AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈದಾನಕ್ಕೆ ನುಗ್ಗಿದ ವಿರಾಟ್ ಕೊಹ್ಲಿ ಫ್ಯಾನ್: ಅರೆ ಸೇನಾ ಪಡೆಯನ್ನು ಕರೆಸಿದ DDCA

Virat Kohli Fans: ವಿರಾಟ್ ಕೊಹ್ಲಿ ಬರೋಬ್ಬರಿ 12 ವರ್ಷಗಳ ಬಳಿಕ ರಣಜಿ ಟೂರ್ನಿಯಲ್ಲಿ ಕಣಕ್ಕಿಳಿದಿದ್ದಾರೆ. 2012 ರಲ್ಲಿ ಕೊನೆಯ ಬಾರಿ ರಣಜಿ ಪಂದ್ಯವಾಡಿದ್ದ ಕೊಹ್ಲಿ ಇದೀಗ ದಶಕದ ಬಳಿಕ ದೆಹಲಿ ಪರ ಕಣಕ್ಕಿಳಿದಿದ್ದಾರೆ. ಹೀಗಾಗಿಯೇ ಕೊಹ್ಲಿ ರಣಜಿಯಾಟವನ್ನು ವೀಕ್ಷಿಸಲು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂಗೆ ಪ್ರೇಕ್ಷಕರ ಮಹಾಸಾಗರವೇ ಹರಿದು ಬಂದಿದೆ.

ಮೈದಾನಕ್ಕೆ ನುಗ್ಗಿದ ವಿರಾಟ್ ಕೊಹ್ಲಿ ಫ್ಯಾನ್: ಅರೆ ಸೇನಾ ಪಡೆಯನ್ನು ಕರೆಸಿದ DDCA
Virat Kohli with Fan
ಝಾಹಿರ್ ಯೂಸುಫ್
|

Updated on: Jan 30, 2025 | 1:20 PM

Share

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಗ್ರೂಪ್-ಡಿ ಪಂದ್ಯದಲ್ಲಿ ರೈಲ್ವೇಸ್ ಮತ್ತು ದೆಹಲಿ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ದೆಹಲಿ ಪರ ವಿರಾಟ್ ಕೊಹ್ಲಿ ಕಣಕ್ಕಿಳಿದಿರುವುದರಿಂದ ಸ್ಟೇಡಿಯಂನಲ್ಲಿ ಪ್ರೇಕ್ಷಕರು ಕಿಕ್ಕಿರಿದು ತುಂಬಿದಿದ್ದಾರೆ. ಹೀಗೆ ಕಿಂಗ್ ಕೊಹ್ಲಿಯ ಆಟವನ್ನು ಕಣ್ತುಂಬಿಕೊಳ್ಳಲು ಆಗಮಿಸಿದ ಅಭಿಮಾನಿಗಳಲ್ಲಿ ಒಬ್ಬರು ಮೈದಾನಕ್ಕೆ ನುಗ್ಗಿದ್ದಾರೆ.

ಭದ್ರತಾ ಸಿಬ್ಬಂದಿಗಳ ಕಣ್ತಪ್ಪಿಸಿ ಮೈದಾನಕ್ಕೆ ನುಗ್ಗಿದ ಅಭಿಮಾನಿಯು ನೇರವಾಗಿ ವಿರಾಟ್ ಕೊಹ್ಲಿ ಬಳಿ ಓಡಿ ಬಂದಿದ್ದಾರೆ. ಅಲ್ಲದೆ ಕೊಹ್ಲಿಯ ಕಾಲಿಗೆರಗಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಅಷ್ಟರಲ್ಲಿ ಮೈದಾನಕ್ಕೆ ಆಗಮಿಸಿದ ಭದ್ರತಾ ಸಿಬ್ಬಂದಿಗಳು ಯುವಕನನ್ನು ವಶಕ್ಕೆ ಪಡೆದಿದ್ದು, ಈ ಮೂಲಕ ಮೈದಾನದಿಂದ ಹೊರಗೆ ಕರೆದುಕೊಂಡು ಹೋದರು.

