AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಟಿ20 ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ವಿರಾಟ್ ಕೊಹ್ಲಿ: ಈವರೆಗೆ ಯಾರೂ ಮಾಡಿರದ ಸಾಧನೆ

RCB vs SRH, IPL 2025: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಇನ್ನೂ 67 ರನ್ ಗಳಿಸುವಲ್ಲಿ ಯಶಸ್ವಿಯಾದರೆ, ಟಿ20 ಕ್ರಿಕೆಟ್ ಇತಿಹಾಸದಲ್ಲಿ ಒಂದೇ ತಂಡದ ಪರ ಆಡುವಾಗ 9000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

Virat Kohli: ಟಿ20 ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ವಿರಾಟ್ ಕೊಹ್ಲಿ: ಈವರೆಗೆ ಯಾರೂ ಮಾಡಿರದ ಸಾಧನೆ
Virat Kohli (15)
Vinay Bhat
|

Updated on: May 23, 2025 | 1:12 PM

Share

ಬೆಂಗಳೂರು (ಮೇ. 23): ಇಂಡಿಯನ್ ಪ್ರೀಮಿಯರ್ ಲೀಗ್ 2025 ರಲ್ಲಿ (Indian Premier League) ವಿರಾಟ್ ಕೊಹ್ಲಿ ಬ್ಯಾಟ್ ಜೋರಾಗಿ ಸದ್ದು ಮಾಡುತ್ತಿದೆ. ಈವರೆಗೆ ಇವರು 11 ಇನ್ನಿಂಗ್ಸ್‌ಗಳಲ್ಲಿ 63.13 ಸರಾಸರಿಯಲ್ಲಿ 505 ರನ್ ಗಳಿಸಿದ್ದಾರೆ. ಕೊಹ್ಲಿಯ ಈ ಅದ್ಭುತ ಪ್ರದರ್ಶನದ ಆಧಾರದ ಮೇಲೆ, ಆರ್‌ಸಿಬಿ ತಂಡವು ಈಗಾಗಲೇ ಪ್ಲೇಆಫ್‌ಗೆ ಅರ್ಹತೆ ಪಡೆದಿದೆ. ಸದ್ಯ ಆರ್​ಸಿಬಿ ಗಮನವು ಋತುವಿನ ಉಳಿದ 2 ಲೀಗ್ ಪಂದ್ಯಗಳನ್ನು ಗೆಲ್ಲುವ ಮೂಲಕ ಅಗ್ರ -2 ರಲ್ಲಿ ಸ್ಥಾನ ಪಡೆಯುವತ್ತ ಸಾಗುತ್ತಿದೆ. ಆರ್‌ಸಿಬಿ ತನ್ನ ಮುಂದಿನ ಪಂದ್ಯವನ್ನು ಮೇ 23 ರಂದು ಅಂದರೆ ಇಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆಡಬೇಕಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆ ನಿರ್ಮಿಸುವ ಅವಕಾಶವನ್ನು ಹೊಂದಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಲು ಕೊಹ್ಲಿಗೆ ಕೇವಲ 67 ರನ್‌ಗಳ ಅವಶ್ಯಕತೆಯಿದೆ

ವಿರಾಟ್ ಕೊಹ್ಲಿ 2008 ರಿಂದ ಆರ್‌ಸಿಬಿ ಪರ ಆಡುತ್ತಿದ್ದಾರೆ, ಇದರಲ್ಲಿ ಅವರು ಐಪಿಎಲ್ ಹೊರತುಪಡಿಸಿ ಚಾಂಪಿಯನ್ಸ್ ಲೀಗ್‌ನಲ್ಲಿ ಕೂಡ ತಂಡಕ್ಕಾಗಿ ಆಡಿದ್ದಾರೆ. ಆರ್‌ಸಿಬಿ ಪರ ಕೊಹ್ಲಿ 278 ಟಿ20 ಪಂದ್ಯಗಳನ್ನು ಆಡಿದ್ದು, 39.52 ಸರಾಸರಿಯಲ್ಲಿ 8933 ರನ್ ಗಳಿಸಿದ್ದಾರೆ. ಕೊಹ್ಲಿ ಬ್ಯಾಟ್‌ನಿಂದ 8 ಶತಕಗಳು ಮತ್ತು 64 ಅರ್ಧಶತಕ ಇನ್ನಿಂಗ್ಸ್‌ಗಳು ದಾಖಲಾಗಿವೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಇನ್ನೂ 67 ರನ್ ಗಳಿಸುವಲ್ಲಿ ಯಶಸ್ವಿಯಾದರೆ, ಟಿ20 ಕ್ರಿಕೆಟ್ ಇತಿಹಾಸದಲ್ಲಿ ಒಂದೇ ತಂಡದ ಪರ ಆಡುವಾಗ 9000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಕೊಹ್ಲಿ ದಾಖಲೆ

