AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಭರ್ಜರಿ ಫೀಲ್ಡಿಂಗ್ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿದ ಕಿಂಗ್ ಕೊಹ್ಲಿ

Virat Kohli Fielding Video: ಟಿಮ್ ಡೇವಿಡ್ ಕ್ರೀಸ್​ನಲ್ಲಿದ್ದ ಕಾರಣ ಅಂತಿಮ ಓವರ್​ಗಳ ವೇಳೆ ಬಿಗ್ ಹಿಟ್ ಅನ್ನು ನಿರೀಕ್ಷಿಸಲಾಗಿತ್ತು. ಆದರೆ ಈ ವೇಳೆ ವಿರಾಟ್ ಕೊಹ್ಲಿ ಮಾಡಿದ ಅತ್ಯಾಧ್ಬುತ ಫೀಲ್ಡಿಂಗ್​ನಿಂದ ಟಿಮ್ ಡೇವಿಡ್ ಹೊರನಡೆಯಬೇಕಾಯಿತು.

VIDEO: ಭರ್ಜರಿ ಫೀಲ್ಡಿಂಗ್ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿದ ಕಿಂಗ್ ಕೊಹ್ಲಿ
Virat Kohli
TV9 Web
| Edited By: |

Updated on: Oct 17, 2022 | 3:54 PM

Share

T20 World Cup 2022: ಬ್ರಿಸ್ಬೇನ್​ನಲ್ಲಿ ನಡೆದ ಮೊದಲ ಅಭ್ಯಾಸದ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ (Team India) 6 ರನ್​ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿಗಳೆಂದರೆ ಮೊಹಮ್ಮದ್ ಶಮಿ (Mohammed Shami) ಹಾಗೂ ವಿರಾಟ್ ಕೊಹ್ಲಿ (Virat Kohli). ಇಲ್ಲಿ ಶಮಿ ಬೌಲಿಂಗ್ ಮೂಲಕ ಮಿಂಚಿದರೆ, ಕಿಂಗ್ ಕೊಹ್ಲಿ ಅದ್ಭುತ ಫೀಲ್ಡಿಂಗ್ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿದ್ದರು. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಆರೋನ್ ಫಿಂಚ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಕೆಎಲ್ ರಾಹುಲ್ ಟೀಮ್ ಇಂಡಿಯಾ ಭರ್ಜರಿ ಆರಂಭ ಒದಗಿಸಿದ್ದರು. ಒಂದೆಡೆ ರೋಹಿತ್ ಶರ್ಮಾ ರನ್​ ಖಾತೆ ತೆರೆಯುವ ಮೂಲಕ ಕೆಎಲ್​ಆರ್ ಅಬ್ಬರಿಸಲಾರಂಭಿಸಿದರು. ಪರಿಣಾಮ ಮೊದಲ ವಿಕೆಟ್​ಗೆ 78 ರನ್​ಗಳ ಜೊತೆಯಾಟ ಮೂಡಿಬಂತು.