ಮೈದಾನಕ್ಕೆ ನುಗ್ಗಿದ ಅಭಿಮಾನಿಯ ವಿಡಿಯೋ:

ಅರೆ ಸೇನಾ ಪಡೆ ಕಣ್ಗಾವಲು:

ವಿರಾಟ್ ಕೊಹ್ಲಿಯ ರಣಜಿಯಾಟವನ್ನು ವೀಕ್ಷಿಸಲು ಪ್ರೇಕ್ಷಕರು ಸಾಗರದಂತೆ ಹರಿದು ಬಂದಿದ್ದು, ಹೀಗಾಗಿ ದೆಹಲಿ ಕ್ರಿಕೆಟ್ ಬೋರ್ಡ್ ಹೆಚ್ಚಿನ ಭದ್ರತೆಗಾಗಿ ಅರೆ ಸೇನಾಪಡೆಯನ್ನು ಕರೆಸಿಕೊಂಡಿದೆ. ಈ ಮೂಲಕ ಅಭಿಮಾನಿಗಳು ಮೈದಾನಕ್ಕೆ ನುಗ್ಗದ್ದಂತೆ ಕಟ್ಟೆಚ್ಚರವಹಿಸಲು ಸೂಕ್ತ ಭದ್ರತೆಯನ್ನು ಒದಗಿಸಲಾಗಿದೆ.

ಏಕೆಂದರೆ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವುದರಿಂದ ಪ್ರೇಕ್ಷಕರು ಮೈದಾನಕ್ಕೆ ನುಗ್ಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಬೌಂಡರಿ ಲೈನ್​ ಬಳಿ ಪ್ಯಾರಾ ಮಿಲಿಟರಿ ಪಡೆಯನ್ನು ನಿಯೋಜಿಸಲಾಗಿದ್ದು, ಈ ಮೂಲಕ ಪಂದ್ಯ ಸರಾಗವಾಗಿ ನಡೆಯುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ.

ಟಾಸ್ ಗೆದ್ದ ದೆಹಲಿ:

ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ದೆಹಲಿ ತಂಡದ ನಾಯಕ ಆಯುಷ್ ಬದೋನಿ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಇನಿಂಗ್ಸ್ ಆರಂಭಿಸಿರುವ ರೈಲ್ವೇಸ್ ತಂಡವು 35 ಓವರ್​ಗಳ ಮುಕ್ತಾಯದ ವೇಳೆ 5 ವಿಕೆಟ್ ಕಳೆದುಕೊಂಡು 112 ರನ್ ಕಲೆಹಾಕಿದೆ.

ದೆಹಲಿ (ಪ್ಲೇಯಿಂಗ್ XI): ಅರ್ಪಿತ್ ರಾಣಾ, ಸನತ್ ಸಾಂಗ್ವಾನ್, ವಿರಾಟ್ ಕೊಹ್ಲಿ, ಯಶ್ ಧುಲ್, ಆಯುಷ್ ಬದೋನಿ (ನಾಯಕ), ಪ್ರಣವ್ ರಾಜುವಂಶಿ (ವಿಕೆಟ್ ಕೀಪರ್), ಸುಮಿತ್ ಮಾಥುರ್, ಶಿವಂ ಶರ್ಮಾ, ನವದೀಪ್ ಸೈನಿ, ಮನಿ ಗ್ರೇವಾಲ್, ಸಿದ್ಧಾಂತ್ ಶರ್ಮಾ.

ಇದನ್ನೂ ಓದಿ: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ವಿಶೇಷ ದಾಖಲೆ ಬರೆದ ಫಾಫ್ ಡುಪ್ಲೆಸಿಸ್

ರೈಲ್ವೇಸ್ (ಪ್ಲೇಯಿಂಗ್ XI): ಅಂಚಿತ್ ಯಾದವ್, ವಿವೇಕ್ ಸಿಂಗ್, ಸೂರಜ್ ಅಹುಜಾ (ನಾಯಕ), ಉಪೇಂದ್ರ ಯಾದವ್ (ವಿಕೆಟ್ ಕೀಪರ್), ಮೊಹಮ್ಮದ್ ಸೈಫ್, ಭಾರ್ಗವ್ ಮೆರಾಯ್, ಕರ್ಣ್ ಶರ್ಮಾ, ರಾಹುಲ್ ಶರ್ಮಾ, ಹಿಮಾಂಶು ಸಾಂಗ್ವಾನ್, ಅಯಾನ್ ಚೌಧರಿ, ಕುನಾಲ್ ಯಾದವ್.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