Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿ ಔಟಾಗಿದಕ್ಕೆ ಬಾಲಿವುಡ್ ನಟನಿಗೆ ಬೈಗುಳ..!

IPL 2025 RCB vs GT: ಐಪಿಎಲ್ 2025ರ 14ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 169 ರನ್ ಕಲೆಹಾಕಿದರೆ, ಗುಜರಾತ್ ಟೈಟಾನ್ಸ್ ತಂಡವು ಈ ಗುರಿಯನ್ನು ಕೇವಲ 17.5 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಗುಜರಾತ್ ಟೈಟಾನ್ಸ್ 8 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

Virat Kohli: ವಿರಾಟ್ ಕೊಹ್ಲಿ ಔಟಾಗಿದಕ್ಕೆ ಬಾಲಿವುಡ್ ನಟನಿಗೆ ಬೈಗುಳ..!
Virat Kohli
Follow us
ಝಾಹಿರ್ ಯೂಸುಫ್
|

Updated on: Apr 03, 2025 | 9:04 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರ 14ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಮುಗ್ಗರಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡಕ್ಕೆ ಉತ್ತಮ ಆರಂಭ ಒದಗಿಸುವಲ್ಲಿ ವಿರಾಟ್ ಕೊಹ್ಲಿ (Virat Kohli) ವಿಫಲರಾಗಿದ್ದರು. ಅದರಲ್ಲೂ ಪವರ್​ಪ್ಲೇನಲ್ಲೇ ವಿಕೆಟ್ ಒಪ್ಪಿಸಿ ಕಿಂಗ್ ಕೊಹ್ಲಿ ನಿರಾಸೆ ಮೂಡಿಸಿದರು.

ಹೀಗೆ 2ನೇ ಓವರ್​ನ 4ನೇ ಎಸೆತದಲ್ಲಿ ವಿರಾಟ್ ಕೊಹ್ಲಿಯನ್ನು ಔಟ್ ಮಾಡಿದ್ದು ಅರ್ಷದ್ ಖಾನ್. ಯುವ ಎಡಗೈ ವೇಗಿ ಕಿಂಗ್ ಕೊಹ್ಲಿಯ ವಿಕೆಟ್ ಪಡೆಯುತ್ತಿದ್ದಂತೆ ಬೈಗುಳ ತಿಂದದ್ದು ಬಾಲಿವುಡ್ ನಟ ಎಂಬುದೇ ಇಲ್ಲಿ ಅಚ್ಚರಿ.

ಇದನ್ನೂ ಓದಿ
Image
ಯುಜ್ವೇಂದ್ರ ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದುವೇ ಅಸಲಿ ಕಾರಣ
Image
RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್
Image
David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!
Image
VIDEO: ಎಂಎಸ್ ಧೋನಿ ಎಂಟ್ರಿಗೆ ಕಿವಿ ಮುಚ್ಚಿ ಕೂತ ನೀತಾ ಅಂಬಾನಿ

ಅರ್ಷದ್ vs ಅರ್ಷದ್:

ಅರ್ಷದ್ ಖಾನ್ ವಿಕೆಟ್ ಕಬಳಿಸುತ್ತಿದ್ದಂತೆ ವಿರಾಟ್ ಕೊಹ್ಲಿ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್​ಗಳ ಮಹಾಪೂರ ಹರಿಸಿದ್ದಾರೆ. ಆದರೆ ಅದು ಬಾಲಿವುಡ್ ನಟ ಅರ್ಷದ್ ವಾರ್ಸಿ ವಿರುದ್ಧ ಎಂಬುದೇ ಇಲ್ಲಿ ಟ್ವಿಸ್ಟ್.

