AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

South Africa vs India: ಟೀಮ್ ಇಂಡಿಯಾಕ್ಕೆ ಹೊಸ ಆಟಗಾರನ ಎಂಟ್ರಿ: 2ನೇ ಟೆಸ್ಟ್​ಗೆ ಭಾರತದ ಸಂಭಾವ್ಯ ಪ್ಲೇಯಿಂಗ್ XI ಇಲ್ಲಿದೆ

India Predicted Playing 11 For 2nd Test vs South Africa: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಫಾರ್ಮ್​ನಲ್ಲಿ ಇಲ್ಲದ ಟೀಮ್ ಇಂಡಿಯಾ ಆಟಗಾರರನ್ನು ಕೈಬಿಡುವ ಸಾಧ್ಯತೆ ಇದೆ. ಸದ್ಯ ಎರಡನೇ ಟೆಸ್ಟ್​ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಅನ್ನು ನೋಡುವುದಾದರೆ...

South Africa vs India: ಟೀಮ್ ಇಂಡಿಯಾಕ್ಕೆ ಹೊಸ ಆಟಗಾರನ ಎಂಟ್ರಿ: 2ನೇ ಟೆಸ್ಟ್​ಗೆ ಭಾರತದ ಸಂಭಾವ್ಯ ಪ್ಲೇಯಿಂಗ್ XI ಇಲ್ಲಿದೆ
India Playing XI 2nd Test vs SA
TV9 Web
| Updated By: Vinay Bhat|

Updated on: Jan 02, 2022 | 11:14 AM

Share

ಸೌತ್ ಆಫ್ರಿಕಾ (South Africa) ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಐತಿಹಾಸಿಕ ಗೆಲುವು ಸಾಧಿಸಿ ವಿಶ್ವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ (Indian Cricket Team) ಸದ್ಯ ಎರಡನೇ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದೆ. ಸೋಮವಾರದಿಂದ ಜೋಹನ್ಸ್‌ ಬರ್ಗ್​​ನ ವಂಡರರ್ಸ್‌ ಸ್ಟೇಡಿಯಂನಲ್ಲಿ (Johannesburg, Wanderers) ದ್ವಿತೀಯ ಟೆಸ್ಟ್ ಪಂದ್ಯ ಶುರುವಾಗಲಿದೆ. ಈಗಾಗಲೇ ಜೋಹನ್ಸ್‌ ಬರ್ಗ್ ತಲುಪಿರುವ ವಿರಾಟ್ ಕೊಹ್ಲಿ (Virat Kohli) ಪಡೆ ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ. ಹರಿಣಗಳ ನಾಡಲ್ಲಿ ಇದುವರೆಗೆ ಒಂದೇ ಒಂದು ಟೆಸ್ಟ್ ಸರಣಿ ಗೆಲ್ಲದ ಭಾರತಕ್ಕೆ ಇದು ಮಹತ್ವದ ಪಂದ್ಯವಾಗಿದ್ದು, ಈ ಎರಡನೇ ಪಂದ್ಯದಲ್ಲಿ ಜಯ ಸಾಧಿಸಿದರೆ ಇತಿಹಾಸ ನಿರ್ಮಾಣವಾಗಲಿದೆ. ಹೀಗಾಗಿ ಬಲಿಷ್ಠ ತಂಡವನ್ನು ಕಣಕ್ಕಿಳಿಸಲು ಭಾರತ ಯೋಚಿಸಿದೆ. ಫಾರ್ಮ್​ನಲ್ಲಿ ಇಲ್ಲದವರನ್ನು ಕೈಬಿಡುವ ಸಾಧ್ಯತೆ ಕೂಡ ಇದೆ. ಸದ್ಯ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್​ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ (India Playing XI vs SA) ಅನ್ನು ನೋಡುವುದಾದರೆ…

