AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಜಿ ಪಂದ್ಯಗಳಿಗೆ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಅಲಭ್ಯ

Virat Kohli and KL Rahul: ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಈ ಬಾರಿಯ ರಣಜಿ ಟೂರ್ನಿಯಲ್ಲೂ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ. ಪ್ರಮುಖ ಸ್ಪೋರ್ಟ್ಸ್​ ವೆಬ್​ಸೈಟ್ ವರದಿ ಪ್ರಕಾರ, ಈ ಇಬ್ಬರು ಆಟಗಾರರು ಫೆಬ್ರವರಿ 6 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ ಸರಣಿಯ ಮೂಲಕ ಮತ್ತೆ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ರಣಜಿ ಪಂದ್ಯಗಳಿಗೆ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಅಲಭ್ಯ
Virat Kohli - Kl RahulImage Credit source: Gettyimage
ಝಾಹಿರ್ ಯೂಸುಫ್
|

Updated on: Jan 18, 2025 | 12:05 PM

Share

ಜನವರಿ 23 ರಿಂದ ಶುರುವಾಗಲಿರುವ ರಣಜಿ ಟೂರ್ನಿಯ ದ್ವಿತೀಯ ಹಂತದ ಪಂದ್ಯಗಳಿಗೆ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಅಲಭ್ಯರಾಗಲಿದ್ದಾರೆ. ಟೀಮ್ ಇಂಡಿಯಾ ಆಟಗಾರರು ದೇಶೀಯ ಟೂರ್ನಿ ಆಡಬೇಕೆಂಬ ಬಿಸಿಸಿಐನ ಕಟ್ಟಪ್ಪಣೆಯ ಹೊರತಾಗಿಯೂ ಈ ಇಬ್ಬರು ಹೊರಗುಳಿಯಲು ಮುಖ್ಯ ಕಾರಣ ಗಾಯದ ಸಮಸ್ಯೆ.

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ವೇಳೆ ವಿರಾಟ್ ಕೊಹ್ಲಿ ಕುತ್ತಿಗೆ ನೋವಿಗೆ ತುತ್ತಾಗಿದ್ದರು. ಈ ನೋವಿನಿಂದ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಅಲ್ಲದೆ ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಅವರು ರಣಜಿ ಟೂರ್ನಿಯ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.

ಇನ್ನು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ವೇಳೆ ಕೆಎಲ್ ರಾಹುಲ್ ಮೊಣಕೈಗೆ ಗಾಯವಾಗಿತ್ತು. ಈ ಗಾಯವು ಸಂಪೂರ್ಣ ಗುಣವಾಗಿಲ್ಲ. ಹೀಗಾಗಿ ರಣಜಿ ಟೂರ್ನಿಯಿಂದ ಹೊರಗುಳಿಯುವುದಾಗಿ ರಾಹುಲ್ ಬಿಸಿಸಿಐಗೆ ತಿಳಿಸಿದೆ. ಇದೇ ಕಾರಣದಿಂದಾಗಿ ಅವರು ವಿಜಯ ಹಝಾರೆ ಟೂರ್ನಿಯಿಂದಲೂ ಹೊರಗುಳಿದಿದ್ದಾರೆ ಎಂದು ತಿಳಿದು ಬಂದಿದೆ.

ಒಂದು ವೇಳೆ ವಿರಾಟ್ ಕೊಹ್ಲಿ ಸಂಪೂರ್ಣ ಫಿಟ್​ ಆಗಿದ್ದ ಅವರು 12 ವರ್ಷಗಳ ಬಳಿಕ ಮತ್ತೆ ರಣಜಿ ಟೂರ್ನಿಯಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಅಂದರೆ ಕಿಂಗ್ ಕೊಹ್ಲಿ ದೆಹಲಿ ಪರ ಕೊನೆಯ ಬಾರಿ ರಣಜಿ ಪಂದ್ಯವಾಡಿದ್ದು 2012 ರಲ್ಲಿ. ಇದಾದ ಬಳಿಕ ಟೀಮ್ ಇಂಡಿಯಾದ ಖಾಯಂ ಸದಸ್ಯರಾದ ಕೊಹ್ಲಿ ಮತ್ತೆ ದೇಶೀಯ ಟೂರ್ನಿಯತ್ತ ಮುಖ ಮಾಡಿಲ್ಲ ಎಂಬುದೇ ಅಚ್ಚರಿ.

ಇನ್ನು ಕೆಎಲ್ ರಾಹುಲ್ ಕೂಡ ಕರ್ನಾಟಕ ಪರ ರಣಜಿ ಪಂದ್ಯವಾಡಿ 4 ವರ್ಷಗಳೇ ಕಳೆದಿವೆ. ಇತ್ತ ಸ್ಟಾರ್ ಆಟಗಾರರು ದೇಶೀಯ ಟೂರ್ನಿಯಿಂದ ವಿಮುಖವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಎಲ್ಲಾ ಆಟಗಾರರು ರಣಜಿ ಟೂರ್ನಿ ಆಡುವಂತೆ ಸೂಚಿಸಿದೆ.

ಈ ಸೂಚನೆ ಬೆನ್ನಲ್ಲೇ ರಿಷಭ್ ಪಂತ್, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್ ಸೇರಿದಂತೆ ಟೀಮ್ ಇಂಡಿಯಾದ ಕೆಲ ಆಟಗಾರರು ಈ ಬಾರಿಯ ರಣಜಿ ಟೂರ್ನಿಯ ದ್ವಿತೀಯ ಹಂತದ ಪಂದ್ಯಗಳಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಮತ್ತೊಂದೆಡೆ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ರಣಜಿ ಟೂರ್ನಿ ಆಡಲಿದ್ದಾರಾ ಎಂಬುದೇ ಕುತೂಹಲ. ಏಕೆಂದರೆ ಜನವರಿ 23 ರಿಂದ ರಣಜಿ ಟೂರ್ನಿಯ ದ್ವಿತೀಯ ಹಂತದ ಪಂದ್ಯಗಳು ಶುರುವಾಗಲಿದ್ದು, ಈ ವೇಳೆ ರೋಹಿತ್ ಶರ್ಮಾ ಫ್ರೀ ಆಗಿ ಇರಲಿದ್ದಾರೆ.

ಇದನ್ನೂ ಓದಿ: ಸಿಕ್ಸ್​ಗಳ ಸುರಿಮಳೆ… ಟಿ20 ಕ್ರಿಕೆಟ್​ನಲ್ಲಿ ಕೀರನ್ ಪೊಲಾರ್ಡ್ ವಿಶ್ವ ದಾಖಲೆ

ಅಂದರೆ ಭಾರತ ಟಿ20 ತಂಡದಿಂದ ಹೊರಗುಳಿದಿರುವ ಅವರು ಫೆಬ್ರವರಿ 6 ರ ತನಕ ಬಿಡುವಿನಲ್ಲಿದ್ದಾರೆ. ಈ ಬಿಡುವಿನ ವೇಳೆ ರೋಹಿತ್ ಶರ್ಮಾ ಮುಂಬೈ ಪರ ರಣಜಿ ಪಂದ್ಯವಾಡಲಿದ್ದಾರಾ ಎಂಬುದೇ ಈಗ ಕುತೂಹಲ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್