Virat Kohli: ಬಿಸಿಸಿಐಯಿಂದ ಸದ್ಯದಲ್ಲೇ ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಅತಿ ದೊಡ್ಡ ಘೋಷಣೆ: ಏನದು ಗೊತ್ತೇ?

Virat Kohli Captaincy: ವಿರಾಟ್ ಕೊಹ್ಲಿ ಭಾರತ ತಂಡವನ್ನು ಮೂರೂ ಮಾದರಿಯಲ್ಲಿ ಮುನ್ನಡೆಸುತ್ತಿದ್ದಾರೆ. ಸದ್ಯ ಕೊಹ್ಲಿ ನಾಯಕತ್ವದ ಜವಾಬ್ದಾರಿಯಿಂದ ಕೆಳಗಿಳಿದು ರೋಹಿತ್ ಶರ್ಮಾಗೆ ನಾಯಕ ಸ್ಥಾನವನ್ನುನೀಡುವ ಸಮಯ ಬಂದಾಗಿದೆ.

Virat Kohli: ಬಿಸಿಸಿಐಯಿಂದ ಸದ್ಯದಲ್ಲೇ ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಅತಿ ದೊಡ್ಡ ಘೋಷಣೆ: ಏನದು ಗೊತ್ತೇ?
Virat Kohli
Follow us
| Updated By: Vinay Bhat

Updated on: Sep 13, 2021 | 9:46 AM

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ (Virat Kohli) ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಸದ್ಯದದಲ್ಲೇ ಅತಿ ದೊಡ್ಡ ಪ್ರಕಟಣೆ ಹೊರಡಿಸಲಿದೆ. ಅದುವೇ ಕೊಹ್ಲಿ ನಾಯಕತ್ವದ (Virat Kohli Captaincy) ಬಗ್ಗೆ. ಹೌದು, ವಿರಾಟ್ ಕೊಹ್ಲಿ ಸದ್ಯದಲ್ಲೇ ಟೀಮ್ ಇಂಡಿಯಾದ ಏಕದಿನ ಮತ್ತು ಟಿ-20 ಕ್ರಿಕೆಟ್​ನ ನಾಯಕತ್ವ ತ್ಯಜಿಸುವುದು ಖಚಿತವಾಗಿದೆ. ಬಹುನಿರೀಕ್ಷಿತ ಐಸಿಸಿ ಟಿ-20 ವಿಶ್ವಕಪ್ (ICC T20 World Cup) ಮುಗಿದ ಬೆನ್ನಲೇ ಕೊಹ್ಲಿ ವೈಟ್ ಬಾಲ್ ಕ್ರಿಕೆಟ್ ನಾಯಕತ್ವದಿಂದ ಕೆರಳಗಿಳಿಯಲಿದ್ದಾರಂತೆ. ನೂತನ ನಾಯಕನಾಗಿ ಏಕದಿನ ಮತ್ತು ಟಿ-20 ಕ್ರಿಕೆಟ್​ಗೆ ರೋಹಿತ್ ಶರ್ಮಾ (Rohit Sharma) ಅವರನ್ನು ಬಿಸಿಸಿಐ ಆಯ್ಕೆ ಮಾಡಲಿದೆ. ವಿರಾಟ್ ಕೊಹ್ಲಿ ಅವರ ನಾಯಕತ್ವದ ಕುರಿತು ಬಿಸಿಸಿಐ ಈಗಾಗಲೇ ವಿಶೇಷ ಸಭೆ ನಡೆಸಿ ತೀರ್ಮಾನ ಮಾಡಿಕೊಂಡಿದೆ. ಕಳೆದ ಜುಲೈನಲ್ಲಿ ಬಿಸಿಸಿಐ ಅಧಿಕಾರಿಗಳು ವಿಶೇಷ ಸಭೆ ನಡೆಸಿದ್ದಾರೆ. ಇದರಲ್ಲಿ ಸೀಮಿತ ಓವರ್ ಕ್ರಿಕೆಟ್​ಗೆ ಮತ್ತು ಟೆಸ್ಟ್ ಕ್ರಿಕೆಟ್​ಗೆ ಬೇರೆ ಬೇರೆ ನಾಯಕರನ್ನು ಆಯ್ಕೆ ಮಾಡುವ ಬಗ್ಗೆ ಚರ್ಚೆ ನಡೆಸಲಾಗಿದೆಯಂತೆ.

ವಿರಾಟ್ ಕೊಹ್ಲಿ ಸದ್ಯ ಭಾರತ ತಂಡವನ್ನು ಮೂರೂ ಮಾದರಿಯಲ್ಲಿ ನಾಯಕನಾಗಿ ಮುನ್ನಡೆಸುತ್ತಿದ್ದಾರೆ. ಸದ್ಯ ಕೊಹ್ಲಿ ತನ್ನ ನಾಯಕತ್ವದ ಜವಾಬ್ದಾರಿಯನ್ನು ಹಂಚಿಕೊಳ್ಳುವ ಸಂದರ್ಭ ಬಂದಿದೆ ಎಂದು ಬಿಸಿಸಿಐ ಮೂಲಗಳು ಟೈಮ್ಸ್ ಆಫ್ ಇಂಡಿಯಾಕ್ಕೆ ತಿಳಿಸಿವೆ.

