AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG T20I Series: ಟಿ20ಗೆ ರೋಹಿತ್, ಕೊಹ್ಲಿ ಕಮ್​ಬ್ಯಾಕ್; ಅಫ್ಘಾನ್ ಸರಣಿಗೆ ಇಂದು ಭಾರತ ಪ್ರಕಟ

Team India Squad For Afghanistan T20I Series: ಶುಕ್ರವಾರ (ಜನವರಿ 5) ಅಫ್ಘಾನಿಸ್ತಾನ ವಿರುದ್ಧದ ಸ್ವದೇಶಿ ಸರಣಿಗೆ ಭಾರತೀಯ ಆಯ್ಕೆಗಾರರು ತಂಡವನ್ನು ಪ್ರಕಟ ಮಾಡಲಿದ್ದಾರೆ. ತಂಡದ ಘೋಷಣೆಗೆ ಮುಂಚಿತವಾಗಿ, ಬ್ಯಾಟಿಂಗ್ ಸೂಪರ್‌ಸ್ಟಾರ್‌ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಪುನಃ ಭಾರತಕ್ಕಾಗಿ ಟಿ20 ಕ್ರಿಕೆಟ್ ಆಡಲು ಉತ್ಸುಕರಾಗಿದ್ದಾರೆ ಎಂದು ವರದಿಗಳಿವೆ.

IND vs AFG T20I Series: ಟಿ20ಗೆ ರೋಹಿತ್, ಕೊಹ್ಲಿ ಕಮ್​ಬ್ಯಾಕ್; ಅಫ್ಘಾನ್ ಸರಣಿಗೆ ಇಂದು ಭಾರತ ಪ್ರಕಟ
Virat Kohli Rohit Sharma
Vinay Bhat
|

Updated on: Jan 05, 2024 | 11:09 AM

Share

ದಕ್ಷಿಣ ಆಫ್ರಿಕಾ ಪ್ರವಾಸವನ್ನು ಭಾರತ (South Africa vs India) ಯಶಸ್ವಿಯಾಗಿ ಮುಗಿಸಿದೆ. ಕಠಿಣವಾಗಿದ್ದ ಪ್ರವಾಸದಲ್ಲಿ ಏಕದಿನ ಸರಣಿಯನ್ನು ವಶಪಡಿಸಿಕೊಂಡರೆ, ಟಿ20 ಸರಣಿಯನ್ನು ಸಮಬಲ ಸಾಧಿಸಿತು. ಕೊನೆಯದಾಗಿ ನಡೆದ ಎರಡು ಟೆಸ್ಟ್ ಪಂದ್ಯ ಕೂಡ 1-1 ಅಂತರದಿಂದ ಡ್ರಾ ಆಯಿತು. ಭಾರತೀಯ ಪುರುಷರ ಕ್ರಿಕೆಟ್ ತಂಡವು ಇದೀಗ ಮೂರು ಪಂದ್ಯಗಳ ಟಿ20I ಸರಣಿಯಲ್ಲಿ ಅಫ್ಘಾನಿಸ್ತಾನವನ್ನು ಎದುರಿಸಲು ಸಜ್ಜಾಗಬೇಕಿದೆ. ಏಷ್ಯಾದ ಎರಡು ತಂಡಗಳ ನಡುವಿನ ದ್ವಿಪಕ್ಷೀಯ ಸರಣಿಯು ಭಾರತದಲ್ಲಿ ನಡೆಯಲಿದ್ದು, ಜನವರಿ 11 ರಂದು ಮೊಹಾಲಿಯಲ್ಲಿ ಪ್ರಾರಂಭವಾಗಲಿದೆ. ಎರಡನೇ ಪಂದ್ಯ ಜನವರಿ 14 ರಂದು ಇಂದೋರ್‌ನಲ್ಲಿ ಮತ್ತು ಅಂತಿಮ ಪಂದ್ಯ ಜನವರಿ 17 ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.

ಶುಕ್ರವಾರ (ಜನವರಿ 5) ಅಫ್ಘಾನಿಸ್ತಾನ ವಿರುದ್ಧದ ಸ್ವದೇಶಿ ಸರಣಿಗೆ ಭಾರತೀಯ ಆಯ್ಕೆಗಾರರು ತಂಡವನ್ನು ಪ್ರಕಟ ಮಾಡಲಿದ್ದಾರೆ. ತಂಡದ ಘೋಷಣೆಗೆ ಮುಂಚಿತವಾಗಿ, ಬ್ಯಾಟಿಂಗ್ ಸೂಪರ್‌ಸ್ಟಾರ್‌ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಪುನಃ ಭಾರತಕ್ಕಾಗಿ ಟಿ20 ಕ್ರಿಕೆಟ್ ಆಡಲು ಉತ್ಸುಕರಾಗಿದ್ದಾರೆ ಎಂದು ವರದಿಗಳಿವೆ. ನವೆಂಬರ್ 10, 2022 ರಂದು ಅಡಿಲೇಡ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಟಿ20 ವಿಶ್ವಕಪ್ 2022 ರ ಎರಡನೇ ಸೆಮಿಫೈನಲ್‌ನಲ್ಲಿ ಮೆನ್ ಇನ್ ಬ್ಲೂ 10-ವಿಕೆಟ್‌ಗಳ ಸೋಲಿನ ನಂತರ ಇವರಿಬ್ಬರು ಭಾರತಕ್ಕಾಗಿ ಒಂದೇ ಒಂದು ಟಿ20I ಆಡಿಲ್ಲ.

