AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಮೈದಾನದಲ್ಲಿ ಸುಸ್ತಾಗಿದ್ದ ಆಟಗಾರರಿಗೆ ನೀರು ತಂದುಕೊಟ್ಟ ವಿರಾಟ್ ಕೊಹ್ಲಿ: ವಿಡಿಯೋ ನೋಡಿ

India vs West Indies 2nd ODI: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಿಂದ ವಿಶ್ರಾಂತಿ ಪಡೆದುಕೊಂಡಿದ್ದ ವಿರಾಟ್ ಕೊಹ್ಲಿ ಡ್ರಿಂಕ್ಸ್ ಬ್ರೇಕ್ ವೇಳೆ ಯುಜ್ವೇಂದ್ರ ಚಹಲ್ ಜೊತೆ ವಾಟರ್ ಬಾಯ್ ಆಗಿ ಮೈದಾನಕ್ಕೆ ಬಂದರು.

Virat Kohli: ಮೈದಾನದಲ್ಲಿ ಸುಸ್ತಾಗಿದ್ದ ಆಟಗಾರರಿಗೆ ನೀರು ತಂದುಕೊಟ್ಟ ವಿರಾಟ್ ಕೊಹ್ಲಿ: ವಿಡಿಯೋ ನೋಡಿ
Virat Kohli Water Boy
Vinay Bhat
|

Updated on: Jul 30, 2023 | 8:54 AM

Share

ಬಾರ್ಬಡೊಸ್​ನ ಕೆನ್ನಿಂಗ್ಟನ್ ಓವಲ್​ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ (West Indies vs India) ಹೀನಾಯ ಪ್ರದರ್ಶನ ತೋರಿ ಸೋಲುಂಡಿದೆ. ಸರಣಿ ಗೆಲ್ಲುವ ಕನಸಿನಲ್ಲಿದ್ದ ಟೀಮ್ ಇಂಡಿಯಾಕ್ಕೆ ಕೆರಿಬಿಯನ್ ಪಡೆ ಶಾಕ್ ನೀಡಿತು. ಬ್ಯಾಟಿಂಗ್ – ಬೌಲಿಂಗ್ ಎರಡೂ ವಿಭಾಗಗಳಲ್ಲಿ ಮಿಂಚದ ಭಾರತ ಕಳಪೆ ಆಟವಾಡಿದರೆ ವೆಸ್ಟ್ ಇಂಡೀಸ್ 6 ವಿಕೆಟ್​ಗಳ ಜಯದೊಂದಿಗೆ ಸರಣಿ ಸಮಬಲ ಸಾಧಿಸಿದೆ. ಈ ಪಂದ್ಯದಿಂದ ವಿರಾಟ್ ಕೊಹ್ಲಿ (Virat Kohli) ಹಾಗೂ ರೋಹಿತ್ ಶರ್ಮಾ (Rohit Sharma) ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ಹಾರ್ದಿಕ್ ಪಾಂಡ್ಯ ನಾಯಕತ್ವದ ಜವಾಬ್ದಾರಿ ಹೊತ್ತಿದ್ದರು. ರೆಸ್ಟ್​ನಲ್ಲಿದ್ದ ಕೊಹ್ಲಿ ವಾಟರ್ ಬಾಯ್ ಕೂಡ ಕಾಣಿಸಿಕೊಂಡರು.

ಎರಡನೇ ಏಕದಿನ ಪಂದ್ಯದಿಂದ ವಿಶ್ರಾಂತಿ ಪಡೆದುಕೊಂಡಿದ್ದ ವಿರಾಟ್ ಕೊಹ್ಲಿ ಡ್ರಿಂಕ್ಸ್ ಬ್ರೇಕ್ ವೇಳೆ ಯುಜ್ವೇಂದ್ರ ಚಹಲ್ ಜೊತೆ ವಾಟರ್ ಬಾಯ್ ಆಗಿ ಮೈದಾನಕ್ಕೆ ಬಂದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಭಾರೀ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿದೆ. ಇಲ್ಲಿದೆ ನೋಡಿ ಆ ವಿಡಿಯೋ.

ಇದನ್ನೂ ಓದಿ
Image
IND vs WI: 245 ದಿನಗಳ ನಂತರ ಸಿಕ್ಕ ಅವಕಾಶವನ್ನು ಕೈಚೆಲ್ಲಿದ ಸಂಜು ಸ್ಯಾಮ್ಸನ್
Image
Hardik Pandya: ಹೀನಾಯ ಸೋಲಿಗೆ ನಾಯಕ ಹಾರ್ದಿಕ್ ಪಾಂಡ್ಯ ದೂರಿದ್ದು ಯಾರನ್ನ ಗೊತ್ತೇ?
Image
IND vs WI: ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್- ಕೊಹ್ಲಿ ಆಡದಿರಲು ಕಾರಣವೇನು?
Image
Stuart Broad Retirement: ವೃತ್ತಿ ಬದುಕಿಗೆ ವಿದಾಯ ಹೇಳಿದ ಇಂಗ್ಲೆಂಡ್ ವೇಗಿ ಸ್ಟುವರ್ಟ್​ ಬ್ರಾಡ್