ಈ ಹಂತದಲ್ಲಿ ರೋಹಿತ್ ಶರ್ಮಾ (15) ಔಟಾದರೆ, ಆ ಬಳಿಕ ಬಂದ ವಿರಾಟ್ ಕೊಹ್ಲಿ (19) ಹೆಚ್ಚು ಹೊತ್ತು ನಿಲ್ಲಲಿಲ್ಲ. ಇನ್ನು ಹಾರ್ದಿಕ್ ಪಾಂಡ್ಯ ಕೂಡ 2 ರನ್​​ಗಳಿಸಿ ಇನಿಂಗ್ಸ್​ ಅಂತ್ಯಗೊಳಿಸಿದ್ದರು. ಮತ್ತೊಂದೆಡೆ ಕೆಎಲ್ ರಾಹುಲ್ 33 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 6 ಫೋರ್​ನೊಂದಿಗೆ 57 ರನ್ ಬಾರಿಸಿ ಮಿಂಚಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯಕುಮಾರ್ ಯಾದವ್ 33 ಎಸೆತಗಳಲ್ಲಿ 6 ಪೋರ್ ಹಾಗೂ 1 ಸಿಕ್ಸ್​ನೊಂದಿಗೆ ಅರ್ಧಶತಕ ಬಾರಿಸಿದರು. ಪರಿಣಾಮ ಟೀಮ್ ಇಂಡಿಯಾ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 186 ರನ್​ ಕಲೆಹಾಕಿತು.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ವಿದೇಶಿ ತಂಡದ ಪರ ಆಡುತ್ತಿರುವ ಭಾರತೀಯ ಮೂಲದವರು ಯಾರೆಲ್ಲಾ ಗೊತ್ತಾ?
Image
T20 World Cup 2022 All Squad: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ
Image
T20 World Cup 2022: ಭಾರತ-ಪಾಕ್ ಅಲ್ಲ, ಈ ಬಾರಿ ಸೂರ್ಯ vs ರಿಜ್ವಾನ್..!
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಆಸ್ಟ್ರೇಲಿಯಾಗೆ ನಾಯಕ ಆರೋನ್ ಫಿಂಚ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು. ಆರಂಭದಿಂದಲೇ ಟೀಮ್ ಇಂಡಿಯಾ ಬೌಲರುಗಳನ್ನು ದಂಡಿಸಲಾರಂಭಿಸಿದ ಫಿಂಚ್ ಆಸ್ಟ್ರೇಲಿಯಾ ತಂಡಕ್ಕೆ ಗೆಲುವಿನ ಆಸೆ ಚಿಗುರಿಸಿದ್ದರು. ಆದರೆ ಮತ್ತೊಂದು ತುದಿಯಿಂದ ಫಿಂಚ್​ಗೆ ಉತ್ತಮ ಸಾಥ್ ದೊರಕಿರಲಿಲ್ಲ.

ಅದರಲ್ಲೂ ಮಧ್ಯಮ ಕ್ರಮಾಂಕದಲ್ಲಿ ಸ್ಟೀವ್ ಸ್ಮಿತ್ (11), ಗ್ಲೆನ್ ಮ್ಯಾಕ್ಸ್​ವೆಲ್ (23), ಮಾರ್ಕಸ್ ಸ್ಟೊಯಿನಿಸ್ (7) ಕೈ ಕೊಟ್ಟಿದ್ದರು. ಪರಿಣಾಮ ಕೊನೆಯ 2 ಓವರ್​ಗಳಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಗೆಲ್ಲಲು 16 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆಯೂ ಆರೋನ್ ಫಿಂಚ್ ಕ್ರೀಸ್​ನಲ್ಲಿದ್ದರು. ಹೀಗಾಗಿ ಆಸೀಸ್ ತಂಡ ಗೆಲ್ಲುವ ವಿಶ್ವಾಸದಲ್ಲಿತ್ತು. ಆದರೆ ಮೊದಲ ಎಸೆತದಲ್ಲೇ ಫಿಂಚ್ (79) ವಿಕೆಟ್ ಕಬಳಿಸುವ ಮೂಲಕ ಹರ್ಷಲ್ ಪಟೇಲ್ ಯಶಸ್ಸು ತಂದುಕೊಟ್ಟರು.

