AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test Ranking: ಟೆಸ್ಟ್ ಸರಣಿ ಸೋತ ನಂತರವೂ ಶ್ರೇಯಾಂಕದಲ್ಲಿ ಲಾಭ ಪಡೆದ ಕೊಹ್ಲಿ, ಬುಮ್ರಾ..!

ICC Test Ranking: ಐಸಿಸಿ ಬುಧವಾರ ಬಿಡುಗಡೆ ಮಾಡಿರುವ ಇತ್ತೀಚಿನ ಟೆಸ್ಟ್ ಶ್ರೇಯಾಂಕದಲ್ಲಿ ಭಾರತದ ದಿಗ್ಗಜ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಹಾಗೂ ಅತ್ಯುತ್ತಮ ಬೌಲರ್ ಜಸ್ಪ್ರೀತ್ ಬುಮ್ರಾ ಶ್ರೇಯಾಂಕದಲ್ಲಿ ಲಾಭ ಗಳಿಸಿದ್ದಾರೆ.

ICC Test Ranking: ಟೆಸ್ಟ್ ಸರಣಿ ಸೋತ ನಂತರವೂ ಶ್ರೇಯಾಂಕದಲ್ಲಿ ಲಾಭ ಪಡೆದ ಕೊಹ್ಲಿ, ಬುಮ್ರಾ..!
ವಿರಾಟ್ ಕೊಹ್ಲಿ
TV9 Web
| Updated By: ಪೃಥ್ವಿಶಂಕರ|

Updated on:Jan 19, 2022 | 3:40 PM

Share

ಐಸಿಸಿ ಬುಧವಾರ ಬಿಡುಗಡೆ ಮಾಡಿರುವ ಇತ್ತೀಚಿನ ಟೆಸ್ಟ್ ಶ್ರೇಯಾಂಕದಲ್ಲಿ ಭಾರತದ ದಿಗ್ಗಜ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಲಾಭ ಗಳಿಸಿದ್ದಾರೆ. ಅದೇ ಸಮಯದಲ್ಲಿ, ಭಾರತದ ಅತ್ಯುತ್ತಮ ಬೌಲರ್ ಜಸ್ಪ್ರೀತ್ ಬುಮ್ರಾ ಕೂಡ ಶ್ರೇಯಾಂಕದಲ್ಲಿ ಲಾಭ ಗಳಿಸಿದ್ದಾರೆ. ಆದರೆ, ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಸೋಲನ್ನು ಎದುರಿಸಬೇಕಾಯಿತು. ಈ ಸರಣಿಯನ್ನು ದಕ್ಷಿಣ ಆಫ್ರಿಕಾ 2-1 ಅಂತರದಿಂದ ವಶಪಡಿಸಿಕೊಂಡಿದೆ. ಈ ಸರಣಿಯಲ್ಲಿ ಭಾರತ ಸೋಲುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ, ಸೆಂಚುರಿಯನ್‌ನಲ್ಲಿ ಆಡಿದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ ಗೆದ್ದುಕೊಂಡಿತು ಮತ್ತು ಆದ್ದರಿಂದ ಎಲ್ಲರೂ ಗೆಲ್ಲುತ್ತಾರೆ ಎಂದು ನಿರೀಕ್ಷಿಸಿದ್ದರು, ಆದರೆ ಭಾರತ ಗೆಲ್ಲಲಿಲ್ಲ. ಈ ಸರಣಿಯ ಬಳಿಕ ವಿರಾಟ್ ಕೊಹ್ಲಿ ಟೆಸ್ಟ್ ತಂಡದ ನಾಯಕತ್ವವನ್ನೂ ತೊರೆದಿದ್ದರು.

ಸರಣಿಯ ಮೂರನೇ ಮತ್ತು ನಿರ್ಣಾಯಕ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಅದ್ಭುತ ಇನ್ನಿಂಗ್ಸ್ ಆಡಿದರು. ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಕೊಹ್ಲಿ 79 ರನ್ ಗಳಿಸಿದ್ದರು. ಇದರಿಂದ ಕೊಹ್ಲಿಗೆ ಲಾಭವಾಗಿದ್ದು, ಎರಡು ಸ್ಥಾನ ಮೇಲೇರಿ ಏಳನೇ ಸ್ಥಾನಕ್ಕೆ ತಲುಪಿದ್ದಾರೆ. ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ವಿರಾಟ್ 767 ಅಂಕಗಳನ್ನು ಹೊಂದಿದ್ದಾರೆ. ಈ ಪಟ್ಟಿಯಲ್ಲಿ ಅಗ್ರ-10ರಲ್ಲಿ ಭಾರತ ಇಬ್ಬರು ಬ್ಯಾಟ್ಸ್‌ಮನ್‌ಗಳು ಇದ್ದಾರೆ. ರೋಹಿತ್ ಶರ್ಮಾ ಐದನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಸದ್ಯ ರೋಹಿತ್ ಗಾಯಗೊಂಡಿದ್ದು, ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿಲ್ಲ.

ಬುಮ್ರಾಗೆ ಮೂರು ಸ್ಥಾನಗಳ ಲಾಭ ಮತ್ತೊಂದೆಡೆ, ಬೌಲರ್‌ಗಳ ಶ್ರೇಯಾಂಕದಲ್ಲಿ, ಭಾರತದ ಜಸ್ಪ್ರೀತ್ ಬುಮ್ರಾ ಮೂರು ಸ್ಥಾನಗಳನ್ನು ಗಳಿಸಿದ್ದಾರೆ. ಬುಮ್ರಾ ಮೂರು ಟೆಸ್ಟ್ ಪಂದ್ಯಗಳಲ್ಲಿ 12 ವಿಕೆಟ್ ಕಬಳಿಸಿದ್ದಾರೆ. ಬುಮ್ರಾ ಈ ಹಿಂದೆ ಟಾಪ್-10ರಲ್ಲಿ ಇರಲಿಲ್ಲ ಆದರೆ ಈಗ 10ನೇ ಸ್ಥಾನಕ್ಕೆ ಬಂದಿದ್ದಾರೆ. ಅವರು 763 ರೇಟಿಂಗ್ ಅಂಕಗಳನ್ನು ಹೊಂದಿದ್ದಾರೆ. ಬೌಲರ್‌ಗಳ ಪಟ್ಟಿಯಲ್ಲೂ ಭಾರತ ಟಾಪ್-10ರಲ್ಲಿ ಇಬ್ಬರು ಬೌಲರ್‌ಗಳನ್ನು ಹೊಂದಿದೆ. ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಎರಡನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ ಕೂಡ ಲಾಭ ಗಳಿಸಿದ್ದಾರೆ. ಎರಡು ಸ್ಥಾನ ಮೇಲೇರಿ ಮೂರನೇ ಸ್ಥಾನಕ್ಕೆ ತಲುಪಿದ್ದಾರೆ. ಆಸ್ಟ್ರೇಲಿಯದ ಟೆಸ್ಟ್ ನಾಯಕ ಪ್ಯಾಟ್ ಕಮಿನ್ಸ್ ನಂಬರ್-1 ಸ್ಥಾನದಲ್ಲಿದ್ದಾರೆ.

ಕೈಲ್ ಜೇಮ್ಸನ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅವರು ಒಂದು ಸ್ಥಾನ ಕಳೆದುಕೊಂಡಿದ್ದಾರೆ. ಶಾಹೀನ್ ಶಾ ಆಫ್ರಿದಿ ಐದನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್‌ನ ಟಿಮ್ ಸೌಥಿ ಒಂದು ಸ್ಥಾನ ಮೇಲೇರಿ ಆರನೇ ಸ್ಥಾನಕ್ಕೆ ತಲುಪಿದ್ದಾರೆ. ಅವರು ಆರನೇ ಸ್ಥಾನದಿಂದ ಇಂಗ್ಲೆಂಡ್‌ನ ಜೇಮ್ಸ್ ಆಂಡರ್ಸನ್ ಅವರನ್ನು ಹಿಂದಿಕ್ಕಿದ್ದಾರೆ. ಜೋಶ್ ಹ್ಯಾಜಲ್‌ವುಡ್ ಮತ್ತು ನೀಲ್ ವೆಗ್ನರ್ ಎಂಟು ಮತ್ತು ಒಂಬತ್ತನೇ ಸ್ಥಾನದಲ್ಲಿದ್ದಾರೆ.

ಟ್ರಾವಿಸ್ ಹೆಡ್‌ಗೆ ದೊಡ್ಡ ಅನುಕೂಲ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ದೊಡ್ಡ ಲಾಭವನ್ನು ಗಳಿಸಿದ್ದಾರೆ. ಏಳು ಸ್ಥಾನ ಮೇಲೇರಿ ಆರನೇ ಸ್ಥಾನಕ್ಕೆ ತಲುಪಿದ್ದಾರೆ. ಹೋಬರ್ಟ್‌ನಲ್ಲಿ ನಡೆದ ಆ್ಯಶಸ್ ಸರಣಿಯ ಕೊನೆಯ ಪಂದ್ಯದಲ್ಲಿ ಹೆಡ್ ಅದ್ಭುತ ಶತಕ ಬಾರಿಸಿದ್ದು ಅದರ ಲಾಭ ಪಡೆದಿದ್ದಾರೆ. ಅವರ ಸಹವರ್ತಿ ಸ್ಟೀವ್ ಸ್ಮಿತ್ ಒಂದು ಸ್ಥಾನ ಕುಸಿದು ನಾಲ್ಕನೇ ಸ್ಥಾನಕ್ಕೆ ತಲುಪಿದ್ದಾರೆ. ಅವರ ಬದಲಿಗೆ ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಮೂರನೇ ಸ್ಥಾನದಲ್ಲಿದ್ದಾರೆ. ಶ್ರೀಲಂಕಾದ ದಿಮುತ್ ಕರುಣರತ್ನೆ ಎರಡು ಸ್ಥಾನ ಕುಸಿದು ಎಂಟನೇ ಸ್ಥಾನಕ್ಕೆ ತಲುಪಿದ್ದಾರೆ. ಪಾಕ್ ನಾಯಕ ಬಾಬರ್ ಅಜಮ್ ಒಂಬತ್ತನೇ ಸ್ಥಾನಕ್ಕೆ ಕುಸಿದಿದ್ದಾರೆ. ನ್ಯೂಜಿಲೆಂಡ್‌ನ ಟಾಮ್ ಲ್ಯಾಥಮ್ ಒಂದು ಸ್ಥಾನ ಮೇಲೇರಿ 10ನೇ ಸ್ಥಾನಕ್ಕೇರಿದ್ದಾರೆ.

Published On - 3:30 pm, Wed, 19 January 22

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