AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG 1st Test: ರೋಹಿತ್ ಶರ್ಮಾ ಬ್ಯಾಟಿಂಗ್ ಮಾಡುತ್ತಿರುವಾಗ ಮೈದಾನಕ್ಕೆ ಓಡಿ ಬಂದ ಕೊಹ್ಲಿ ಅಭಿಮಾನಿ: ಏನಾಯಿತು ನೋಡಿ

Rohit Sharma and Virat Kohli Fan ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದ ನಡುವೆ ವಿರಾಟ್ ಕೊಹ್ಲಿ ಅಭಿಮಾನಿಯೊಬ್ಬರು ಭದ್ರತಾ ಕ್ರಮಗಳನ್ನು ಮುರಿದು ರೋಹಿತ್ ಶರ್ಮಾ ಅವರನ್ನು ಭೇಟಿ ಮಾಡಲು ಮೈದಾನಕ್ಕೆ ಪ್ರವೇಶಿಸಿದರು. ರೋಹಿತ್ ಅವರ ಪಾದಗಳಿಗೆ ನಮಸ್ಕರಿಸಿದರು. ಇದರ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

IND vs ENG 1st Test: ರೋಹಿತ್ ಶರ್ಮಾ ಬ್ಯಾಟಿಂಗ್ ಮಾಡುತ್ತಿರುವಾಗ ಮೈದಾನಕ್ಕೆ ಓಡಿ ಬಂದ ಕೊಹ್ಲಿ ಅಭಿಮಾನಿ: ಏನಾಯಿತು ನೋಡಿ
Rohit Sharma and Kohli Fan
Vinay Bhat
|

Updated on:Jan 26, 2024 | 9:18 AM

Share

ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಿನ ಮೊದಲ ಟೆಸ್ಟ್ ಪಂದ್ಯವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಎರಡನೇ ದಿನದಾಟ ಶುರುವಾಗಿದೆ. ಗುರುವಾರ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್ ಮೊದಲ ಇನಿಂಗ್ಸ್​ನಲ್ಲಿ ಕೇವಲ 246 ರನ್ ಗಳಿಗೆ ಆಲೌಟ್ ಆಯಿತು. ಆ ಬಳಿಕ ತನ್ನ ಮೊದಲ ಇನ್ನಿಂಗ್ಸ್ ಶುರುಮಾಡಿದ ಟೀಮ್ ಇಂಡಿಯಾಕ್ಕೆ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಉತ್ತಮ ಆರಂಭ ಒದಗಿಸಿದರು. ಆದರೆ, ಇದರ ನಡುವೆ ಅನಿರೀಕ್ಷಿತ ಘಟನೆಯೊಂದು ನಡೆಯಿತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಅಭಿಮಾನಿಯೊಬ್ಬರು ಭದ್ರತಾ ಕ್ರಮಗಳನ್ನು ಉಲ್ಲಂಘಿಸಿ ರೋಹಿತ್ ಶರ್ಮಾ ಅವರನ್ನು ಭೇಟಿ ಮಾಡಲು ಮೈದಾನಕ್ಕೆ ಪ್ರವೇಶಿಸಿದ್ದಾರೆ. ರೋಹಿತ್ ಶರ್ಮಾ ಬಳಿ ತೆರಳಿ ಅವರ ಪಾದಗಳಿಗೆ ನಮಸ್ಕರಿಸಿದ್ದಾರೆ. ಅಭಿಮಾನಿ ವಿರಾಟ್ ಕೊಹ್ಲಿ ಅವರ ಜೆರ್ಸಿ ಸಂಖ್ಯೆ 18 ಅನ್ನು ಧರಿಸಿದ್ದರು. ಜೆರ್ಸಿಯಲ್ಲಿ ಕೊಹ್ಲಿ ಮತ್ತು 18 ನಂಬರ್ ಬರೆಯಲಾಗಿತ್ತು. ರೋಹಿತ್ ಅವರು ವಿರಾಟ್ ಅಭಿಮಾನಿಗೆ ಬೇಸರ ಮಾಡಲಿಲ್ಲ. ಕಾಲುಗಳನ್ನು ಮುಟ್ಟಲು ಅನುಮತಿ ನೀಡಿದರು. ಆದರೆ ಕ್ಷಣಮಾತ್ರದಲ್ಲಿ ಭದ್ರತಾ ಸಿಬ್ಬಂದಿ ಸ್ಪಂದಿಸಿ ಪರಿಸ್ಥಿತಿಯನ್ನು ಸರಿಪಡಿಸಿದರು. ಈ ಘಟನೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದ ಕೆಲಕಾಲ ಆಟಕ್ಕೆ ಕೂಡ ಅಡ್ಡಿಯಾಯಿತು.

