AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ನಾಯಕತ್ವ ತ್ಯಜಿಸಲು ಇದುವೇ ಕಾರಣ ಎಂದ ವಿರಾಟ್ ಕೊಹ್ಲಿ

T20 World Cup 2021: ಪ್ರಸ್ತುತ ಟಿ20 ಕ್ರಿಕೆಟ್​ನ ಟಾಪ್ ರನ್​ ಸ್ಕೋರರ್ ಆಗಿರುವ ವಿರಾಟ್ ಕೊಹ್ಲಿ, ಮತ್ತೆ ಹಳೆಯ ಫಾರ್ಮ್​ಗೆ ಮರಳುವ ವಿಶ್ವಾಸದಲ್ಲಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಟಿ20ಯಲ್ಲಿ ಕೊಹ್ಲಿ ಅಬ್ಬರ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

Virat Kohli: ನಾಯಕತ್ವ ತ್ಯಜಿಸಲು ಇದುವೇ ಕಾರಣ ಎಂದ ವಿರಾಟ್ ಕೊಹ್ಲಿ
Virat Kohli
TV9 Web
| Updated By: ಝಾಹಿರ್ ಯೂಸುಫ್|

Updated on: Nov 09, 2021 | 10:21 PM

Share

ಭಾರತ ಟಿ20 ತಂಡದ ನಾಯಕತ್ವಕ್ಕೆ ವಿರಾಟ್ ಕೊಹ್ಲಿ (Virat Kohli) ವಿದಾಯ ಹೇಳಿದ್ದಾರೆ. ಹೀಗೆ ದಿಢೀರಣೆ ರಾಜೀನಾಮೆ ಘೋಷಿಸಲು ಕಾರಣವೇನು ಎಂಬುದನ್ನು ಮತ್ತೊಮ್ಮೆ ಕೊಹ್ಲಿ ಸ್ಪಷ್ಟಪಡಿಸಿದ್ದಾರೆ. ನಮೀಬಿಯಾ ವಿರುದ್ದದ ಪಂದ್ಯದ ಬಳಿಕ ಮಾತನಾಡಿದ ಕೊಹ್ಲಿ, ಟೀಮ್ ಇಂಡಿಯಾವನ್ನು ಮುನ್ನಡೆಸಿರುವುದು ಹೆಮ್ಮೆಯ ವಿಷಯ. ಆದರೆ ಕೆಲವೊಂದು ವಿಷಯದಲ್ಲಿ ನಾವು ಸರಿಯಾದ ದೂರದೃಷ್ಟಿ ಹೊಂದಿರಬೇಕಾಗುತ್ತದೆ. ಅದರಂತೆ ಇದು ಸರಿಯಾದ ಸಮಯ ಎಂದು ನಾನು ಅಂದುಕೊಂಡಿದ್ದೀನಿ. ಏಕೆಂದರೆ ಕೆಲಸ ಹೊರೆಯಿಂದಾಗಿ ಬ್ಯಾಟಿಂಗ್ ಕಡೆ ಗಮನ ಕೊಡಲಾಗುತ್ತಿಲ್ಲ. ಆರೇಳು ವರ್ಷದಿಂದ ನನ್ನಲ್ಲಿ ಕೆಲಸದ ಒತ್ತಡ ಹೆಚ್ಚಾಗಿದೆ. ಇದೀಗ ಟೀಮ್ ಇಂಡಿಯಾ ಬಲಿಷ್ಠ ತಂಡವಾಗಿದೆ. ಇಂತಹ ಸಮಯದಲ್ಲಿ ನಾನು ನಾಯಕತ್ವಕ್ಕೆ ರಾಜೀನಾಮೆ ನೀಡಿದರೂ ಅದು ತಂಡದ ಮೇಲೆ ಪರಿಣಾಮ ಬೀರುವುದಿಲ್ಲ. ಹೀಗಾಗಿ ಇದುವೇ ಸರಿಯಾದ ಸಮಯ ಎಂದು ಭಾವಿಸಿದೆ.

ಅದರಂತೆ ನಾಯಕತ್ವ ರಾಜೀನಾಮೆ ನೀಡಿದ್ದೇನೆ. ಆ ಮೂಲಕ ಮುಂದಿನ ದಿನಗಳಲ್ಲಿ ಬ್ಯಾಟಿಂಗ್​ನತ್ತ ಹೆಚ್ಚು ಗಮನಹರಿಸಲಿದ್ದೇನೆ ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ. ಇದೇ ವೇಳೆ ಮುಂದಿನ ದಿನಗಳಲ್ಲೂ ನಾನು ಆಕ್ರಮಣಕಾರಿ ಆಟವನ್ನೇ ಆಡಲಿದ್ದೇನೆ ಎಂದು ತಿಳಿಸಿದ ಕೊಹ್ಲಿ, ಯಾವಾಗ ನಾನು ಅಗ್ರೆಸಿವ್ ಆಟವನ್ನು ನಿಲ್ಲಿಸುತ್ತೇನೆ ಅಂದು ನಾನು ಕ್ರಿಕೆಟ್ ಆಡುವುದನ್ನು ಬಿಡುತ್ತೇನೆ ಎಂದರು. ಈ ಮೂಲಕ ನಾಯಕನಲ್ಲದಿದ್ದರೂ ಮುಂದಿನ ದಿನಗಳಲ್ಲಿ ಮೈದಾನದಲ್ಲಿ ತನ್ನ ​ಆಕ್ರಮಣಕಾರಿ ಆಟವನ್ನು ಅಭಿಮಾನಿಗಳು ನೋಡಬಹುದು ಎಂಬುದನ್ನು ಕೊಹ್ಲಿ ತಿಳಿಸಿದರು.

ಪ್ರಸ್ತುತ ಟಿ20 ಕ್ರಿಕೆಟ್​ನ ಟಾಪ್ ರನ್​ ಸ್ಕೋರರ್ ಆಗಿರುವ ವಿರಾಟ್ ಕೊಹ್ಲಿ, ಮತ್ತೆ ಹಳೆಯ ಫಾರ್ಮ್​ಗೆ ಮರಳುವ ವಿಶ್ವಾಸದಲ್ಲಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಟಿ20ಯಲ್ಲಿ ಕೊಹ್ಲಿ ಅಬ್ಬರ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಈ ಜೋಡಿ ವಿಶ್ವಕಪ್ ಗೆದ್ದು ಕೊಡಲಿದೆ ಎಂದ ಮಾಜಿ ಕ್ರಿಕೆಟಿಗ

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಹೀಗಿದೆ

ಇದನ್ನೂ ಓದಿ: India T20 squad: ಟೀಮ್ ಇಂಡಿಯಾಗೆ ಹೊಸ ನಾಯಕ: ಯುವ ಪಡೆಯನ್ನು ಪ್ರಕಟಿಸಿದ ಬಿಸಿಸಿಐ

(Virat Kohli explains why he quit India’s T20I captaincy)

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?