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಕೊಹ್ಲಿ ಅವರ ದಾಖಲೆಯನ್ನು ನೋಡಿದರೆ, ಅವರು 23 ಪಂದ್ಯಗಳಲ್ಲಿ 36.29 ಸರಾಸರಿಯಲ್ಲಿ 762 ರನ್ ಗಳಿಸಿದ್ದಾರೆ, ಇದರಲ್ಲಿ ಒಂದು ಶತಕ ಮತ್ತು ಐದು ಅರ್ಧಶತಕ ಇನ್ನಿಂಗ್ಸ್‌ಗಳು ಸೇರಿವೆ. ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಕೊಹ್ಲಿ ಪ್ರಸ್ತುತ ಸಂಜು ಸ್ಯಾಮ್ಸನ್ ನಂತರ ಎರಡನೇ ಸ್ಥಾನದಲ್ಲಿದ್ದಾರೆ. ಹೈದರಾಬಾದ್ ವಿರುದ್ಧ ಸ್ಯಾಮ್ಸನ್ ಒಟ್ಟು 867 ರನ್ ಗಳಿಸಿದ್ದಾರೆ.

ಇದನ್ನೂ ಓದಿ
Image
ಲಕ್ನೋ ವಿರುದ್ಧ ಸೋತರೂ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡ ಶುಭ್​ಮನ್ ಗಿಲ್
Image
RCB vs SRH: ಇಂದಿನ ಹೈವೋಲ್ಟೇಜ್ ಪಂದ್ಯಕ್ಕೆ ಮಳೆಯ ಕಾಟ ಇದೆಯೇ?
Image
ಆರ್​ಸಿಬಿಗೆ ಡಬಲ್ ಖುಷ್: ಈ ಆಟಗಾರ ಕೂಡ ಫಿಟ್, ಇಂದು ಕಣಕ್ಕೆ
Image
ಲಕ್ನೋ ವಿರುದ್ಧ 33 ರನ್​​ಗಳಿಂದ ಸೋತ ಗುಜರಾತ್

RCB vs SRH Weather Report: ಐಪಿಎಲ್​ನಲ್ಲಿಂದು ಆರ್​ಸಿಬಿ-ಎಸ್ಆರ್​ಹೆಚ್ ಮುಖಾಮುಖಿ: ಹೈವೋಲ್ಟೇಜ್ ಪಂದ್ಯಕ್ಕೆ ಮಳೆಯ ಕಾಟ ಇದೆಯೇ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಲೀಗ್ ಹಂತದಲ್ಲಿ 2-2 ಪಂದ್ಯಗಳನ್ನು ಬಾಕಿ ಉಳಿಸಿಕೊಂಡಿವೆ. ಈ ಎರಡೂ ತಂಡಗಳು ತಮ್ಮ ಉಳಿದ ಪಂದ್ಯಗಳನ್ನು ಗೆದ್ದರೆ, 21-21 ಅಂಕಗಳೊಂದಿಗೆ ಲೀಗ್ ಹಂತವನ್ನು ಮುಗಿಸಬಹುದು. ಅಂದರೆ ಈ ಎರಡೂ ತಂಡಗಳು ಅಗ್ರ -2 ರಲ್ಲಿ ಉಳಿಯುತ್ತವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಉಳಿದ ಎರಡು ಪಂದ್ಯಗಳನ್ನು ಹೈದರಾಬಾದ್ ಮತ್ತು ಲಕ್ನೋ ತಂಡಗಳ ವಿರುದ್ಧ ಆಡಬೇಕಾಗಿದೆ. ಅತ್ತ ಪಂಜಾಬ್ ದೆಹಲಿ ಮತ್ತು ಮುಂಬೈ ತಂಡಗಳನ್ನು ಎದುರಿಸಬೇಕಾಗಿದೆ. ಮತ್ತೊಂದೆಡೆ, ಮುಂಬೈ ತಂಡವು ಗರಿಷ್ಠ 18 ಅಂಕಗಳನ್ನು ಮಾತ್ರ ತಲುಪಬಹುದು. ಟಾಪ್​ನಲ್ಲಿ ಆರ್​ಸಿಬಿ ಉಳಿದುಕೊಂಡರೆ ಫೈನಲ್​ಗೇರುವ ಸಾಧ್ಯತೆ ಹೆಚ್ಚಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