IND vs SA: ಐತಿಹಾಸಿಕ ಗೆಲುವಿನೊಂದಿಗೆ ಡಬ್ಲ್ಯುಟಿಸಿ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಭಾರತ..!

ಇದನ್ನೂ ಓದಿ
Image
ಭಾರತ ಗೆದ್ದ ಸಂದರ್ಭ ರೋಹಿತ್-ಗಿಲ್-ಜೈಸ್ವಾಲ್ ಆಕ್ರಮಣಕಾರಿ ಸಂಭ್ರಮಾಚರಣೆ
Image
2ನೇ ಟೆಸ್ಟ್​ ಗೆದ್ದ ಬಳಿಕ ಪೋಸ್ಟ್ ಮ್ಯಾಚ್​ನಲ್ಲಿ ರೋಹಿತ್ ಏನು ಹೇಳಿದ್ರು?
Image
ಇಂದಿನಿಂದ ರಣಜಿ ಟ್ರೋಫಿ ಆರಂಭ: ಹೆಚ್ಚಿನ ರನ್ಸ್, ಗರಿಷ್ಠ ವಿಕೆಟ್ಸ್ ಯಾರು?
Image
642 ಎಸೆತಗಳಿಗೆ ಮುಕ್ತಾಯ; 147 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಹೊಸ ದಾಖಲೆ

ಇದೀಗ 2024ರ ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ಈ ಜೋಡಿ ಪುನರಾಗಮನಕ್ಕೆ ಸಿದ್ಧವಾಗಿದೆ. ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ರೋಹಿತ್ ಮತ್ತು ಕೊಹ್ಲಿ ಅವರು ಚುಟುಕು ಕ್ರಿಕೆಟ್​ನ ಆಯ್ಕೆಗೆ ಲಭ್ಯವಿದ್ದಾರೆ ಎಂದು ಬಿಸಿಸಿಐಗೆ ತಿಳಿಸಿದ್ದಾರೆ. ಹೀಗಾಗಿ ಇವರನ್ನು ಅಫ್ಘಾನಿಸ್ತಾನ ವಿರುದ್ಧದ ಟಿ20I ಗಳಿಗೆ ಆಯ್ಕೆ ಮಾಡಲಿದ್ದಾರಂತೆ. ಅಫ್ಘಾನಿಸ್ತಾನ ವಿರುದ್ಧದ ಸ್ವದೇಶಿ ಸರಣಿಯು ಟಿ20 ವಿಶ್ವಕಪ್‌ಗೆ ಮೊದಲು ಭಾರತದ ಕೊನೆಯ ದ್ವಿಪಕ್ಷೀಯ ಟಿ20I ಸರಣಿಯಾಗಿದೆ. ಟಿ20 ವಿಶ್ವಕಪ್ ಈ ವರ್ಷದ ಜೂನ್‌ನಲ್ಲಿ ವೆಸ್ಟ್ ಇಂಡೀಸ್ ಮತ್ತು USA ನಲ್ಲಿ ನಡೆಯಲಿದೆ.

ಇನ್ನು ಅಫ್ಘಾನಿಸ್ತಾನ ವಿರುದ್ಧದ ಟಿ20Iಗಳಿಂದ ವೇಗದ ಬೌಲರ್‌ಗಳಾದ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಕೇಪ್ ಟೌನ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಬುಮ್ರಾ ಮತ್ತು ಸಿರಾಜ್ ಸಾಕಷ್ಟು ಶ್ರಮವಹಿಸಿ ತಂಡದ ಗೆಲುವಿಗೆ ಕಾರಣರಾಗಿದ್ದರು. ನ್ಯೂಲ್ಯಾಂಡ್ಸ್‌ನಲ್ಲಿ ನಡೆದ ಪಂದ್ಯದಲ್ಲಿ, ಸಿರಾಜ್ ಮೊದಲ ಇನ್ನಿಂಗ್ಸ್‌ನಲ್ಲಿ ಆರು ವಿಕೆಟ್‌ಗಳನ್ನು ಪಡೆದರು ಮತ್ತು ಬುಮ್ರಾ ಎರಡನೇ ಇನ್ನಿಂಗ್ಸ್‌ನಲ್ಲಿ 6 ಬ್ಯಾಟರ್‌ಗಳನ್ನು ಔಟ್ ಮಾಡಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್