ಇದನ್ನೂ ಓದಿ
Image
ಔಟಾದ ನಂತರ ವಿಚಿತ್ರವಾಗಿ ನಗಲಾರಂಭಿಸಿದ ಬೆನ್ ಸ್ಟೋಕ್ಸ್: ವಿಡಿಯೋ ನೋಡಿ
Image
ಜೈಸ್ವಾಲ್ ಮೇಲೆ ನಿರೀಕ್ಷೆ: ರೋಚಕತೆ ಸೃಷ್ಟಿಸಿದ ಇಂದಿನ ಎರಡನೇ ದಿನದಾಟ
Image
ಟಿ20 ರ‍್ಯಾಂಕಿಂಗ್​ನಲ್ಲಿ 39 ಸ್ಥಾನಗಳ ಮುಂಬಡ್ತಿ ಪಡೆದ ರಿಂಕು ಸಿಂಗ್..!
Image
6ನೇ ಸ್ಥಾನದಿಂದ ಜಾರಿದ ಕೊಹ್ಲಿ; ಟಾಪ್ 10 ರಿಂದ ರೋಹಿತ್ ಔಟ್!

ವಿರಾಟ್ ಕೊಹ್ಲಿ ಮೊದಲ ಎರಡು ಟೆಸ್ಟ್‌ಗಳಲ್ಲಿ ಆಡುವುದಿಲ್ಲ. ವೈಯಕ್ತಿಕ ಕಾರಣದಿಂದ ಮೊದಲ ಮತ್ತು ಎರಡನೇ ಟೆಸ್ಟ್​ನಿಂದ ಹೊರಗುಳಿಯುತ್ತೇನೆ ಎಂದು ಬಿಸಿಸಿಐಗೆ ತಿಳಿಸಿದ್ದಾರೆ. ಅಲ್ಲದೆ, ಬಿಸಿಸಿಎ ಕೂಡ ಟ್ವೀಟ್ ಮಾಡುವ ಮೂಲಕ ಈ ಬಗ್ಗೆ ಮಾಹಿತಿ ನೀಡಿದೆ. ಇನ್ನುಳಿದ ಮೂರು ಟೆಸ್ಟ್ ಪಂದ್ಯಗಳಲ್ಲಿ ಆಡುತ್ತಾರಾ ಎಂಬುದು ನೋಡಬೇಕಿದೆ.

ICC Awards 2023: ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿ ಗೆದ್ದ ಉಸ್ಮಾನ್ ಖವಾಜಾ..!

ಪಂದ್ಯದ ಕುರಿತು ಮಾತನಾಡುತ್ತಾ, ಇಂಗ್ಲೆಂಡ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ ಭಾರತದ ಸ್ಪಿನ್ನರ್‌ಗಳಾದ ರವಿ ಅಶ್ವಿನ್, ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ಬೌಲಿಂಗ್​ಗೆ ತತ್ತರಿಸಿ ಹೋಯಿತು. ಇಂಗ್ಲೆಂಡ್ ಪರ ಬೆನ್ ಸ್ಟೋಕ್ಸ್ ಅತ್ಯುತ್ತಮ ಇನ್ನಿಂಗ್ಸ್ ಆಡಿದರು. ಅವರು 70 ರನ್ ಗಳಿಸಿ ಔಟಾದರು. ಇದರೊಂದಿಗೆ ಇಂಗ್ಲೆಂಡ್ 246 ರನ್‌ಗಳಿಗೆ ಆಲೌಟ್ ಆಯಿತು.

ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತಕ್ಕೆ ಯಶಸ್ವಿ ಜೈಸ್ವಾಲ್ ಹಾಗೂ ನಾಯಕ ರೋಹಿತ್ ಶರ್ಮಾ (24) ಸ್ಫೋಟಕ ಆರಂಭ ನೀಡಿದರು (80 ರನ್​ಗಳ ಜೊತೆಯಾಟ). ಆರಂಭದಿಂದಲೂ ಹೊಡಿಬಡಿ ಆಟಕ್ಕೆ ಮುಂದಾದ ಜೈಸ್ವಾಲ್ 70 ಎಸೆತಗಳಲ್ಲಿ 9 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಅಜೇಯ 70 ರನ್ ಕಲೆಹಾಕಿದ್ದಾರೆ. ಗಿಲ್ ಅಜೇಯ 14 ರನ್ ಗಳಿಸಿ ಇಂದಿಗೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:17 am, Fri, 26 January 24

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್