AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಬಗ್ಗೆ ಗೇಲಿ ಮಾಡಿದಕ್ಕೆ ರೋಹಿತ್ ಶರ್ಮಾ ಅಭಿಮಾನಿಯನ್ನು ಕೊಂದ ಕೊಹ್ಲಿ ಫ್ಯಾನ್..!

Virat Kohli - Rohit Sharma: ತಮಿಳುನಾಡಿನ ಅರಿಯಾಲೂರು ಜಿಲ್ಲೆಯ ಪೊಯ್ಯೂರು ಗ್ರಾಮದರಾಗಿರುವ ವಿಘ್ನೇಶ್ ಹಾಗೂ ಧರ್ಮರಾಜ್ ಇಬ್ಬರೂ ಅಪ್ಪಟ ಕ್ರಿಕೆಟ್ ಪ್ರೇಮಿಗಳಾಗಿದ್ದರು.

RCB ಬಗ್ಗೆ ಗೇಲಿ ಮಾಡಿದಕ್ಕೆ ರೋಹಿತ್ ಶರ್ಮಾ ಅಭಿಮಾನಿಯನ್ನು ಕೊಂದ ಕೊಹ್ಲಿ ಫ್ಯಾನ್..!
Rohit Sharma- Virat kohli
TV9 Web
| Edited By: |

Updated on: Oct 15, 2022 | 3:21 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ವಿರಾಟ್‌ ಕೊಹ್ಲಿ (Virat Kohli) ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದಕ್ಕೆ ತನ್ನ ಗೆಳೆಯನನ್ನೇ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ. ಇಲ್ಲಿ ಕೊಲೆ ಮಾಡಿದ 21 ವರ್ಷದ ಎಸ್​. ಧರ್ಮರಾಜ್ ವಿರಾಟ್ ಕೊಹ್ಲಿಯ ಅಪ್ಪಟ ಅಭಿಮಾನಿಯಾಗಿದ್ದರೆ, ದುರಂತ ಅಂತ್ಯ ಕಂಡ ವಿಘ್ನೇಶ್ ರೋಹಿತ್ ಶರ್ಮಾ (Rohit Sharma) ಅವರ ಅಭಿಮಾನಿ.

ತಮಿಳುನಾಡಿನ ಅರಿಯಾಲೂರು ಜಿಲ್ಲೆಯ ಪೊಯ್ಯೂರು ಗ್ರಾಮದರಾಗಿರುವ ವಿಘ್ನೇಶ್ ಹಾಗೂ ಧರ್ಮರಾಜ್ ಇಬ್ಬರೂ ಅಪ್ಪಟ ಕ್ರಿಕೆಟ್ ಪ್ರೇಮಿಗಳಾಗಿದ್ದರು. ಅದರಲ್ಲೂ ಧರ್ಮರಾಜ್ ಆರ್​ಸಿಬಿ ತಂಡದ ಪಕ್ಕಾ ಅಭಿಮಾನಿ. ಮತ್ತೊಂದೆಡೆ ವಿಘ್ನೇಶ್ ಹಿಟ್​​ಮ್ಯಾನ್ ಹಾಗೂ ಮುಂಬೈ ಇಂಡಿಯನ್ಸ್ ತಂಡವನ್ನು ಇಷ್ಟಪಡುತ್ತಿದ್ದರು.

ಈ ಇಬ್ಬರು ಸ್ನೇಹಿತರಉ ಮಂಗಳವಾರ ರಾತ್ರಿ ಮಲ್ಲೂರು ಬಳಿಯ ಸಿಡ್ಕೊ ಇಂಡಸ್ಟ್ರಿಯಲ್ ಎಸ್ಟೇಟ್ ಪ್ರದೇಶದಲ್ಲಿ ಮದ್ಯ ಸೇವಿಸಿ ಪಾರ್ಟಿ ಮಾಡಿದ್ದರು. ಇದೇ ವೇಳೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ನಡುವೆ ಯಾರು ಉತ್ತಮ ಆಟಗಾರ ಎಂಬ ಚರ್ಚೆ ಶುರುವಾಗಿದೆ. ಈ ತರ್ಕವು ವಿಪರೀತ ಹಂತಕ್ಕೆ ಹೋಗಿ ಇಬ್ಬರು ಗಲಾಟೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

ಇದೇ ವೇಳೆ ವಿಘ್ನೇಶ್ ವಿರಾಟ್ ಕೊಹ್ಲಿ ಹಾಗೂ ಆರ್​ಸಿಬಿ ತಂಡವನ್ನು ಅಪಹಾಸ್ಯ ಮಾಡಿದ್ದರು. ಇದರಿಂದ ಕುಪಿತಗೊಂಡ ಧರ್ಮರಾಜ್ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಬ್ಯಾಟ್​ನಿಂದ ತಲೆಗೆ ಹೊಡೆದಿದ್ದ. ಇದರಿಂದ ಗಂಭೀರ ಗಾಯಗೊಂಡ ವಿಘ್ನೇಶ್ ಮೃತಪಟ್ಟಿದ್ದಾರೆ. ಈ ಘಟನೆ ಬಳಿಕ ಪರಾರಿಯಾಗಿದ್ದ ಧರ್ಮರಾಜ್​ರನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಒಟ್ಟಿನಲ್ಲಿ ಅಭಿಮಾನವು ಅತಿರೇಕಕ್ಕೆ ಹೋಗಿ ಇದೀಗ ಓರ್ವ ಜೈಲು ಪಾಲಾದರೆ, ಮತ್ತೋರ್ವ ದುರಂತ ಅಂತ್ಯ ಕಾಣುವಂತಾಗಿದೆ.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