ಅರ್ಷದ್ ವಾರ್ಸಿ ಇನ್​ಸ್ಟಾ ಖಾತೆಯಲ್ಲಿ ಕಂಡುಬಂದ ಕಾಮೆಂಟ್​ಗಳು:

ಅಂದರೆ ಗುಜರಾತ್ ಟೈಟಾನ್ಸ್ ವೇಗಿ ಅರ್ಷದ್ ಖಾನ್ ಎಂದು ತಪ್ಪಾಗಿ ಅರ್ಥೈಸಿ ವಿರಾಟ್ ಕೊಹ್ಲಿ ಫ್ಯಾನ್ಸ್ ನಟ ಅರ್ಷದ್ ವಾರ್ಸಿ ಅವರ ಸೋಷಿಯಲ್ ಮೀಡಿಯಾ ಖಾತೆಗೆ ದಾಂಗುಡಿಯಿಟ್ಟಿದ್ದಾರೆ. ಅಲ್ಲದೆ ಕೊಹ್ಲಿಯನ್ನು ಔಟ್ ಮಾಡಿದ್ದೇಕೆ ಎಂದು ಬೈಗುಳಗಳ ಸುರಿಮಳೆಗೈದಿದ್ದಾರೆ.

Arshad Warsi

ಅರ್ಷದ್ ವಾರ್ಸಿ ಬೈದ ವಿರಾಟ್ ಕೊಹ್ಲಿ ಫ್ಯಾನ್ಸ್

ಆದರೆ ಅತ್ತ ಅರ್ಷದ್ ವಾರ್ಸಿಗೂ ಕ್ರಿಕೆಟ್​ಗೂ ಯಾವುದೇ ಸಂಬಂಧವಿಲ್ಲ. ಇದಾಗ್ಯೂ ಕಿಂಗ್ ಕೊಹ್ಲಿ ಅಭಿಮಾನಿಗಳ ಅತಿರೇಕದಾಟಕ್ಕೆ ಬಾಲಿವುಡ್ ನಟ ಕಂಗಾಲಾಗಿರುವುದಂತು ನಿಜ.

ಫಿಲಿಪ್ಸ್ ಕಂಪೆನಿಗೆ ಬೈದಿದ್ದ ಅಭಿಮಾನಿಗಳು:

ಚಾಂಪಿಯನ್ಸ್ ಟ್ರೋಫಿ ಪಂದ್ಯದ ವೇಳೆ ವಿರಾಟ್ ಕೊಹ್ಲಿಯ ಕ್ಯಾಚ್ ಹಿಡಿದಿದ್ದ ನ್ಯೂಝಿಲೆಂಡ್​ನ ಗ್ಲೆನ್ ಫಿಲಿಪ್ಸ್​ಗೆ ಬೈಯ್ಯುವ ಭರದಲ್ಲಿ ಕೊಹ್ಲಿ ಫ್ಯಾನ್ಸ್ ಫಿಲಿಪ್ಸ್ ಕಂಪೆನಿಯನ್ನು ಟಾರ್ಗೆಟ್ ಮಾಡಿದ್ದರು.

ಇದನ್ನೂ ಓದಿ: IPL 2025: ಹೀನಾಯ ಅತ್ಯಂತ ಹೀನಾಯ ದಾಖಲೆ ಬರೆದ RCB

ಅಂದು ಸಹ ಗ್ಲೆನ್ ಫಿಲಿಪ್ಸ್ ಸೋಷಿಯಲ್ ಮೀಡಿಯಾ ಖಾತೆ ಯಾವುದೆಂದು ತಿಳಿಯದೇ ಫಿಲಿಪ್ಸ್ ಕಂಪೆನಿಯ ಪೋಸ್ಟ್​ಗಳಿಗೆ ವಿರಾಟ್ ಕೊಹ್ಲಿ ಅಭಿಮಾನಿಗಳು ಬೈಗುಗಳ ಸುರಿಮಳೆಗೈದಿದ್ದರು. ಇದೀಗ ಮತ್ತೊಮ್ಮೆ ಅರ್ಷದ್ ಖಾನ್ ಅವರನ್ನು ಗುರಿಯಾಗಿಸುವ ದಾಂಗುಡಿಯಲ್ಲಿ ವಿರಾಟ್ ಕೊಹ್ಲಿ ಅಭಿಮಾನಿಗಳಿಂದ ಬಾಲಿವುಡ್ ನಟ ಅರ್ಷದ್ ವಾರ್ಸಿ ಬೈಗುಳಗಳನ್ನು ತಿಂದಿದ್ದಾರೆ.

ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