ಮೊದಲ ಟೆಸ್ಟ್ ಪಂದ್ಯದಲ್ಲಿ ಉಪ ನಾಯಕ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಭರ್ಜರಿ ಆರಂಭ ಒದಗಿಸಿದ್ದರು. ಅದರಲ್ಲೂ ರಾಹುಲ್ ಆಕರ್ಷಕ ಶತಕ ಸಿಡಿಸಿ ಅಬ್ಬರಿಸಿದ್ದರು. ಹೀಗಾಗಿ ಈ ಜೋಡಿ ಇನ್ನಿಂಗ್ಸ್ ಆರಂಭಿಸುವುದು ಖಚಿತ. ಮೂರನೇ ಕ್ರಮಾಂಕದ್ದೇ ಟೀಮ್ ಇಂಡಿಯಾಕ್ಕೆ ದೊಡ್ಡ ತಲೆನೋವಾಗಿದೆ. ಅನೇಕ ಪಂದ್ಯಗಳಿಂದ ಸತತ ಅವಕಾಶ ನೀಡುತ್ತಿದ್ದರೂ ಚೇತೇಶ್ವರ್ ಪೂಜಾರ ಎಲ್ಲ ನಿರೀಕ್ಷೆಯನ್ನು ಹುಸಿ ಮಾಡಿದ್ದಾರೆ. ಅತ್ಯಂತ ಕಳಪೆ ಫಾರ್ಮ್​ನಲ್ಲಿರುವ ಪೂಜಾರ ಸ್ಥಾನ ಈಗ ತೂಗುಯ್ಯಾಲೆಯಲ್ಲಿದೆ.

ಫಾರ್ಮ್​ ಸಮಸ್ಯೆ ಎದುರಿಸುತ್ತಿರುವ ಪೂಜಾರ ಎರಡನೇ ಟೆಸ್ಟ್​ನಲ್ಲಿ ಅವಕಾಶ ಪಡೆಯುವುದು ಅನುಮಾನ. ಹೀಗಾಗಿ ಇವರ ಬದಲು ಹೊಸ ಬ್ಯಾಟರ್ ಪ್ರಿಯಾಂಕ್ ಪಂಚಲ್​ಗೆ ಅವಕಾಶ ನೀಡಬಹುದು. ಇಂಜುರಿಗೆ ತುತ್ತಾದ ರೋಹಿತ್ ಶರ್ಮಾ ಟೆಸ್ಟ್ ಸರಣಿಯಿಂದ ಹೊರಬಿದ್ದ ಕಾರಣ ಪ್ರಿಯಾಂಕ್ ಭಾರತ ತಂಡಕ್ಕೆ ಆಯ್ಕೆಯಾಗಿದ್ದರು. ಇವರು ಎರಡನೇ ಟೆಸ್ಟ್​ನಲ್ಲಿ ಪದಾರ್ಪಣೆ ಮಾಡುವ ಸಾಧ್ಯತೆ ಹೆಚ್ಚಿದೆ. ಉಳಿದಂತೆ ನಾಲ್ಕನೇ ಕ್ರಮಾಂಕದಲ್ಲಿ ನಾಯಕ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ.

ಅಜಿಂಕ್ಯಾ ರಹಾನೆ ನಿರೀಕ್ಷೆ ಮೂಡಿಸಿದ್ದು ಮತ್ತೊಂದು ಅವಕಾಶ ಪಡೆಯಬಹುದು. ವಿಕೆಟ್ ಕೀಪರ್ ಜವಾಬ್ದಾರಿ ರಿಷಭ್ ಪಂತ್ ವಹಿಸಲಿದ್ದಾರೆ. ರವಿಚಂದ್ರನ್ ಅಶ್ವಿನ್ ಮತ್ತು ಶಾರ್ದೂಲ್ ಥಾಕೂರ್ ಆಲ್ರೌಂಡರ್​ಗಳಾಗಿದ್ದಾರೆ. ಮೊದಲನೇ ಪಂದ್ಯದಲ್ಲಿ 18 ವಿಕೆಟ್‌ಗಳನ್ನು ಕಬಳಿಸಿದ್ದ ಟೀಮ್‌ ಇಂಡಿಯಾ ವೇಗದ ಬೌಲಿಂಗ್‌ ವಿಭಾಗ ಅದ್ಭುತವಾಗಿದ್ದು, ಎರಡನೇ ಟೆಸ್ಟ್‌ ಪಂದ್ಯದಲ್ಲಿಯೂ ಅದೇ ಪ್ರದರ್ಶನ ತೋರಲು ಎದುರು ನೋಡುತ್ತಿದೆ. ವೇಗಿಗಳಾಗಿ ಮೊಹಮ್ಮದ್ ಶಮಿ, ಜಸ್​ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಇರಲಿದ್ದಾರೆ.

ವಂಡರ್‌ ಆಫ್ ಕ್ರಿಕೆಟ್‌ ಎನಿಸಿರುವ ಜೋಹನ್ಸ್‌ಬರ್ಗ್‌ನ ವಾಂಡರರ್ ಸ್ಟೇಡಿಯಂ ಭಾರತದ ಪಾಲಿನ ಅದೃಷ್ಟದ ತಾಣ. 1992ರಿಂದ ಇದುವರೆಗೆ ಭಾರತ ತಂಡ ವಂಡರರ್ಸ್‌ನಲ್ಲಿ 5 ಟೆಸ್ಟ್ ಆಡಿದ್ದು, ಒಂದರಲ್ಲೂ ಸೋತಿಲ್ಲ. 2 ಗೆಲುವು ದಾಖಲಿಸಿರುವ ಭಾರತ ತಂಡ, 3 ರಲ್ಲಿ ಡ್ರಾ ಸಾಧಿಸಿದೆ. ಹೀಗಾಗಿ ಜೊಹಾನ್ಸ್‌ಬರ್ಗ್ ಭಾರತ ತಂಡಕ್ಕೆ ವಿದೇಶದ ತವರು ಮೈದಾನದಂತಿದೆ. ದಕ್ಷಿಣ ಆಫ್ರಿಕಾ ಇಲ್ಲಿ ಆಡಿದ 42 ಟೆಸ್ಟ್‌ ಗಳಲ್ಲಿ 18 ಜಯ ಸಾಧಿಸಿದರೂ ಭಾರತವನ್ನು ಇನ್ನೂ ಸೋಲಿಸಿಲ್ಲ ಎಂಬುದೊಂದು ಅಚ್ಚರಿ. ಜೊಹಾನ್ಸ್‌ಬರ್ಗ್‌ನಲ್ಲಿ ಅಜೇಯ ದಾಖಲೆಯನ್ನು ಹೊಂದಿರುವ ಟೀಮ್‌ ಇಂಡಿಯಾ ಇದನ್ನು ಮುಂದುವರಿಸುತ್ತಾ ಎಂಬುದು ನೋಡಬೇಕಿದೆ.

ಭಾರತದ ಸಂಭಾವ್ಯ ಪ್ಲೇಯಿಂಗ್ XI: ಕೆಎಲ್ ರಾಹುಲ್ (ಉಪ ನಾಯಕ), ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ/ ಪ್ರಿಯಾಂಕ್ ಪಂಚಲ್, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್‌ಪ್ರಿತ್‌ ಬುಮ್ರಾ, ಮೊಹಮ್ಮದ್ ಸಿರಾಜ್.

South Africa vs India: ಭಾರತ- ದಕ್ಷಿಣ ಆಫ್ರಿಕಾ 2ನೇ ಟೆಸ್ಟ್ ಯಾವಾಗ?, ಎಲ್ಲಿ?, ಎಷ್ಟು ಗಂಟೆಗೆ ಆರಂಭ?: ಇಲ್ಲಿದೆ ಮಾಹಿತಿ

South Africa vs India: ನ್ಯೂ ಇಯರ್ ಪಾರ್ಟಿ ಆಯ್ತು ಇದೀಗ ಪ್ರ್ಯಾಕ್ಟೀಸ್ ಸೆಷನ್: ನೆಟ್​ನಲ್ಲಿ ಕೊಹ್ಲಿ ಹುಡುಗರ ಭರ್ಜರಿ ಅಭ್ಯಾಸ

(Virat Kohli India possible playing 11 for the 2nd Test against South Africa at Johannesburg)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