AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಸೋತರೂ ಟಿ20 ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ

India vs Pakistan: ಮೂರನೇ ಸ್ಥಾನದಲ್ಲಿ ಶ್ರೀಲಂಕಾದ ಮಹೇಲಾ ಜಯವರ್ಧನೆ ಇದ್ದು, ಜಯವರ್ಧನೆ ಟಿ20 ವಿಶ್ವಕಪ್​ನಲ್ಲಿ 7 ಬಾರಿ ಅರ್ಧಶತಕ ಬಾರಿಸಿದ್ದರು. ಹಾಗೆಯೇ ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ 4ನೇ ಸ್ಥಾನದಲ್ಲಿದ್ದಾರೆ. ಹಿಟ್​ಮ್ಯಾನ್ ಇದುವರೆಗೆ ಟಿ20 ವಿಶ್ವಕಪ್​ನಲ್ಲಿ 6 ಅರ್ಧಶತಕ ಸಿಡಿಸಿದ್ದಾರೆ.

Virat Kohli: ಸೋತರೂ ಟಿ20 ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Virat Kohli
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 24, 2021 | 11:00 PM

ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್​ (India vs Pakistan) ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ನಾಯಕ ವಿರಾಟ್ ಕೊಹ್ಲಿ (Virat Kohli) ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದರು. ಮೊದಲ ಓವರ್​ನಲ್ಲೇ ರೋಹಿತ್ ಶರ್ಮಾ (Rohit Sharma) ಹಾಗೂ 3ನೇ ಓವರ್​ನಲ್ಲಿ ಕೆಎಲ್ ರಾಹುಲ್ (KL Rahul) ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಕೊಹ್ಲಿ ಆಸರೆಯಾದರು. ಅದರಂತೆ ಎಚ್ಚರಿಕೆಯ ಆಟವಾಡುತ್ತಾ ರನ್​ ಗತಿ ಹೆಚ್ಚಿಸಿದ ಕೊಹ್ಲಿ 45 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ಈ ಆಕರ್ಷಕ ಇನಿಂಗ್ಸ್​ನಲ್ಲಿ ಕೊಹ್ಲಿ ಬ್ಯಾಟ್​ನಿಂದ 1 ಸಿಕ್ಸ್ ಹಾಗೂ 5 ಫೋರ್​ಗಳು ಮೂಡಿಬಂದಿದ್ದವು. ಈ ಅರ್ಧಶತಕದೊಂದಿಗೆ ಟೀಮ್ ಇಂಡಿಯಾ ನಾಯಕ ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ ಈ ದಾಖಲೆ ವೆಸ್ಟ್​ ಇಂಡೀಸ್​ನ ಕ್ರಿಸ್ ಗೇಲ್ ಹೆಸರಿನಲ್ಲಿತ್ತು.

ಗೇಲ್ ಟಿ20 ವಿಶ್ವಕಪ್​ನಲ್ಲಿ 9 ಬಾರಿ ಅರ್ಧಶತಕ ಬಾರಿಸಿದ್ದರು. ಇದೀಗ ವಿರಾಟ್ ಕೊಹ್ಲಿ 10 ಬಾರಿ ಹಾಫ್ ಸೆಂಚುರಿ ಸಿಡಿಸಿ ಹೊಸ ಇತಿಹಾಸ ಬರೆದಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಶ್ರೀಲಂಕಾದ ಮಹೇಲಾ ಜಯವರ್ಧನೆ ಇದ್ದು, ಜಯವರ್ಧನೆ ಟಿ20 ವಿಶ್ವಕಪ್​ನಲ್ಲಿ 7 ಬಾರಿ ಅರ್ಧಶತಕ ಬಾರಿಸಿದ್ದರು. ಹಾಗೆಯೇ ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ 4ನೇ ಸ್ಥಾನದಲ್ಲಿದ್ದಾರೆ. ಹಿಟ್​ಮ್ಯಾನ್ ಇದುವರೆಗೆ ಟಿ20 ವಿಶ್ವಕಪ್​ನಲ್ಲಿ 6 ಅರ್ಧಶತಕ ಸಿಡಿಸಿದ್ದಾರೆ.

