AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಅರ್ಹರಾಗಿರಲಿಲ್ಲ: ಸಂಜಯ್ ಮಂಜ್ರೇಕರ್

T20 World Cup 2024: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 76 ರನ್ ಬಾರಿಸಿದ್ದರು. ಈ ಅರ್ಧಶತಕದ ನೆರವಿನಿಂದ ಭಾರತ ತಂಡವು 176 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 169 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 7 ರನ್​ಗಳ ರೋಚಕ ಜಯ ಸಾಧಿಸಿ ವಿಶ್ವ ಚಾಂಪಿಯನ್ ಪಟ್ಟಕ್ಕೇರಿದೆ.

Virat Kohli: ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಅರ್ಹರಾಗಿರಲಿಲ್ಲ: ಸಂಜಯ್ ಮಂಜ್ರೇಕರ್
Virat Kohli
ಝಾಹಿರ್ ಯೂಸುಫ್
|

Updated on:Jul 03, 2024 | 10:09 AM

Share

ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಅರ್ಹರಾಗಿರಲಿಲ್ಲ ಎಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ ಅಭಿಪ್ರಾಯಪಟ್ಟಿದ್ದಾರೆ. ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 76 ರನ್ ಬಾರಿಸಿದ್ದರು. ಈ ಇನಿಂಗ್ಸ್​ನ ಹೊರತಾಗಿಯೂ ಫೈನಲ್ ಪಂದ್ಯದಲ್ಲಿ ಬೌಲರ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಬೇಕಿತ್ತು ಎಂದು ಸಂಜಯ್ ಮಂಜ್ರೇಕರ್ ಹೇಳಿದ್ದಾರೆ.

ನನ್ನ ಪ್ರಕಾರ, ಅಂತಿಮ ಪಂದ್ಯದಲ್ಲಿ ಕೊಹ್ಲಿ ಪ್ಲೇಯರ್ ಆಫ್ ದಿ ಮ್ಯಾಚ್​ ಅವಾರ್ಡ್​ಗೆ ಅರ್ಹರಾಗಿರಲಿಲ್ಲ. ಇದಾಗ್ಯೂ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಲಾಯಿತು. ಆದರೆ ಈ ಪಂದ್ಯದಲ್ಲಿ ಬೌಲರ್​ಗಳು ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಈ ಪ್ರಶಸ್ತಿ ಬೌಲರ್​​ಗೆ ಸಲ್ಲಬೇಕಿತ್ತು ಎಂದು ಮಂಜ್ರೇಕರ್ ಹೇಳಿದ್ದಾರೆ.

ಫೈನಲ್ ಪಂದ್ಯದಲ್ಲಿ ಭಾರತ ತಂಡವು ಸೋಲಿನತ್ತ ಮುಖಾಮುಖ ಮಾಡಿತ್ತು. ಇದಾಗ್ಯೂ ಭಾರತೀಯ ಬೌಲರ್​ಗಳು ಅಂತಿಮ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಅಲ್ಲದೆ ಸೋಲಿನ ದವಡೆಯಿಂದ ಭಾರತ ತಂಡಕ್ಕೆ ಗೆಲುವು ತಂದುಕೊಟ್ಟರು. ಇಲ್ಲಿ ವಿರಾಟ್ ಕೊಹ್ಲಿಯ ಇನಿಂಗ್ಸ್​ಗಿಂತ, ಭಾರತೀಯ ಬೌಲರ್​ಗಳ ಪ್ರದರ್ಶನ ಮೇಲ್ಮಟ್ಟದಲ್ಲಿದೆ. ಹೀಗಾಗಿ ಬೌಲರ್​ಗಳು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಅರ್ಹರಾಗಿದ್ದರು ಎಂದು ಸಂಜಯ್ ಮಂಜ್ರೇಕರ್ ಅಭಿಪ್ರಾಯಪಟ್ಟಿದ್ದಾರೆ.

ಹಾರ್ದಿಕ್ ಪಾಂಡ್ಯ ಎರಡನೇ ಇನ್ನಿಂಗ್ಸ್‌ನಲ್ಲಿ ಮೂರು ನಿರ್ಣಾಯಕ ವಿಕೆಟ್‌ಗಳನ್ನು ಪಡೆದಿದ್ದರು. ಹಾಗೆಯೇ ಜಸ್​ಪ್ರೀತ್ ಬುಮ್ರಾ ಮತ್ತು ಅರ್ಷದೀಪ್ ಸಿಂಗ್ ತಲಾ ಎರಡು ವಿಕೆಟ್ ಕಬಳಿಸಿದ್ದರು. ಹೀಗಾಗಿ ಇವರಲ್ಲಿ ಒಬ್ಬರು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಅರ್ಹರಾಗಿದ್ದರು ಎಂದು ಮಂಜ್ರೇಕರ್ ಹೇಳಿದ್ದಾರೆ.

ಇದೀಗ ಸಂಜಯ್ ಸಂಜ್ರೇಕರ್ ಅವರ ಈ ಹೇಳಿಕೆಯು ಸೋಷಿಯಲ್ ಮೀಡಿಯಾದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಏಕೆಂದರೆ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅತ್ಯುತ್ತಮ ಇನಿಂಗ್ಸ್ ಆಡಿದ್ದರಿಂದ ಟೀಮ್ ಇಂಡಿಯಾ ಸ್ಪರ್ಧಾತ್ಮಕ ಮೊತ್ತ ಪೇರಿಸುವಂತಾಯಿತು ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ.

ಟೀಮ್ ಇಂಡಿಯಾ 34 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ವೇಳೆ ವಿರಾಟ್ ಕೊಹ್ಲಿ ಇಡೀ ತಂಡದ ಜವಾಬ್ದಾರಿಯನ್ನು ಹೆಗಲೇರಿಸಿಕೊಂಡಿದ್ದರು. ಅಲ್ಲದೆ ಕ್ರೀಸ್ ಕಚ್ಚಿ ನಿಲ್ಲುವ ಮೂಲಕ ಉಳಿದವರು ಉತ್ತಮವಾಗಿ ಬ್ಯಾಟ್ ಬೀಸಲು ಸಾಥ್ ನೀಡಿದ್ದರು.

ಇದನ್ನೂ ಓದಿ: IPL 2025: RCB ತಂಡಕ್ಕೆ ವಿರಾಟ್ ಕೊಹ್ಲಿ ಕ್ಯಾಪ್ಟನ್..?

ಅಲ್ಲದೆ 59 ಎಸೆತಗಳಲ್ಲಿ 76 ರನ್ ಸಿಡಿಸುವ ಮೂಲಕ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 176 ರನ್​ಗಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದಾಗ್ಯೂ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಅರ್ಹರಲ್ಲ ಎನ್ನುವುವುದು ಎಷ್ಟು ಸರಿ ಎಂದು ಅನೇಕರು ಸಂಜಯ್ ಮಂಜ್ರೇಕರ್ ಅವರನ್ನು ಪ್ರಶ್ನಿಸಿದ್ದಾರೆ.

Published On - 10:07 am, Wed, 3 July 24

Follow Us
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು