AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಶತಕ, ಅರ್ಧಶತಕ ಬೇಡ; ಕೊಹ್ಲಿ ಇಷ್ಟು ರನ್ ಬಾರಿಸಿದರೆ ಸಾಕು ಗೆಲುವು ಖಚಿತ

Virat Kohli's 43-Run Magic: ವಿರಾಟ್ ಕೊಹ್ಲಿ ಅದ್ಭುತ ಫಾರ್ಮ್‌ನಲ್ಲಿರುವ ಕಾರಣ ಐಪಿಎಲ್ 2026ರಲ್ಲಿ ಆರ್​ಸಿಬಿ ತಂಡ ಫೈನಲ್ ಪ್ರವೇಶಿಸಿದೆ. ಕ್ವಾಲಿಫೈಯರ್ 1 ರಲ್ಲಿ ಕೊಹ್ಲಿ ಗಳಿಸಿದ 43 ರನ್‌ಗಳು ತಂಡದ ಗೆಲುವಿಗೆ ಪ್ರಮುಖ ಕಾರಣ. ಕೊಹ್ಲಿ 43 ರನ್ ಗಳಿಸಿದಾಗಲೆಲ್ಲಾ ತಂಡ ಗೆಲ್ಲುವ ಐತಿಹಾಸಿಕ ದಾಖಲೆ ಇದೆ. ಇದು ಮೂರನೇ ಬಾರಿ ಸಂಭವಿಸಿದ್ದು, ಹಿಂದೆಯೂ ಐಪಿಎಲ್ ಫೈನಲ್ ಮತ್ತು ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಈ ಅದೃಷ್ಟದ ಸಂಖ್ಯೆ ಗೆಲುವು ತಂದಿದೆ.

IPL 2026: ಶತಕ, ಅರ್ಧಶತಕ ಬೇಡ; ಕೊಹ್ಲಿ ಇಷ್ಟು ರನ್ ಬಾರಿಸಿದರೆ ಸಾಕು ಗೆಲುವು ಖಚಿತ
Virat KohliImage Credit source: PTI
ಪೃಥ್ವಿಶಂಕರ
|

Updated on:May 27, 2026 | 4:44 PM

Share

ವಿರಾಟ್ ಕೊಹ್ಲಿ (Virat Kohli) ರನ್ ಗಳಿಸಿದಾಗಲೆಲ್ಲಾ ತಂಡಕ್ಕೆ ಗೆಲುವು ಖಚಿತ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಅದು ಟೀಂ ಇಂಡಿಯಾ ಆಗಿರಲಿ ಅಥವಾ ಐಪಿಎಲ್ (IPL) ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಗಿರಲಿ, ಕೊಹ್ಲಿ ರನ್ ಗಳಿಸಿದಾಗಲೆಲ್ಲ ತಂಡಕ್ಕೆ ಗೆಲುವು ಕಟ್ಟಿಟ್ಟ ಬುತ್ತಿ. ಪ್ರಸ್ತುತ ನಡೆಯುತ್ತಿರುವ ಐಪಿಎಲ್​ನಲ್ಲಿ ಅದ್ಭುತ ಫಾರ್ಮ್​ನಲ್ಲಿರುವ ವಿರಾಟ್ ಕೊಹ್ಲಿ 600 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಕೊಹ್ಲಿಯ ಈ ಆಟದಿಂದಾಗಿ ತಂಡ ಕೂಡ ಕ್ವಾಲಿಫೈಯರ್ 1 ಗೆದ್ದು ಫೈನಲ್​ಗೇರಿದೆ. ಕ್ವಾಲಿಫೈಯರ್ 1 ರಲ್ಲಿಯೂ ಕೊಹ್ಲಿ 43 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಕಾಕತಾಳೀಯವೆಂಬಂತೆ ಕೊಹ್ಲಿ ತಮ್ಮ ವೃತ್ತಿಜೀವನದಲ್ಲಿ ಮೂರನೇ ಬಾರಿ ಪ್ಲೇಆಫ್ ಅಥವಾ ನಾಕೌಟ್ ಪಂದ್ಯದಲ್ಲಿ 43 ರನ್​ಗಳ ಇನ್ನಿಂಗ್ಸ್ ಆಡಿದ್ದು ಈ ಮೂರು ಪಂದ್ಯಗಳಲ್ಲೂ ತಂಡ ಗೆಲುವು ಸಾಧಿಸಿದೆ.