ಇದಾಗ್ಯೂ ಟಿಮ್ ಡೇವಿಡ್ ಕ್ರೀಸ್​ನಲ್ಲಿದ್ದ ಕಾರಣ ಅಂತಿಮ ಓವರ್​ಗಳ ವೇಳೆ ಬಿಗ್ ಹಿಟ್ ಅನ್ನು ನಿರೀಕ್ಷಿಸಲಾಗಿತ್ತು. ಆದರೆ ಈ ವೇಳೆ ವಿರಾಟ್ ಕೊಹ್ಲಿ ಮಾಡಿದ ಅತ್ಯಾಧ್ಬುತ ಫೀಲ್ಡಿಂಗ್​ನಿಂದ ಟಿಮ್ ಡೇವಿಡ್ ಹೊರನಡೆಯಬೇಕಾಯಿತು. 19ನೇ ಓವರ್​ನ 2ನೇ ಎಸೆತದಲ್ಲಿ ಜೋಶ್ ಇಂಗ್ಲಿಸ್ ಫ್ರಂಟ್​ನಲ್ಲೇ ಬಾರಿಸಿ ಟಿಮ್ ಡೇವಿಡ್​ಗೆ ಸ್ಟ್ರೈಕ್ ನೀಡುವ ಯತ್ನ ಮಾಡಿದ್ದರು. ಆದರೆ ಅಲ್ಲೇ ಫೀಲ್ಡಿಂಗ್​ನಲ್ಲಿ ವಿರಾಟ್ ಕೊಹ್ಲಿ ಚಕ್ಕನೆ ಚೆಂಡನ್ನು ಹಿಡಿದು ವಿಕೆಟ್ ನೇರವಾಗಿ ಎಸೆಯುವ ಮೂಲಕ ಅದ್ಭುತ ರನೌಟ್ ಮಾಡಿದರು. ಈ ಮೂಲಕ ಟೀಮ್ ಇಂಡಿಯಾಗೆ ಮತ್ತೊಂದು ಯಶಸ್ಸು ತಂದುಕೊಟ್ಟರು.

ಅಂತಿಮವಾಗಿ ಆಸ್ಟ್ರೇಲಿಯಾ ತಂಡಕ್ಕೆ ಗೆಲ್ಲಲು 11 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ದಾಳಿಗಿಳಿದ ಮೊಹಮ್ಮದ್ ಶಮಿ ಅವರ ಮೊದಲೆರಡು ಎಸೆತಗಳಲ್ಲಿ ಪ್ಯಾಟ್ ಕಮಿನ್ಸ್​ ಎರೆಡೆರಡು ರನ್ ಓಡಿದರು. 3ನೇ ಎಸೆತದಲ್ಲಿ ಭರ್ಜರಿ ಹೊಡೆತ ಬಾರಿಸಿದ ಕಮಿನ್ಸ್ ಚೆಂಡು ಸಿಕ್ಸ್ ಆಗುವ ನಿರೀಕ್ಷೆಯಲ್ಲಿದ್ದರು.

ಆದರೆ ಲಾಂಗ್ ಆನ್​ನಲ್ಲಿ ಫೀಲ್ಡಿಂಗ್​ನಲ್ಲಿದ್ದ ವಿರಾಟ್ ಕೊಹ್ಲಿ ಅತ್ಯಾದ್ಭುತವಾಗಿ ಜಿಗಿಯುವ ಮೂಲಕ ಒಂದೇ ಕೈಯಲ್ಲಿ ಚೆಂಡನ್ನು ಹಿಡಿದರು. ಈ ಅಧ್ಭುತ ಕ್ಯಾಚ್ ಫಲವಾಗಿ ಆಸ್ಟ್ರೇಲಿಯಾದ ಸಿಕ್ಸ್ ಕೈತಪ್ಪಿತು. ಅಷ್ಟೇ ಅಲ್ಲದೆ ಡೇಂಜರಸ್ ಪ್ಯಾಟ್ ಕಮಿನ್ಸ್ ಕೂಡ ಔಟಾದರು. ಇದೀಗ ವಿರಾಟ್ ಕೊಹ್ಲಿಯ ಈ ಅತ್ಯಾಧ್ಭುತ ಫೀಲ್ಡಿಂಗ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಲ್ಲದೆ ಮೈದಾನದಲ್ಲಿ ಫೀಲ್ಡಿಂಗ್ ಮೂಲಕವೇ ಪರಾಕ್ರಮ ಮೆರೆದ ಕಿಂಗ್ ಕೊಹ್ಲಿಯ ಪ್ರದರ್ಶನಕ್ಕೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

Follow Us
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?