ವಾಲಿಫೈಯರ್ ಪಂದ್ಯ ಮೇ 26 ರ ಮಂಗಳವಾರ ಧರ್ಮಶಾಲಾದಲ್ಲಿ ನಡೆಯಿತು. ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ 254 ರನ್ ಕಲೆಹಾಕಿತು. ಈ ಮೂಲಕ ಐಪಿಎಲ್ ಪ್ಲೇಆಫ್ ಇತಿಹಾಸದಲ್ಲಿ ಅತ್ಯಧಿಕ ಮೊತ್ತ ದಾಖಲಿಸಿದ ದಾಖಲೆಯನ್ನು ಆರ್​ಸಿಬಿ ಬರೆಯಿತು. ತಂಡ ಇಷ್ಟು ಬೃಹತ್ ಮೊತ್ತ ಕಲೆಹಾಕುವಲ್ಲಿ ನಾಯಕ ರಜತ್ ಪಾಟಿದಾರ್ ಆಡಿದ ಅಜೇಯ 93 ರನ್​ಗಳ ಇನ್ನಿಂಗ್ಸ್ ಪ್ರಮುಖ ಪಾತ್ರವಹಿಸಿತು. ರಜತ್ ಜೊತೆಗೆ ವಿರಾಟ್ ಕೊಹ್ಲಿ ಕೂಡ ಆರಂಭಿಕನಾಗಿ ಕಣಕ್ಕಿಳಿದು 43 ರನ್​ಗಳ ಇನ್ನಿಂಗ್ಸ್ ಆಡಿ ತಂಡದ ಗೆಲುವನ್ನು ಆರಂಭದಲ್ಲೇ ಖಚಿತಪಡಿಸಿದರು.

43 ರನ್‌ ಬಾರಿಸಿದರೆ ಗೆಲುವು ಖಚಿತ

ಮೇಲೆ ಹೇಳಿದಂತೆ ವಿರಾಟ್ ಕೊಹ್ಲಿ 25 ಎಸೆತಗಳಲ್ಲಿ 43 ರನ್ ಗಳಿಸುವ ಮೂಲಕ ತಂಡಕ್ಕೆ ಸ್ಫೋಟಕ ಆರಂಭ ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದರು. ಆದಾಗ್ಯೂ ಕೊಹ್ಲಿಗೆ ಅರ್ಧಶತಕ ಬಾರಿಸಲು ಸಾಧ್ಯವಾಗಲಿಲ್ಲ. ಆದರೆ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಡುವಲ್ಲಿ ಮತ್ತು ತಂಡ ದೊಡ್ಡ ಮೊತ್ತವನ್ನು ತಲುಪುವಲ್ಲಿ ಕೊಹ್ಲಿ ಆಡಿದ ಈ ಇನ್ನಿಂಗ್ಸ್ ಕೂಡ ಪರಿಣಾಮಕಾರಿಯಾಯಿತು. ಇದರ ಜೊತೆಗೆ ಕೊಹ್ಲಿ 43 ರನ್​ಗಳ ಇನ್ನಿಂಗ್ಸ್ ಆಡಿದಾಗಲೇ ಆರ್​ಸಿಬಿಗೆ ಗೆಲುವು ಖಚಿತವಾಗಿತ್ತು. ಇದಕ್ಕೆ ಕಾರಣವೂ ಇದ್ದು, ಈ ಹಿಂದೆ ಕೊಹ್ಲಿ 43 ರನ್​ಗಳ ಇನ್ನಿಂಗ್ಸ್ ಆಡಿದಾಗಲೇ ತಂಡ ಗೆಲುವು ಸಾಧಿಸಿದೆ.

RCB vs GT: ಸತತ 4ನೇ ಆವೃತ್ತಿಯಲ್ಲಿ 600 ರನ್; ಇತಿಹಾಸ ನಿರ್ಮಿಸಿದ ಕಿಂಗ್ ಕೊಹ್ಲಿ

3ನೇ ಬಾರಿಗೆ ಗೆದ್ದ ತಂಡ

ಕೊಹ್ಲಿ ಶತಕ ಅಥವಾ ಅರ್ಧಶತಕ ಗಳಿಸದೆ 43 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ಮೂರನೇ ಬಾರಿಗೆ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಇದಕ್ಕೂ ಮೊದಲು ಹಿಂದಿನ ಆವೃತ್ತಿಯ ಐಪಿಎಲ್ ಫೈನಲ್‌ನಲ್ಲಿಯೂ ಕೊಹ್ಲಿ ಇದೇ ರೀತಿಯ ಇನ್ನಿಂಗ್ಸ್ ಆಡಿದ್ದರು. ಪಂಜಾಬ್ ಕಿಂಗ್ಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಕೊಹ್ಲಿ, 35 ಎಸೆತಗಳಲ್ಲಿ 43 ರನ್ ಬಾರಿಸಿದ್ದರು. ಆ ಪಂದ್ಯವನ್ನು ಗೆಲ್ಲುವ ಮೂಲಕ ಆರ್​ಸಿಬಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿಯನ್ನು ಎತ್ತಿಹಿಡಿದಿತ್ತು. ಅದಕ್ಕೂ ಮೊದಲು, 2013 ರ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿಯೂ ಇಂಗ್ಲೆಂಡ್ ವಿರುದ್ಧ ಕೊಹ್ಲಿ 43 ರನ್ ಗಳಿಸಿದ್ದರು. ಆ ಪಂದ್ಯದಲ್ಲೂ ಭಾರತ ಗೆದ್ದು ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿಹಿಡಿದಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:43 pm, Wed, 27 May 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ
ಮಗಳಂತೆ ಸಾಕಿದ ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ!
ಮಗಳಂತೆ ಸಾಕಿದ ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ!
ಪಟ್ಟದ ಪಗಡೆಯಾಟ ಕ್ಲೈಮ್ಯಾಕ್ಸ್​​ಗೆ ಹೊಸ ಟ್ವಿಸ್ಟ್​​
ಪಟ್ಟದ ಪಗಡೆಯಾಟ ಕ್ಲೈಮ್ಯಾಕ್ಸ್​​ಗೆ ಹೊಸ ಟ್ವಿಸ್ಟ್​​