AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಗೊಂಡ ವಿರಾಟ್ ಕೊಹ್ಲಿ; ಅಫ್ಘಾನಿಸ್ತಾನದ ವಿರುದ್ಧದ ಏಕದಿನ ಸರಣಿಯಿಂದ ಔಟ್

ವಿರಾಟ್ ಕೊಹ್ಲಿ ಗಾಯದ ಕಾರಣ ಅಫ್ಘಾನಿಸ್ತಾನ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಈ ಬಾರಿಯ ಐಪಿಎಲ್ ಫೈನಲ್ ವೇಳೆ ಅವರ ಬ್ಯಾಟ್​ನಿಂದ 75 ರನ್​​ಗಳು ಬಂದಿದ್ದವು. ಕಾಲಿನಲ್ಲಿ ಉಂಟಾದ ಸಮಸ್ಯೆ ಅವರ ಆಟದ ಮೇಲೆ ನೇರ ಪರಿಣಾಮ ಬೀಳುತ್ತಾ ಇತ್ತು. ಅವರು ಗಾಯದ ಮಧ್ಯೆಯೂ ಆಟ ಮುಂದುವರಿಸಿದ್ದರು.

ಗಾಯಗೊಂಡ ವಿರಾಟ್ ಕೊಹ್ಲಿ; ಅಫ್ಘಾನಿಸ್ತಾನದ ವಿರುದ್ಧದ ಏಕದಿನ ಸರಣಿಯಿಂದ ಔಟ್
ವಿರಾಟ್
ರಾಜೇಶ್ ದುಗ್ಗುಮನೆ
|

Updated on: Jun 04, 2026 | 12:00 PM

Share

ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಈಗಾಗಲೇ ಟೆಸ್ಟ್ ಹಾಗೂ ಟಿ20 ಮಾದರಿಯ ಕ್ರಿಕೆಟ್​​ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಐಪಿಎಲ್ ಹೊರತುಪಡಿಸಿ ಅವರ ಆಟ ನೋಡ ಸಿಗೋದು ಏಕದಿನ ಪಂದ್ಯಗಳಲ್ಲಿ ಮಾತ್ರ. ಅವರು ಅಪ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಡಬೇಕಿತ್ತು. ಆದರೆ, ಸ್ನಾಯು ಸೆಳೆತದ ಕಾರಣದಿಂದ ಈ ಸರಣಿಯಿಂದ ಹೊರ ನಡೆದಿದ್ದು, ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಅಪ್ಘಾನಿಸ್ತಾನ ತಂಡ ಭಾರತಕ್ಕೆ ಆಗಮಿಸುತ್ತಿದ್ದು, ಜೂನ್ 6-10ರವರೆಗೆ ಒಂದು ಟೆಸ್ಟ್ ಪಂದ್ಯ ಆಡಲಿದೆ. ಜೂನ್ 13ರಿಂದ ಮೂರು ಏಕದಿನ ಸರಣಿಗಳು ನಡೆಯಲಿವೆ. ಆದರೆ, ಇಂಜೂರಿ ಕಾರಣದಿಂದ ಕೊಹ್ಲಿ ಅವರು ಈ ಸರಣಿಯಿಂದ ಹೊರಗುಳಿಯಬೇಕಾದ ಪರಿಸ್ಥಿತಿ ಇದೆ. ಇನ್ನು, ಹಿರಿಯ ಆಟಗಾರ ರೋಹಿತ್ ಶರ್ಮಾ ಅವರ ಇರುವಿಕೆ ಕೂಡ ಖಾತ್ರಿ ಆಗಿಲ್ಲ. ಐಪಿಎಲ್ ಸಂದರ್ಭದಲ್ಲಿ ಅವರೂ ಗಾಯಕ್ಕೆ ಒಳಗಾಗಿ, ಕೆಲವು ಪಂದ್ಯಗಳಲ್ಲಿ ವಿಶ್ರಾಂತಿ ಪಡೆದಿದ್ದರು. ಇಬ್ಬರು ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಅಪ್ಘಾನಿಸ್ತಾನದ ವಿರುದ್ಧ ಕಣಕ್ಕೆ ಇಳಿಯಬೇಕಿದೆ.

ವಿರಾಟ್ ಕೊಹ್ಲಿ ಅವರು ಗಾಯದ ಕಾರಣ ನೀಡಿ ಪಂದ್ಯಗಳಿಂದ ಹೊರಗೆ ಉಳಿದಿದ್ದು ತುಂಬಾನೇ ಕಡಿಮೆ. ಈ ಬಾರಿಯ ಐಪಿಎಲ್ ಫೈನಲ್ ವೇಳೆ ಅವರ ಬ್ಯಾಟ್​ನಿಂದ 75 ರನ್​​ಗಳು ಬಂದಿದ್ದವು. ಕಾಲಿನಲ್ಲಿ ಉಂಟಾದ ಸಮಸ್ಯೆ ಅವರ ಆಟದ ಮೇಲೆ ನೇರ ಪರಿಣಾಮ ಬೀಳುತ್ತಾ ಇತ್ತು. ಅವರು ಗಾಯದ ಮಧ್ಯೆಯೂ ಆಟ ಮುಂದುವರಿಸಿದ್ದರು. ಈಗ ಗಾಯದಿಂದ ಸಂಪೂರ್ಣವಾಗಿ ಗುಣಮುಖರಾಗದ ಕಾರಣ ಅವರು ಈ ಸರಣಿಯಿಂದ ಹೊರಗುಳಿಯಬೇಕಾದ ಪರಿಸ್ಥಿತಿ ಬಂದಿದೆ.

ಇದನ್ನೂ ಓದಿ: ಆರ್‌ಸಿಬಿಗೆ ಬರ್ತಾರೆ ಪಾಂಡ್ಯ? ದಿನೇಶ್ ಕಾರ್ತಿಕ್ ಜೊತೆಗಿನ ಫೋಟೋದ ಅಸಲಿ ಕಥೆಯೇ ಬೇರೆ ಆರ್​​ಸಿಬಿ ಸತತ ಎರಡನೇ ಬಾರಿ ಕಪ್ ಗೆದ್ದ ಬಳಿಕ ವಿರಾಟ್ ಕೊಹ್ಲಿ ಅವರು ಪತ್ನಿ ಅನುಷ್ಕಾ ಶರ್ಮಾ ಜೊತೆ ಸೇರಿ ಮಥುರಾ ಮತ್ತು ಬೃಂದಾವನದ ಪ್ರಸಿದ್ಧ ಸಂತ ಪ್ರೇಮಾನಂದ್ ಗುರೂಜಿ ಅವರ ಆಶ್ರಮಕ್ಕೆ ಭೇಟಿ ನೀಡಿದ್ದರು. ದೀರ್ಘ ಹಾಗೂ ಒತ್ತಡದ ಕ್ರಿಕೆಟ್ ಸೀಸನ್ ಮುಗಿದ ನಂತರ, ಮನಸ್ಸಿನ ಶಾಂತಿ ಮತ್ತು ಧನ್ಯತಾ ಭಾವದೊಂದಿಗೆ ಅವರು ಪತ್ನಿ ಅನುಷ್ಕಾ ಶರ್ಮಾ ಜೊತೆಗೂಡಿ ಪ್ರಸಿದ್ಧ ಆಶ್ರಮಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಹೆಚ್ಚಿನ ಕ್ರೀಡಾ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