ಇದನ್ನೂ ಓದಿ: India vs Pakistan: 2007ರ ಟಿ20 ವಿಶ್ವಕಪ್ ಫೈನಲ್ ಆಡಿದ್ದ ಇಬ್ಬರು ಆಟಗಾರರ ಮುಖಾಮುಖಿ

ಇದನ್ನೂ ಓದಿ: T20 World cup 2021: ಪಾಕ್ ವಿರುದ್ದದ ಪಂದ್ಯದೊಂದಿಗೆ ಹೊಸ ಸಾಧನೆ ಮಾಡಲಿದ್ದಾರೆ ಕೆಎಲ್ ರಾಹುಲ್, ಪಾಂಡ್ಯ

ಇದನ್ನೂ ಓದಿ: T20 World Cup 2021: ಟಿ20 ರ‍್ಯಾಂಕಿಂಗ್‌​ನಲ್ಲಿ ನಂಬರ್ 1 ತಂಡ ಯಾವುದು ಗೊತ್ತಾ?

(Virat Kohli Created New Record In T20 World Cup)

ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಡಿಎಂಕೆ ಸಂಸದ ರಾಜಾ ಭಾಷಣ ಮಾಡುವಾಗ ಬಿದ್ದ ಫೆಡ್​ಲೈಟ್ ಕಂಬ
ಡಿಎಂಕೆ ಸಂಸದ ರಾಜಾ ಭಾಷಣ ಮಾಡುವಾಗ ಬಿದ್ದ ಫೆಡ್​ಲೈಟ್ ಕಂಬ
ಉಗ್ರರಿಗೆ ಸಹಾಯ ಮಾಡಿದ್ದ ಇಮ್ತಿಯಾಜ್ ನದಿಗೆ ಹಾರಿ ಪ್ರಾಣ ಬಿಟ್ಟ
ಉಗ್ರರಿಗೆ ಸಹಾಯ ಮಾಡಿದ್ದ ಇಮ್ತಿಯಾಜ್ ನದಿಗೆ ಹಾರಿ ಪ್ರಾಣ ಬಿಟ್ಟ
ಯುದ್ಧಸನ್ನದ್ಧ ಭಾರತೀಯ ಸೇನೆಯಿಂದ ಪ್ರತ್ಯುತ್ತರ, ಪ್ರತಿದಾಳಿ
ಯುದ್ಧಸನ್ನದ್ಧ ಭಾರತೀಯ ಸೇನೆಯಿಂದ ಪ್ರತ್ಯುತ್ತರ, ಪ್ರತಿದಾಳಿ
‘ನಟಿ ಗ್ಲಾಮರಸ್ ಆಗಿದ್ರೆ ಮಾತ್ರ ನನ್ನ ಕಣ್ಣು ಬೀಳುತ್ತೆ’; ರವಿಚಂದ್ರನ್
‘ನಟಿ ಗ್ಲಾಮರಸ್ ಆಗಿದ್ರೆ ಮಾತ್ರ ನನ್ನ ಕಣ್ಣು ಬೀಳುತ್ತೆ’; ರವಿಚಂದ್ರನ್
ಅಪಘಾತದಲ್ಲಿ ಕಾರಿನ ಮುಂಭಾಗ, ಅಂಗಡಿ ಮುಂದೆ ನಿಂತಿದ್ದ ಸ್ಕೂಟರ್ ಜಖಂ
ಅಪಘಾತದಲ್ಲಿ ಕಾರಿನ ಮುಂಭಾಗ, ಅಂಗಡಿ ಮುಂದೆ ನಿಂತಿದ್ದ ಸ್ಕೂಟರ್ ಜಖಂ