ಇದಕ್ಕೆ ಕಾರಣ ಏನು ಎಂಬೂದು ಕೂಡ ಬಹಿರಂಗವಾಗಿದೆ. ಕಳೆದ ಕೆಲವು ವರ್ಷಗಳಿಂದ ಕೊಹ್ಲಿ ಬ್ಯಾಟ್ ಸದ್ದು ಮಾಡುತ್ತಿಲ್ಲ. ಇವರು ಸೆಂಚುರಿ ಬಾರಿಸಿ ಎರಡು ವರ್ಷಗಳಾಗುತ್ತಿವೆ. ಹೀಗಾಗಿ ಕೊಹ್ಲಿ ತನ್ನ ಬ್ಯಾಟಿಂಗ್ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆಯಂತೆ. ಮೂರು ಮಾದರಿಯಲ್ಲಿ ನಾಯಕನ ಜವಾಬ್ದಾರಿ ಹೊತ್ತು ಬ್ಯಾಟಿಂಗ್​ನಲ್ಲಿ ಉತ್ತಮ ಪ್ರದರ್ಶನ ಕೂಡ ನೀಡುವುದು ಸುಲಭದ ಕೆಲಸವಲ್ಲ. ಇದರ ಬಗ್ಗೆ ವಿರಾಟ್ ಕೊಹ್ಲಿ ಈಗಾಗಲೇ ಬಿಸಿಸಿಐ ಮಾಹಿತಿ ನಿಡಿದ್ದಾರಂತೆ.

ವಿರಾಟ್ ಕೊಹ್ಲಿಯ ನಾಯಕತ್ವದ ದಾಖಲೆ ನೋಡುವುದಾದರೆ, ಟೆಸ್ಟ್​ನಲ್ಲಿ ನಾಯಕನಾಗಿ ಮುನ್ನಡೆಸಿದ ಒಟ್ಟು 65 ಪಂದ್ಯಗಳಲ್ಲಿ 38 ರಲ್ಲಿ ಜಯ ಸಾಧಿಸಿದ್ದಾರೆ. ಏಕದಿನದಲ್ಲಿ 95 ಪಂದ್ಯಗಳಲ್ಲಿ ಪೈಕಿ 65 ಮತ್ತು ಟಿ-20 ಯಲ್ಲಿ 45 ಪಂದ್ಯಗಳ ಪೈಕಿ 29 ಪಂದ್ಯಗಳಲ್ಲಿ ಭಾರತ ಇವರ ನಾಯಕತ್ವದಡಿಯಲ್ಲಿ ಗೆದ್ದಿದೆ.

ಆದರೆ, 2013ರ ಬಳಿಕ ಟೀಮ್ ಇಂಡಿಯಾ ಐಸಿಸಿ ಟ್ರೋಫಿಯನ್ನು ಗೆದ್ದಿಲ್ಲ. 2014 ರಿಂದ ಟೀಮ್ ಇಂಡಿಯಾವನ್ನು ಮುನ್ನಡೆಸುತ್ತಿರುವ ಕೊಹ್ಲಿ ನಾಯಕತ್ವದಲ್ಲಿ ಐಸಿಸಿ ಪ್ರಶಸ್ತಿ ಭಾರತಕ್ಕೆ ಮರೀಚಿಕೆಯಾಗಿದೆ. ನಾಯಕನಾಗಿ ಕೊಹ್ಲಿ ಐಸಿಸಿ ಟೂರ್ನಿಗಳಾದ ಟಿ-20 ವಿಶ್ವಕಪ್​, ಏಕದಿನ ವಿಶ್ವಕಪ್​, ಚಾಂಪಿಯನ್​​ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸೇರಿ 4 ಟೂರ್ನಿಗಳಲ್ಲಿ ಕೊನೆ ಹಂತದಲ್ಲಿ ಎಡವಿದ್ದಾರೆ.

2017 ರಲ್ಲಿ ಚಾಂಪಿಯನ್​ ಟ್ರೋಫಿಯಲ್ಲಿ ಫೈನಲ್ ಪ್ರವೇಶಿಸಿದರೂ ಪಾಕಿಸ್ತಾನ ವಿರುದ್ದ ಸೋಲುವ ಮೂಲಕ ಚೊಚ್ಚಲ ಐಸಿಸಿ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈತಪ್ಪಿಸಿಕೊಂಡಿದ್ದರು. 2019ರ ವಿಶ್ವಕಪ್​​ನಲ್ಲಿ ಸೆಮಿಫೈನಲ್​ನಲ್ಲಿ ಎಡವಿದ ಟೀಮ್ ಇಂಡಿಯಾ ಟ್ರೋಫಿಗೆ ಮುತ್ತಿಕ್ಕುವ ಅವಕಾಶವನ್ನು ಕಳೆದುಕೊಂಡಿತು. ಅಲ್ಲದೆ ಚೊಚ್ಚಲ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲೂ​ ನ್ಯೂಜಿಲೆಂಡ್ ವಿರುದ್ದ ಸೋಲುವ ಮೂಲಕ ಕೊಹ್ಲಿ ನಿರಾಸೆ ಅನುಭವಿಸಿದರು.

India vs England: ಐದನೇ ಟೆಸ್ಟ್ ರದ್ದಾದ ಬಗ್ಗೆ ರವಿಶಾಸ್ತ್ರಿ ಮೊದಲ ಪ್ರತಿಕ್ರಿಯೆ: ಏನಂದ್ರು ಕೇಳಿ

US Open Final: ಜೋಕೊವಿಚ್​ಗೆ ಅರಗಿಸಿಕೊಳ್ಳಲಾಗದ ಸೋಲು: ಕೋರ್ಟ್​ನಲ್ಲೇ ಕಣ್ಣೀರಿಟ್ಟ ವಿಶ್ವದ ನಂಬರ್ ಒನ್ ಟೆನಿಸಿಗ

(Big announcement Coming from BCCI: Virat Kohli to quit T20 and ODI captaincy after T20 WC, Rohit Sharma to takeover)

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್