IND vs WI: ಕೊಹ್ಲಿ- ರೋಹಿತ್ ಇಲ್ಲದ ಟೀಂ ಇಂಡಿಯಾಕ್ಕೆ ಸೋಲಿನ ಶಾಕ್! ಸರಣಿಯಲ್ಲಿ ಸಮಬಲ ಸಾಧಿಸಿದ ವಿಂಡೀಸ್

ಅಂದಹಾಗೆ ಕೊಹ್ಲಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಇಲ್ಲದಿದ್ದಾಗ ವಾಟರ್ ಬಾಯ್ ಆಗಿ ಕಾಣಿಸಿಕೊಂಡಿದ್ದು ಇದೇ ಮೊದಲೇನಲ್ಲ. ಈ ಹಿಂದೆ 2017 ರಲ್ಲಿ ನಾಯಕನಾಗಿದ್ದಾಗ ಧರ್ಮಶಾಲದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ನಡುವೆ ಆಟಗಾರರಿಗೆ ನೀರು ತಂದುಕೊಟ್ಟಿದ್ದರು. ಆಗ ಕೊಹ್ಲಿ ಭುಜದ ನೋವಿನಿಂದ ಬಳಲುತ್ತಿದ್ದರು. ಕೇವಲ ಕೊಹ್ಲಿ ಮಾತ್ರವಲ್ಲ, ಎಂಎಸ್ ಧೋನಿ ಕೂಡ ಪ್ಲೇಯಿಂಗ್ ಇಲೆವೆನ್​ನಲ್ಲಿ ಇಲ್ಲದಿದ್ದಾಗ ಮೈದಾನಕ್ಕೆ ನೀರು ತಂದುಕೊಟ್ಟಿದ್ದರು.

ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದುಕೊಂಡಿದ್ದು ಬಿಟ್ಟರೆ ಬಳಿಕ ದಿಢೀರ್ ಕುಸಿತ ಕಂಡಿತು. ಓಪನರ್​ಗಳಾದ ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ಮೊದಲ ವಿಕೆಟ್​ಗೆ 90 ರನ್​ಗಳ ಜೊತೆಯಾಟ ಆಡಿದರು. ಗಿಲ್ 34 ರನ್ ಗಳಿಸಿದರೆ, ಕಿಶನ್ 55 ರನ್ ಬಾರಿಸಿ ಔಟಾದರು. ನಂತರ ಬಂದ ಬ್ಯಾಟರ್​ಗಳ ಪೈಕಿ ಸೂರ್ಯಕುಮಾರ್ ಯಾದವ್ 24 ರನ್ ಗಳಿಸಿದ್ದೇ ಹೆಚ್ಚು. ಭಾರತ 40.5 ಓವರ್​ಗಳಲ್ಲಿ 181 ರನ್​ಗಳಿಗೆ ಆಲೌಟ್ ಆಯಿತು. ವಿಂಡೀಸ್ ಪರ ಗುಡ್ಕೇಶ್ ಮೋತಿ ಮತ್ತು ರೊಮಾರಿಯೊ ಶೆಫರ್ಡ್ ತಲಾ 3 ವಿಕೆಟ್ ಪಡೆದರು.

ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್ ಇಂಡೀಸ್ ಆರಂಭದಲ್ಲಿ ವಿಕೆಟ್ ಕಳೆದುಕೊಂಡರೂ ನಂತರ ನಾಯಕ ಶಾಯ್ ಹೋಪ್ ಕ್ರೀಸ್ ಕಚ್ಚಿ ನಿಂತು ಜಯ ತಂದುಕೊಟ್ಟರು. ಬ್ರಾಂಡನ್ ಕಿಂಗ್ 15, ಖೈಲ್ ಮೇಯರ್ಸ್ 36 ರನ್ ಗಳಿಸಿದರೆ, ಹೋಪ್ ಅಜೇಯ 63 ಮತ್ತು ಕೇಸಿ ಕಾರ್ಟಿ ಅಜೇಯ 48 ರನ್ ಬಾರಿಸಿದರು. ವಿಂಡೀಸ್ 36.4 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿ 6 ವಿಕೆಟ್​ಗಳ ಜಯ ಸಾಧಿಸಿತು. ಭಾರತ ಪರ ಶಾರ್ದೂಲ್ ಥಾಕೂರ್ 3 ವಿಕೆಟ್ ಕಿತ್ತರು. ಸದ್ಯ ಮೂರು ಪಂದ್ಯಗಳ ಏಕದಿನ ಸರಣಿ 1-1 ಅಂತರದಿಂದ ಸಮಬಲಗೊಂಡಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