AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ವಿರಾಟ್ ಕೊಹ್ಲಿ ಅಭಿಮಾನಿಯನ್ನು ಜೈಲಿಗಟ್ಟಿದ ಕೋಲ್ಕತ್ತಾ ಪೊಲೀಸರು

Virat Kohli Fan Arrested: ಐಪಿಎಲ್ 2025 ರ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿತು. ಆರ್​ಸಿಬಿ ಪರ ವಿರಾಟ್ ಕೊಹ್ಲಿ 31 ಎಸೆತಗಳಲ್ಲಿ 59 ರನ್ ಗಳಿಸಿ ಅದ್ಭುತ ಇನ್ನಿಂಗ್ಸ್ ಆಡಿದರು. ಅವರು ಬ್ಯಾಟಿಂಗ್ ಮಾಡುತ್ತಿದ್ದಾಗ, ಅಭಿಮಾನಿಯೊಬ್ಬ ಮೈದಾನಕ್ಕೆ ಪ್ರವೇಶಿಸಿದ್ದು, ಈಗ ಆತನನ್ನು ಬಂಧಿಸಲಾಗಿದೆ.

IPL 2025: ವಿರಾಟ್ ಕೊಹ್ಲಿ ಅಭಿಮಾನಿಯನ್ನು ಜೈಲಿಗಟ್ಟಿದ ಕೋಲ್ಕತ್ತಾ ಪೊಲೀಸರು
Virat Kohli
ಪೃಥ್ವಿಶಂಕರ
|

Updated on:Mar 23, 2025 | 4:54 PM

Share

ಐಪಿಎಲ್ 2025 (IPL 2025) ರ ಮೊದಲ ಪಂದ್ಯ ಮಾರ್ಚ್ 22 ರಂದು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಈ ಪಂದ್ಯವನ್ನು ವೀಕ್ಷಿಸಲು ಸಾವಿರಾರು ಅಭಿಮಾನಿಗಳು ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೆಕೆಆರ್ ತಂಡವನ್ನು ಮಣಿಸಿದ ಬೆಂಗಳೂರು ತಂಡವು ಭರ್ಜರಿ ಗೆಲುವು ಸಾಧಿಸಿತು. ಆರ್​ಸಿಬಿ ಪರ ವಿರಾಟ್ ಕೊಹ್ಲಿ (Virat Kohli) ಕೂಡ ಅದ್ಭುತ ಅರ್ಧಶತಕದ ಇನ್ನಿಂಗ್ಸ್ ಆಡಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಆದರೆ ಈ ಪಂದ್ಯದಲ್ಲಿ ಭದ್ರತಾ ಲೋಪ ಎಸಗಿದ ಕಿಂಗ್ ಕೊಹ್ಲಿಯ ಅಭಿಮಾನಿಯನ್ನು ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಸೆಕ್ಷನ್ 329 ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

ಪೊಲೀಸರ ಈ ಕ್ರಮಕ್ಕೆ ಕಾರಣವೇನು?

ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್ ನೀಡಿದ 175 ರನ್​ಗಳ ಬೆನ್ನಟ್ಟಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಮಾಡಿ ಕೇವಲ 31 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. 13 ನೇ ಓವರ್‌ನ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಕೊಹ್ಲಿ ಅರ್ಧಶತಕ ಪೂರೈಸಿದ ತಕ್ಷಣ, ಅವರ ಅಭಿಮಾನಿಯೊಬ್ಬರು ಬ್ಯಾರಿಕೇಡ್ ಅನ್ನು ಮುರಿದು ಮೈದಾನಕ್ಕೆ ಪ್ರವೇಶಿಸಿದರು. ಕೊಹ್ಲಿ ಇರುವ ಕಡೆಗೆ ಓಡಿ ಬಂದ ಆತ, ಕೊಹ್ಲಿಯ ಕಾಲಿಗೆ ಬಿದ್ದು, ಆ ನಂತರ ಅವರನ್ನು ಅಪ್ಪಿಕೊಂಡನು. ಆದರೆ, ಅಷ್ಟೊತ್ತಿಗೆ ಭದ್ರತಾ ಸಿಬ್ಬಂದಿ ಬಂದು ಅಭಿಮಾನಿಯನ್ನು ಮೈದಾನದಿಂದ ಹೊರಗೆ ಕಳೆದೊಯ್ದಿದ್ದರು.

ಮೈದಾನದಲ್ಲಿ ಭದ್ರತಾ ಲೋಪವನ್ನು ಎಸಗಿ ಕೊಹ್ಲಿಯನ್ನು ತಬ್ಬಿಕೊಂಡಿದ್ದ ಅಭಿಮಾನಿಯನ್ನು ಕೋಲ್ಕತ್ತಾ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ವಾಸ್ತವವಾಗಿ ಅಭಿಮಾನಿಯ ಈ ನಡೆ ಕ್ರೀಡಾಂಗಣದಲ್ಲಿ ಭದ್ರತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿತು. ಆದರೆ ಕೊಹ್ಲಿಯ ಈ ಅಭಿಮಾನಿಗೆ ಸಾಮಾಜಿಕ ಮಾಧ್ಯಮದಲ್ಲಿ ಇತರ ಅಭಿಮಾನಿಗಳಿಂದ ಬೆಂಬಲ ಸಿಕ್ಕಿತು. ಕೊಹ್ಲಿ ಅವರನ್ನು ಭೇಟಿ ಮಾಡಲು ಇಂತಹ ಹೆಜ್ಜೆ ಇಟ್ಟಿರುವುದನ್ನು ನೋಡಿ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಕೂಡ ಆಶ್ಚರ್ಯಚಕಿತರಾಗಿದಲ್ಲದೆ, ‘ವಿರಾಟ್ ಕೊಹ್ಲಿಗೆ ಅಪಾರ ಅಭಿಮಾನಿಗಳಿದ್ದಾರೆ’ ಎಂತಲೂ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದರು.

ಕೊಹ್ಲಿ ಅರ್ಧಶತಕ ಸಿಡಿಸುತ್ತಿದ್ದಂತೆ ಮೈದಾನಕ್ಕೆ ನುಗ್ಗಿ ಕಾಲಿಗೆ ಬಿದ್ದ ಅಭಿಮಾನಿ; ವಿಡಿಯೋ ನೋಡಿ

ಕೊಹ್ಲಿ ಅದ್ಭುತ ಇನ್ನಿಂಗ್ಸ್

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು 175 ರನ್‌ ಪೇರಿಸಿತು. ಗುರಿ ಬೆನ್ನಟ್ಟಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಅದ್ಭುತವಾಗಿ ಬ್ಯಾಟಿಂಗ್ ಮಾಡಿ ಮೊದಲ ವಿಕೆಟ್‌ಗೆ 95 ರನ್‌ಗಳ ಪಾಲುದಾರಿಕೆಯನ್ನು ಮಾಡಿದರು. ಸಾಲ್ಟ್ ಔಟಾದ ನಂತರವೂ ಆಟ ಮುಂದುವರೆಸಿದ ಕೊಹ್ಲಿ ಕೊನೆಯವರೆಗೂ ಇದ್ದು, 36 ಎಸೆತಗಳಲ್ಲಿ 163 ಸ್ಟ್ರೈಕ್ ರೇಟ್‌ನಲ್ಲಿ ಅಜೇಯ 59 ರನ್ ಗಳಿಸಿ ಇನ್ನೂ 22 ಎಸೆತಗಳು ಬಾಕಿ ಇರುವಾಗಲೇ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:49 pm, Sun, 23 March 25

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು