AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಅಭಿಮಾನಿಯನ್ನು ಎಳೆದುಕೊಂಡು ಹೋದರೂ ಕರುಣೆ ತೋರದ ವಿರಾಟ್ ಕೊಹ್ಲಿ

IPL 2025 RCB vs RR: ಐಪಿಎಲ್​ 2025ರ 28ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ 173 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 17.3 ಓವರ್​ಗಳಲ್ಲಿ 175 ರನ್ ಬಾರಿಸಿ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

VIDEO: ಅಭಿಮಾನಿಯನ್ನು ಎಳೆದುಕೊಂಡು ಹೋದರೂ ಕರುಣೆ ತೋರದ ವಿರಾಟ್ ಕೊಹ್ಲಿ
Virat Kohli Fan
ಝಾಹಿರ್ ಯೂಸುಫ್
|

Updated on: Apr 14, 2025 | 9:54 AM

Share

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಯನ್ನು (Virat Kohli) ಹೋದಲ್ಲಿ ಬಂದಲ್ಲಿ ಅಭಿಮಾನಿಗಳು ಮುತ್ತಿಕ್ಕುವುದು ಗೊತ್ತೇ ಇದೆ. ಅದರಲ್ಲೂ ಈ ಬಾರಿಯ ಐಪಿಎಲ್​ನ ಮೊದಲ ಪಂದ್ಯದಲ್ಲೇ ಕೊಹ್ಲಿಯನ್ನು ಭೇಟಿಯಾಗಲು ಅಭಿಮಾನಿಯೊಬ್ಬರು ಮೈದಾನಕ್ಕೆ ನುಗ್ಗಿದ್ದರು. ಕೊಲ್ಕತ್ತಾ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದಿದ್ದ ಈ ಪಂದ್ಯದ ವೇಳೆ ಮೈದಾನಕ್ಕೆ ಆಗಮಿಸಿದ ಅಭಿಮಾನಿಯು ಕೊಹ್ಲಿಯ ಕಾಲಿಗೆ ನಮಸ್ಕರಿಸಿದ್ದರು. ಇದೀಗ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲೂ ಕೊಹ್ಲಿಯನ್ನು ಭೇಟಿಯಾಗಲು ಅಭಿಮಾನಿಯೋರ್ವ ಮೈದಾನಕ್ಕೆ ನುಗ್ಗಿದ್ದಾರೆ. ಆದರೆ ಈ ಬಾರಿ ಕೊಹ್ಲಿ ತನ್ನ ಅಭಿಮಾನಿಯನ್ನು ನಿರ್ಲಕ್ಷಿಸಿರುವುದೇ ಆಶ್ಚರ್ಯ.

ಸಾಮಾನ್ಯವಾಗಿ ವಿರಾಟ್ ಕೊಹ್ಲಿ ತನ್ನ ಅಭಿಮಾನಿಗಳನ್ನು ಉತ್ತಮ ರೀತಿಯಲ್ಲಿ ನಡೆಸಿಕೊಡುತ್ತಾರೆ. ಆದರೆ ಈ ಬಾರಿ ಅಭಿಮಾನಿಯು ತನ್ನ ಭೇಟಿಯಾಗಲು ಬರುತ್ತಿದ್ದಾರೆ ಎಂಬುದನ್ನು ತಿಳಿಯುತ್ತಿದ್ದಂತೆ ವಿರಾಟ್ ಕೊಹ್ಲಿ ಆತನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ.

ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದ ಬಳಿಕ ರಾಹುಲ್ ದ್ರಾವಿಡ್ ಅವರೊಂದಿಗೆ ವಿರಾಟ್ ಕೊಹ್ಲಿ ಮಾತನಾಡುತ್ತಾ ನಿಂತಿದ್ದರು. ಈ ವೇಳೆ ಮೈದಾನಕ್ಕೆ ನುಗ್ಗಿದ ಅಭಿಮಾನಿಯು ನೇರವಾಗಿ ಕೊಹ್ಲಿಯತ್ತ ಓಡಿ ಬರಲು ಯತ್ನಿಸಿದ್ದಾರೆ. ಇದು ಗೊತ್ತಾಗುತ್ತಿದ್ದಂತೆ ವಿರಾಟ್ ಕೊಹ್ಲಿ ಅಡಗಿಕೊಳ್ಳುತ್ತಾ ಆತನಿಂದ ತಪ್ಪಿಸಿಕೊಂಡಿದ್ದಾರೆ.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಅಷ್ಟರಲ್ಲಾಗಲೇ ಮೈದಾನಕ್ಕೆ ಆಗಮಿಸಿದ ಭದ್ರತಾ ಸಿಬ್ಬಂದಿಗಳು ಯುವಕನ್ನು ವಶಕ್ಕೆ ಪಡೆದು ಎಳೆದುಕೊಂಡು ಹೋದರು. ಇದಾಗ್ಯೂ ಅಭಿಮಾನಿಯತ್ತ ವಿರಾಟ್ ಕೊಹ್ಲಿ ತಿರುಗಿ ಕೂಡ ನೋಡಿಲ್ಲ ಎಂಬುದೇ ಅಚ್ಚರಿ.  ಇದೀಗ ಕಿಂಗ್ ಕೊಹ್ಲಿಯ ಅಭಿಮಾನಿಯ ವಿಡಿಯೋ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಅಭಿಮಾನಿ ಮೇಲೆ ಸ್ವಲ್ಪ ಕರುಣೆ ತೋರಬಹುದಿತ್ತು ಎಂದು ಅಭಿಪ್ರಾಯಗಳು ಕೇಳಿ ಬಂದಿವೆ.

ವಿರಾಟ್ ಕೊಹ್ಲಿ ಫ್ಯಾನ್ ವಿಡಿಯೋ:

ರಾಯಲ್ಸ್ ವಿರುದ್ಧ ಆರ್​ಸಿಬಿ ರಾಯಲ್:

ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಫಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿತು.

174 ರನ್​ಗಳ ಗುರಿ ಪಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಫಿಲ್ ಸಾಲ್ಟ್ ಸ್ಪೋಟಕ ಆರಂಭ ಒದಗಿಸಿದ್ದರು. 33 ಎಸೆತಗಳನ್ನು ಎದುರಿಸಿದ ಸಾಲ್ಟ್ 6 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 65 ರನ್ ಬಾರಿಸಿದರು.

ಇದನ್ನೂ ಓದಿ: ಭಾರತೀಯರು ನಿಮ್ಮನ್ನು… ಪಾಕ್ ಪತ್ರಕರ್ತನ ಪ್ರಶ್ನೆಗೆ ಡೇವಿಡ್ ವಾರ್ನರ್ ಖಡಕ್ ಉತ್ತರ

ಆ ಬಳಿಕ ಇನಿಂಗ್ಸ್ ಕಟ್ಟಿದ ವಿರಾಟ್ ಕೊಹ್ಲಿ 45 ಎಸೆತಗಳಲ್ಲಿ ಅಜೇಯ 62 ರನ್ ಬಾರಿಸಿದರೆ, ದೇವದತ್ ಪಡಿಕ್ಕಲ್ ಅಜೇಯ 40 ರನ್​ಗಳಿಸಿದರು. ಈ ಮೂಲಕ ಆರ್​ಸಿಬಿ ತಂಡವು 17.3 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 175 ರನ್ ಕಲೆಹಾಕಿತು.

Follow Us
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?
ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?
ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?