ಐಪಿಎಲ್ 2026 ರ ಮೊದಲ ಕ್ವಾಲಿಫೈಯರ್ ಪಂದ್ಯ ಮೇ 26 ರ ಮಂಗಳವಾರ ಧರ್ಮಶಾಲಾದಲ್ಲಿ ನಡೆಯಿತು. ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ 254 ರನ್ ಕಲೆಹಾಕಿತು. ಈ ಮೂಲಕ ಐಪಿಎಲ್ ಪ್ಲೇಆಫ್ ಇತಿಹಾಸದಲ್ಲಿ ಅತ್ಯಧಿಕ ಮೊತ್ತ ದಾಖಲಿಸಿದ ದಾಖಲೆಯನ್ನು ಆರ್​ಸಿಬಿ ಬರೆಯಿತು. ತಂಡ ಇಷ್ಟು ಬೃಹತ್ ಮೊತ್ತ ಕಲೆಹಾಕುವಲ್ಲಿ ನಾಯಕ ರಜತ್ ಪಾಟಿದಾರ್ ಆಡಿದ ಅಜೇಯ 93 ರನ್​ಗಳ ಇನ್ನಿಂಗ್ಸ್ ಪ್ರಮುಖ ಪಾತ್ರವಹಿಸಿತು. ರಜತ್ ಜೊತೆಗೆ ವಿರಾಟ್ ಕೊಹ್ಲಿ ಕೂಡ ಆರಂಭಿಕನಾಗಿ ಕಣಕ್ಕಿಳಿದು 43 ರನ್​ಗಳ ಇನ್ನಿಂಗ್ಸ್ ಆಡಿ ತಂಡದ ಗೆಲುವನ್ನು ಆರಂಭದಲ್ಲೇ ಖಚಿತಪಡಿಸಿದರು.

43 ರನ್‌ ಬಾರಿಸಿದರೆ ಗೆಲುವು ಖಚಿತ

ಮೇಲೆ ಹೇಳಿದಂತೆ ವಿರಾಟ್ ಕೊಹ್ಲಿ 25 ಎಸೆತಗಳಲ್ಲಿ 43 ರನ್ ಗಳಿಸುವ ಮೂಲಕ ತಂಡಕ್ಕೆ ಸ್ಫೋಟಕ ಆರಂಭ ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದರು. ಆದಾಗ್ಯೂ ಕೊಹ್ಲಿಗೆ ಅರ್ಧಶತಕ ಬಾರಿಸಲು ಸಾಧ್ಯವಾಗಲಿಲ್ಲ. ಆದರೆ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಡುವಲ್ಲಿ ಮತ್ತು ತಂಡ ದೊಡ್ಡ ಮೊತ್ತವನ್ನು ತಲುಪುವಲ್ಲಿ ಕೊಹ್ಲಿ ಆಡಿದ ಈ ಇನ್ನಿಂಗ್ಸ್ ಕೂಡ ಪರಿಣಾಮಕಾರಿಯಾಯಿತು. ಇದರ ಜೊತೆಗೆ ಕೊಹ್ಲಿ 43 ರನ್​ಗಳ ಇನ್ನಿಂಗ್ಸ್ ಆಡಿದಾಗಲೇ ಆರ್​ಸಿಬಿಗೆ ಗೆಲುವು ಖಚಿತವಾಗಿತ್ತು. ಇದಕ್ಕೆ ಕಾರಣವೂ ಇದ್ದು, ಈ ಹಿಂದೆ ಕೊಹ್ಲಿ 43 ರನ್​ಗಳ ಇನ್ನಿಂಗ್ಸ್ ಆಡಿದಾಗಲೇ ತಂಡ ಗೆಲುವು ಸಾಧಿಸಿದೆ.

RCB vs GT: ಸತತ 4ನೇ ಆವೃತ್ತಿಯಲ್ಲಿ 600 ರನ್; ಇತಿಹಾಸ ನಿರ್ಮಿಸಿದ ಕಿಂಗ್ ಕೊಹ್ಲಿ

3ನೇ ಬಾರಿಗೆ ಗೆದ್ದ ತಂಡ

ಕೊಹ್ಲಿ ಶತಕ ಅಥವಾ ಅರ್ಧಶತಕ ಗಳಿಸದೆ 43 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ಮೂರನೇ ಬಾರಿಗೆ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಇದಕ್ಕೂ ಮೊದಲು ಹಿಂದಿನ ಆವೃತ್ತಿಯ ಐಪಿಎಲ್ ಫೈನಲ್‌ನಲ್ಲಿಯೂ ಕೊಹ್ಲಿ ಇದೇ ರೀತಿಯ ಇನ್ನಿಂಗ್ಸ್ ಆಡಿದ್ದರು. ಪಂಜಾಬ್ ಕಿಂಗ್ಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಕೊಹ್ಲಿ, 35 ಎಸೆತಗಳಲ್ಲಿ 43 ರನ್ ಬಾರಿಸಿದ್ದರು. ಆ ಪಂದ್ಯವನ್ನು ಗೆಲ್ಲುವ ಮೂಲಕ ಆರ್​ಸಿಬಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿಯನ್ನು ಎತ್ತಿಹಿಡಿದಿತ್ತು. ಅದಕ್ಕೂ ಮೊದಲು, 2013 ರ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿಯೂ ಇಂಗ್ಲೆಂಡ್ ವಿರುದ್ಧ ಕೊಹ್ಲಿ 43 ರನ್ ಗಳಿಸಿದ್ದರು. ಆ ಪಂದ್ಯದಲ್ಲೂ ಭಾರತ ಗೆದ್ದು ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿಹಿಡಿದಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:43 pm, Wed, 27 May 26

Follow Us
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